ಹಳೆ ವಿದ್ಯಾರ್ಥಿಗಳ ಪರಿವಾರ ಸಂಭ್ರಮ

ಪಾಟೀಲರು ಕಲ್ಯಾಣ ಭಾಗದ ಭಗೀರಥಮಮ್ಮಿ-ಡ್ಯಾಡಿ ಸಂಸ್ಕೃತಿಯಿಂದ ಹೊರಬನ್ನಿ

Team Udayavani, Dec 29, 2019, 10:50 AM IST

29-December-2

ಸೇಡಂ: ಹತ್ತಾರು ವರ್ಷಗಳಿಂದ ದೂರದ ತೀರಕ್ಕೆ ಜಾರಿದ್ದ ದೋಸ್ತಾನಾ. ಚಿಕ್ಕವರಿದ್ದಾಗ ಮಾಡಿದ ಕೀಟಲೆ, ಆಡಿದ ಆಟ, ನೋಡಿದ ವಾತಾವರಣ, ಹಳೆ ಶಿಕ್ಷಕರನ್ನು ಕಂಡು ಮನದಲ್ಲಿ ಮೂಡಿ ದ ಗೌರವ, ಎಲ್ಲವೂ ಒಂದು ಕ್ಷಣ ಕಣ್ಣ ಮುಂದೆ ಬಂದು ಹೋದ ಅನುಭವ.

ಈ ರೀತಿ ವಾತಾವರಣ ಕಂಡಿದ್ದು ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ತನ್ನ 50ನೇ ವರ್ಷದ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಶನಿವಾರ ನೃಪತುಂಗ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ “ಪರಿವಾರ ಸಂಭ್ರಮ’ ಕಾರ್ಯಕ್ರಮದಲ್ಲಿ. ಸಂಸ್ಥೆಯಲ್ಲಿ ಓದಿ ರಾಜ್ಯ, ಹೊರರಾಜ್ಯಗಳಲ್ಲಿ ವಿವಿಧ ಹುದ್ದೆ, ಸೇವಾ ಕಾರ್ಯದಲ್ಲಿ ತೊಡಗಿರುವ ಹಳೆ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನೆನಪಿನ ಕ್ಷಣಗಳನ್ನು ಪರಸ್ಪರ ಹಂಚಿಕೊಂಡರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಮಕ್ಕಳ ಹೃದ್ರೋಗ ತಜ್ಞೆ ಡಾ| ವಿಜಯಲಕ್ಷ್ಮೀ ಬಾಳೆಕುಂದ್ರಿ, ಕಾನ್ವೆಂಟ್‌ ಶಾಲೆಗಳಿಂದ ಹರಡುತ್ತಿರುವ ಮಮ್ಮಿ, ಡ್ಯಾಡಿ ಸಂಸ್ಕೃತಿ ಹೋಗಿ ಅಮ್ಮ ಸಂಸ್ಕೃತಿ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿ ಕಾರ್ಯ ಮಾಡುತ್ತಿದೆ ಎಂದರು.

ಮುಂಬೈ ವಿಶ್ವವಿದ್ಯಾಲಯದ ಮಾಸ್ಟರ್‌ ಇನ್‌ ಲೀಡರ್‌ಶಿಪ್‌ ಸೈನ್ಸ್‌ನ ಉಪ ನಿರ್ದೇಶಕ ರಾಧಾಕೃಷ್ಣ ಪಿಳ್ಳೆ ಮಾತನಾಡಿ, ಸಂಸ್ಕೃತಿ ಬೆಳೆಸಬೇಕಾದರೆ ಭಾಷೆಯ ಉಳಿವು ಅತ್ಯವಶ್ಯಕ. ಸಮಾಜದಲ್ಲಿರುವ ಸಮಸ್ಯೆಗಳನ್ನು ಪರಿಪೂರ್ಣವಾಗಿ ಸರ್ಕಾರಗಳು ಪೂರೈಸಲು ಸಾಧ್ಯವಿಲ್ಲ ಜನರೂ ಕೈಜೋಡಿಸಬೇಕು ಎಂದು ಹೇಳಿದರು.

ಸಮಿತಿ ಸಂರಕ್ಷಕ, ಮಾಜಿ ರಾಜ್ಯಸಭಾ ಸದಸ್ಯ ಡಾ| ಬಸವರಾಜ ಪಾಟೀಲ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಶ್ರೀ ಕೊತ್ತಲ ಬಸವೇಶ್ವರ ಸಂಸ್ಥಾನದ ಸದಾಶಿವ ಸ್ವಾಮೀಜಿ ಮಾತನಾಡಿದರು. ಸಂಸ್ಥೆ ಲಕೋಟೆ ಬಿಡುಗಡೆ: ಸಮಿತಿಯ ಅಂಚೆ ಲಕೋಟೆಯನ್ನು ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಬಿಡುಗಡೆಗೊಳಿಸಿದರು. ಮಾಜಿ ಶಾಸಕ ನಾಗರೆಡ್ಡಿ ಪಾಟೀಲ, ಪೂಜ್ಯ ಮಲ್ಲಿಕಾರ್ಜುನ ದೇವರು ಶಿವಮೊಗ್ಗ, ಅಂಚೆ ಇಲಾಖೆ ಹಿರಿಯ ಅಧಿಧೀಕ್ಷಕ ಬಿ.ಆರ್‌. ಮನಜಗಿ, ಬಿ.ಎಲ್‌. ಚಿತಕೋಟೆ ಇದ್ದರು.

