ಸೇಡಂನಲ್ಲಿ ಎಗ್ಗಿಲ್ಲದೆ ಸಾಗಿದೆ ಅಕ್ರಮ ಮರಳುಗಾರಿಕೆ
ನದಿಗಳ ಶಕ್ತಿ ಕುಂದುತ್ತಿದೆ
Team Udayavani, May 26, 2019, 11:38 AM IST
ಸೇಡಂ: ತಾಲೂಕಿನ ಕುಕ್ಕುಂದಾ ಬಳಿ ಮರಳು ಸಾಗಿಸಲು ಹೊರಟಿದ್ದ ಟ್ರ್ಯಾಕ್ಟರ್.
ಸೇಡಂ: ಅಕ್ರಮ ಮರಳುಗಾರಿಕೆ ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದರೂ ತಾಲೂಕಿನಲ್ಲಿ ಇನ್ನು ರಾಜಾರೋಷವಾಗಿ ನಡೆಯುತ್ತಿದೆ.
ಅಕ್ರಮ ತಡೆಯಲು ಸಕಾರ ಹಲವಾರು ಕಠಿಣ ನಿಯಮಗಳನ್ನು ಜಾರಿಗೆ ತಂದರೂ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ಸಾಗಿದೆ. ಟ್ರ್ಯಾಕ್ಟರ್ಗಳ ಮೂಲಕ ಮರಳುಗಾರಿಕೆ ಮಾಡುವಂತಿಲ್ಲ. ಆದರೂ ರಾತ್ರೋ ರಾತ್ರಿ 50 ರಿಂದ 80 ಟ್ರ್ಯಾಕ್ಟರ್ಗಳು ನದಿಯಿಂದ ಮರಳು ಹೊತ್ತು ಸಾಗಿಸುತ್ತಿವೆ.
ತಾಲೂಕಿನ ಕುಕ್ಕುಂದಾ, ಬಿಬ್ಬಳ್ಳಿ, ಮೀನಹಾಬಾಳ, ಮದರಾನಾಗಸನಪಲ್ಲಿ, ಮಳಖೇಡ, ಸಂಗಾವಿ, ರಂಜೋಳ, ಕುರಕುಂಟಾ ಹಾಗೂ ನದಿ ಪಾತ್ರದ ಅನೇಕ ಗ್ರಾಮಗಳಲ್ಲಿ ಅಕ್ರಮ ಮರಳುಗಾರಿಗೆ ನಡೆಯುತ್ತಿದೆ. ಅಲ್ಲದೇ ಯಾದಗಿರಿ, ಗುರುಮಠಕಲ್, ಹಂದರಕಿ ಮಾರ್ಗವಾಗಿ ಪ್ರತಿನಿತ್ಯ ಹತ್ತಾರು ಟಿಪ್ಪರ್ಗಳ ಮೂಲಕ ಮರಳು ಸೇಡಂ ತಲುಪುತ್ತಿದೆ.
ಪ್ರತಿನಿತ್ಯ ಲಕ್ಷಾಂತರ ರೂ. ಸರ್ಕಾರದ ಬೊಕ್ಕಸಕ್ಕೆ ಹಾನಿ ಉಂಟಾಗುತ್ತಿದ್ದರೂ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಕಣ್ಣೆದುರೇ ಅಕ್ರಮ ನಡೆಯುತ್ತಿದ್ದರೂ ಕ್ಯಾರೆ ಎನ್ನುತ್ತಿಲ್ಲ.
ಅಕ್ರಮ ಮರಳುಗಾರಿಕೆಯಿಂದ ನದಿಗಳು ತಮ್ಮ ಶಕ್ತಿ ಕಳೆದುಕೊಳ್ಳುತ್ತಿವೆ. ಬರುವ ದಿನಗಳಲ್ಲಿ ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಅಧಿಕಾರಿಗಳು ಎಚ್ಚೆತ್ತುಕೊಳ್ಳದೇ ಇದ್ದಲ್ಲಿ ಸಮಸ್ಯೆ ಕಟ್ಟಿಟ್ಟ ಬುತ್ತಿಯಾಗಿದೆ.
ಕೃಷಿ ಬಿಟ್ಟ ರೈತ: ಕೃಷಿ ಮೂಲಕ ಜೀವನ ಕಟ್ಟಿಕೊಂಡಿದ್ದ ರೈತರು ಹಣದ ಆಸೆಗೆ ಬಿದ್ದು ಗಳೆ ಹೊಡೆಯುವ ಎತ್ತುಗಳ ಮೂಲಕ ಬಂಡಿಗಳಲ್ಲಿ ಮರಳು ಸಾಗಾಟ ನಡೆಸಿದ್ದಾರೆ. ಪ್ರತಿನಿತ್ಯ ಮುಂಜಾವು ಮತ್ತು ಸಂಜೆ ಸಾಲುಗಟ್ಟಿ ನೂರಾರು ಎತ್ತಿನ ಬಂಡಿಗಳು ಮರಳಿನ ಚೀಲಗಳನ್ನು ಹೊತ್ತು ಪಟ್ಟಣದತ್ತ ಬರುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ.
ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ನಡೆದಿದೆ. ಈ ಕುರಿತು ಅನೇಕ ದೂರುಗಳು ಬಂದಿವೆ. ದೂರು ಬಂದಾಗಲೊಮ್ಮೆ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದೇನೆ. ರಾತ್ರಿ-ಹಗಲು ಎನ್ನದೆ ಮರಳುಗಳ್ಳರನ್ನು ಹಿಡಿಯಲು ಪ್ರಯತ್ನಿಸಿದ್ದೇನೆ. ಅವರ ಹಿಂದೆ ಬಿದ್ದು ನಮ್ಮ ಆರೋಗ್ಯ ಹಾಳಾಗಿದೆ. ಯಾರೂ ಸಿಗ್ತಿಲ್ಲ. ದೂರು ಬಂದ ತಕ್ಷಣ ಗ್ರಾಮ ಲೆಕ್ಕಿಗರ ತಂಡ ಕಳುಹಿಸಿದರೂ ಯಾರೂ ಸಿಗುತ್ತಿಲ್ಲ.
•ವೀರಮಲ್ಲಪ್ಪ ಪೂಜಾರ,
ಸಹಾಯಕ ಆಯುಕ್ತರು, ಸೇಡಂ
ಶಿವಕುಮಾರ ಬಿ. ನಿಡಗುಂದಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