ಅಕ್ರಮ ಮರಳಿಗೆ ಸಕ್ರಮ ಮುದ್ರೆ!

ಎತ್ತಿನ ಬಂಡಿಗಳಲ್ಲಿ ಮರಳು ಸಾಗಾಟ ಹಗಲಲ್ಲೇ ಲಾರಿಗಳ ಆರ್ಭಟ

Team Udayavani, Dec 28, 2019, 10:40 AM IST

28-December-2

ಸೇಡಂ: ಅಕ್ರಮ ನಿಷೇಧದ ನಡುವೆಯೂ ಎಗ್ಗಿಲ್ಲದೆ ಮರಳುಗಳ್ಳರ ಹಾವಳಿ ಪ್ರತಿನಿತ್ಯ ಹೆಚ್ಚುತ್ತಲೇ ಸಾಗಿದ್ದು, ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಹಿಂದೇಟು ಹಾಕುತ್ತಿದೆ.

ಪಟ್ಟಣದ ಕಮಲಾವತಿ, ಕಾಗಿಣಾ ಸೇರಿದಂತೆ ತಾಲೂಕಿನ ಬಿಬ್ಬಳ್ಳಿ, ರಂಜೋಳ, ಹಾಬಾಳ, ತೇಲ್ಕೂರ, ಸಿಂಧನಮಡು, ಕಾಚೂರ, ಮಳಖೇಡ, ಸಂಗಾವಿ ಒಳಗೊಂಡು ಅನೇಕ ಗ್ರಾಮಗಳಲ್ಲಿ ಅಕ್ರಮ ಮರಳುಗಾರಿಕೆ ರಾಜಾರೋಷವಾಗಿ ಸಾಗಿದೆ.

ಟ್ರ್ಯಾಕ್ಟರ್‌ಗಳಲ್ಲಿ ಮರಳು ಸಾಗಿಸುವಂತಿಲ್ಲ ಎನ್ನುವ ಸರ್ಕಾರದ ಕಟ್ಟುನಿಟ್ಟಿನ ಸೂಚನೆ ನಡುವೆಯೂ ರಂಜೋಳ ಮತ್ತು ಕೆಲ ಭಾಗಗಳಲ್ಲಿ ಟ್ರಾಕ್ಟರ್‌ಗಳ ಮೂಲಕ ಮರಳು ಸಾಗಾಟ ಮಾಡಿ, ಪ್ರಕೃತಿಗೆ ಮಡಿಲನ್ನು ಬಗೆಯಲಾಗುತ್ತಿದೆ. ಇದರಿಂದ ನದಿಗಳು ಬರಿದಾಗುತ್ತಿವೆ.

ಯಾದಗಿರಿ ಜಿಲ್ಲೆಯ ಶಹಾಪುರ, ಹತ್ತಿಕುಣಿ, ದೇವದುರ್ಗದಿಂದ ಪ್ರತಿನಿತ್ಯ ಹತ್ತಾರು ಟಿಪ್ಪರ್‌ ಗಳು ಮರಳು ತಂದು ಪಟ್ಟಣ ಸೇರಿದಂತೆ ಕಲಬುರಗಿಯಲ್ಲಿ ಸುರಿಯುತ್ತಿವೆ. ಹತ್ತರ ಪೈಕಿ ಎರಡು ಅಥವಾ ಮೂರು ಟಿಪ್ಪರ್‌ಗಳು ಸರ್ಕಾರಕ್ಕೆ ತುಂಬಿದ ರಾಯಧನ (ರಾಯಲ್ಟಿ) ಆಧಾರದ ಮೇಲೆ ಮರಳು ಸಾಗಿಸಿ, ಉಳಿದವನ್ನು ಅಧಿಕಾರಿಗಳು ಮತ್ತು ಸರ್ಕಾರದ ಕಣ್ಣಿಗೆ ಮಣ್ಣೆರೆಚಿ ಸಾಗಿಸಲಾಗುತ್ತಿದೆ.

ಬೇಕಾಬಿಟ್ಟಿ ದರ: ಮರಳಿಲ್ಲದೆ ಮನೆ ಕಟ್ಟಲಾಗದ ಪರಿಸ್ಥಿತಿಯಲ್ಲಿರುವ ಸಾರ್ವಜನಿಕರು ಅನಿವಾರ್ಯವಾಗಿ ಅಕ್ರಮ ಮರಳಿಗೆ ಮೊರೆ ಹೋಗುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಟಿಪ್ಪರ್‌ ಮತ್ತು ಟ್ರ್ಯಾಕ್ಟರ್‌ ಮಾಲೀಕರು ಮನಸೋ ಇಚ್ಛೆ ಹಣ ವಸೂಲಿ ಮಾಡುತ್ತಿದ್ದಾರೆ.

