ನಾಲ್ಕು ವರ್ಷ ಧರಣಿ ನಡೆಸಿದ್ರೂ ದೊರಕಿಲ್ಲ ನ್ಯಾಯ
ಪರಿಹಾರದ ನಿರೀಕ್ಷೆಯಲ್ಲೇ ಹತ್ತಾರು ರೈತರ ಸಾವು
Team Udayavani, Jul 21, 2019, 12:47 PM IST
ಸೇಡಂ: ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಎದುರು ರಾಜಶ್ರೀ ಸಿಮೆಂಟ್ ಕಾರ್ಖಾನೆ ವಿರುದ್ಧ ನಿರಂತರ ಧರಣಿ ನಡೆಸುತ್ತಿರುವ ರೈತರು.
ಸೇಡಂ: ತಾಲೂಕಿನ ಮಳಖೇಡ ಗ್ರಾಮದಲ್ಲಿರುವ ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆ ಮೋಸ ಮಾಡಿದೆ ಎಂದು ಆರೋಪಿಸಿ ಹಂಗನಹಳ್ಳಿ ಮತ್ತು ನೃಪತುಂಗ ನಗರದ ರೈತರು ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ಶನಿವಾರಕ್ಕೆ ನಾಲ್ಕು ವರ್ಷ ಪೂರೈಸಿದೆ.
ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಎದುರು ಕಾರ್ಮಿಕ ಖಾತೆ ಮಾಜಿ ಸಚಿವ ಎಸ್.ಕೆ. ಕಾಂತಾ ನೇತೃತ್ವದಲ್ಲಿ ನಡೆಯುತ್ತಿರುವ ರೈತರ ಅನಿರ್ದಿಷ್ಟಾವಧಿ ಧರಣಿ ನಾಲ್ಕು ವರ್ಷ ಪೂರೈಸಿದರೂ ಪರಿಹಾರ ದೊರಕುವ ಯಾವ ಮುನ್ಸೂಚನೆಯೂ ಕಾಣುತ್ತಿಲ್ಲ.
ಕೇವಲ ಚುನಾವಣೆಗಳು ಬಂದಾಗ ಧರಣಿ ಸ್ಥಳಕ್ಕೆ ಬಂದು ಸಮಜಾಯಿಷಿ ನೀಡುತ್ತಿದ್ದ ರಾಜಕಾರಣಿಗಳು ನಂತರ ಒಮ್ಮೆಯೂ ಇತ್ತ ಸುಳಿದಿಲ್ಲ. ಹಗಲು-ರಾತ್ರಿ ಎನ್ನದೆ, ಬಿಸಿಲು, ಮಳೆ, ಚಳಿಯನ್ನು ಲೆಕ್ಕಿಸದೇ ರೈತರು ಧರಣಿ ಕುಳಿತ ಸ್ಥಳ ಬಿಟ್ಟು ಕದಲುತ್ತಿಲ್ಲ.
20 ಜುಲೈ 2015 ರಂದು ಪ್ರಾರಂಭವಾದ ಧರಣಿ ಇಂದಿಗೂ ಮುಂದುವರಿದಿದೆ. ಅನೇಕ ರೈತರು ಪರಿಹಾರದ ನಿರೀಕ್ಷೆಯಲ್ಲೇ ಮೃತಪಟ್ಟಿದ್ದಾರೆ. ಇಷ್ಟಾದರೂ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ. ಕೇವಲ ನಾಮಕೆವಾಸ್ತೇ ಎನ್ನುವಂತೆ ಅಧಿಕಾರಿಗಳ ಸಭೆ ಕರೆದು ಕೈ ತೊಳೆದುಕೊಳ್ಳುತ್ತಿದೆ ಎನ್ನುವುದು ರೈತರ ದೂರಾಗಿದೆ.
ರೈತರ ದೂರು: ಆರಂಭದಲ್ಲಿ ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಧರಣಿ ನಿರತರ ಸ್ಥಳಕ್ಕೆ ತೆರಳಿ ಚರ್ಚಿಸಿ, ಭರವಸೆ ನೀಡಿದ್ದರು. ತದನಂತರ ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ ಪರಿಣಾಮಕಾರಿಯಾಗಿ ಧ್ವನಿ ಎತ್ತುತ್ತಿಲ್ಲ ಎನ್ನುವುದು ರೈತರ ದೂರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!