ಜತೆಗೆ ಸಮಿತಿಯ ಕ್ಯಾಲೆಂಡರ್‌ ಲೋಕಾರ್ಪಣೆ ಮಾಡಲಾಯಿತು. ಅನುರಾಧಾ ಪಾಟೀಲ, ಆರತಿ ಕಡಗಂಚಿ ನಿರೂಪಿಸಿದರು, ಸಮಿತಿ ಕಾರ್ಯದರ್ಶಿ ಡಾ| ಉದಯಕುಮಾರ ಶಹಾ ಸ್ವಾಗತಿಸಿದರು, ಅನೀಲ ಮಾಲಪಾಣಿ ಪರಿಚಯಿಸಿದರು. ರೇಣುಕಾ ತಾಡೇಪಲ್ಲಿ ವೈಯಕ್ತಿಕ ಗೀತೆ ಹಾಡಿದರು. ಮಾತೃಛಾಯಾ ಶಾಲೆ ಮಕ್ಕಳು ಪ್ರಾರ್ಥಿಸಿದರು. ಡಾ| ಸದಾನಂದ ಬೂದಿ ವಂದಿಸಿದರು.

ಇಂದಿನ ಶಾಲೆಗಳು ಅಂಡಮಾನ್‌ ಜೈಲಿನಂತಾಗಿವೆ. ಶಿಕ್ಷಣ ವ್ಯಾಪಾರೀಕರಣವಾಗಿದೆ. ಕೆಲ ಶಾಲೆಗಳು ತಮ್ಮ ಬೋರ್ಡ್‌ಗಳಲ್ಲಿ ಶುದ್ಧ ಶಾಖಾಹಾರಿ ಊಟ ನೀಡುತ್ತೇವೆ ಎಂದು ಬರೆದುಕೊಳ್ಳುತ್ತಿದ್ದಾರೆ. ಡೈರಿ ಮಿಲ್ಕ್ ಚಾಕೋಲೆಟ್‌, ಬಿಸ್ಕೆಟ್‌ ಆಸೆ ತೋರಿಸಿ ಮಕ್ಕಳನ್ನು ಶಾಲೆಗೆ ಕರೆದೊಯ್ಯಲಾಗುತ್ತಿದೆ. ಮಕ್ಕಳು ಪಾಲಕರನ್ನು ಗೌರವಿಸಬೇಕಾದರೆ ಎಸ್ಸೆಸ್ಸೆಲ್ಸಿ ವರೆಗೆ ಕನ್ನಡದಲ್ಲೇ ಓದಿಸಿ.
ಪೂಜ್ಯ ಸದಾಶಿವ ಸ್ವಾಮೀಜಿ,
ಶ್ರೀ ಕೊತ್ತಲ ಬಸವೇಶ್ವರ ಸಂಸ್ಥಾನದ ಪೀಠಾಧಿಪತಿ

2025ಕ್ಕೆ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸ್ವರ್ಣ ಜಯಂತಿ ಪ್ರಯುಕ್ತ ನಡೆಯುವ ಮಹೋತ್ಸವ ದೇಶದಲ್ಲೇ ಅಲೌಕಿಕ ಕಾರ್ಯಕ್ರಮವಾಗಲಿದೆ. 200 ಎಕರೆ ಪ್ರದೇಶದಲ್ಲಿ ಸತತ ಒಂಭತ್ತು ದಿನಗಳ ಕಾಲ ಸಮಾರಂಭ ಜರುಗಲಿದ್ದು, 30 ಲಕ್ಷ ಜನ ಭಾಗಿಯಾಗಲಿದ್ದಾರೆ. 80 ಕೋಟಿ ಜನರ ಮೇಲೆ ಈ ಕಾರ್ಯಕ್ರಮ ಪರಿಣಾಮ ಬೀರಲಿದ್ದು, ವಿಶ್ವದ ಅನೇಕ ಮೂಲೆಗಳಿಂದ ಅಸಾಧಾರಣ ವ್ಯಕ್ತಿಗಳು ಆಗಮಿಸಲಿದ್ದಾರೆ.
ಡಾ| ಬಸವರಾಜ ಪಾಟೀಲ ಸೇಡಂ,
ರಾಜ್ಯಸಭೆ ಮಾಜಿ ಸದಸ್ಯರು

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.