ಓವರ್‌ ಲೋಡ್‌: ಕಾನೂನು ಪ್ರಕಾರ ಸೂಚಿತ ಪ್ರಮಾಣದಲ್ಲಿ ಮಾತ್ರ ಮರಳು ಸಾಗಾಟ ಮಾಡಬೇಕು. ಹೆಚ್ಚುವರಿ ಮರಳು (ಓವರ್‌
ಲೋಡ್‌) ಸಾಗಿಸುವಂತಿಲ್ಲ. ಇದನ್ನು ಲೆಕ್ಕಿಸದೇ ಸಾಗಾಟ ನಡೆದಿದೆ.

ಬಂಡಿಯಲ್ಲಿ ಮರಳು ಸಾಗಾಟ: ಒಂದೆಡೆ ಟ್ರ್ಯಾಕ್ಟರ್‌, ಟಿಪ್ಪರ್‌ಗಳ ಹಾವಳಿ ಜಾಸ್ತಿಯಾದರೆ, ಇನ್ನೊಂದೆಡೆ ಕೃಷಿಗಾಗಿ ಬಳಸುವ ಒಂಟೆತ್ತಿನ ಬಂಡಿ, ಜೋಡೆತ್ತಿನ ಬಂಡಿಗಳ ಮೂಲಕವೂ ಮರಳು ಸಾಗಾಟ ದಂಧೆ ನಡೆದಿದೆ. ಟ್ರ್ಯಾಕ್ಟರ್‌ ಮತ್ತು ಟಿಪ್ಪರಗಳಿಗೆ ಸರ್ಕಾರ ನಿರ್ಬಂಧ ಹೇರಿದ್ದರೆ, ಇತ್ತ ಬಂಡಿಗಳ ಮೂಲಕವೂ ಮರಳು ಸಾಗಿಸಲಾಗುತ್ತಿದೆ. ಕೃಷಿಯನ್ನು ತೊರೆದ ಅನೇಕರು ಮರಳುಗಾರಿಕೆಯನ್ನೇ ತಮ್ಮ ವೃತ್ತಿ ಮಾಡಿಕೊಂಡಿದ್ದಾರೆ.

ತಗ್ಗುಗಳ ಬೀಡಾದ ನದಿ: ನದಿಗಳಲ್ಲಿ ಮರಳು ತೆಗೆಯುವುದರಿಂದ ತಗ್ಗುಗಳು ನಿರ್ಮಾಣವಾಗಿವೆ. ಕೆಲವೆಡೆ ನದಿಯಾಳದಲ್ಲಿ ದೊಡ್ಡ ಹೊಂಡಗಳು ನಿರ್ಮಾಣವಾಗಿ, ಈಜಾಡಲು ಹೋದವರ ಪ್ರಾಣಕ್ಕೆ ಸಂಚಕಾರ ತಂದ ಅನೇಕ ಉದಾಹರಣೆಗಳು ಇವೆ.

ಅಕ್ರಮ ಮರಳುಗಾರಿಕೆ ತಡೆಯಲು ತಂಡ ರಚಿಸಲಾಗಿದೆ. ಕೃಷಿ ಚಟುವಟಿಕೆಗೆ ಬಳಸುವ ಎತ್ತಿನ ಬಂಡಿಗಳಲ್ಲಿ ಮರಳು ಸಾಗಾಟ ಅವ್ಯಾಹತವಾಗಿದೆ. ಎಲ್ಲವನ್ನೂ ಗಮನಿಸುತ್ತಿದ್ದು, ಶೀಘ್ರವೇ ಇದಕ್ಕೆ ತಡೆ ಹಾಕಲಾಗುವುದು.
ಬಸವರಾಜ ಬೆಣ್ಣೆಶಿರೂರ್‌,
ತಹಶೀಲ್ದಾರ್‌

ನಿರ್ಬಂಧ ಹೇರಿದರೂ ಮರಳುಗಾರಿಕೆ ಸರಾಗವಾಗಿ ಸಾಗಿದೆ. ಹಗಲಲ್ಲೇ ಟ್ರ್ಯಾಕ್ಟರ್‌ ಗಳ ಮೂಲಕ ಮರಳು ಸಾಗಿಸಲಾಗುತ್ತಿದೆ. ಈ
ಕುರಿತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೈಕಟ್ಟಿ ಕುಳಿತಿದ್ದಾರೆ. ಇದೇ ರೀತಿ ಮುಂದುವರಿದಲ್ಲಿ ಮುಂದೆ ನದಿಗಳಲ್ಲಿ ನೀರು ಸಂಗ್ರಹ ದುಸ್ತರವಾಗಲಿದೆ.
ರಾಮಚಂದ್ರ ಗುತ್ತೇದಾರ,
ಮುಖಂಡ, ರಂಜೋಳ

 

„ಶಿವಕುಮಾರ ಬಿ. ನಿಡಗುಂದಾ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.