ರಾಯರ ಮಠದಿಂದ ಭಕ್ತಿ ಕ್ರಾಂತಿ: ಸುಬುಧೇಂದ್ರ ಶ್ರೀ
Team Udayavani, Jun 10, 2019, 10:03 AM IST
ಸೇಡಂ: ಪಟ್ಟಣದ ಕೋಡ್ಲಾ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ರಾಘವೇಂದ್ರ ಸ್ವಾಮಿ ಮಠದ ಕಟ್ಟಡ ಕಾಮಗಾರಿಯನ್ನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಪೂಜ್ಯ ಸುಬುಧೇಂದ್ರ ತೀರ್ಥರು ವೀಕ್ಷಿಸಿದರು.
ಸೇಡಂ: ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠ ಈ ಭಾಗದಲ್ಲಿ ಭಕ್ತಿಯ ಕ್ರಾಂತಿ ಮಾಡಲಿದೆ ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಪೂಜ್ಯ ಸುಬುಧೇಂದ್ರ ತೀರ್ಥರು ನುಡಿದರು.
ಪಟ್ಟಣದ ಕೋಡ್ಲಾ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ರಾಘವೇಂದ್ರ ಸ್ವಾಮಿ ಮಠದ ಕಟ್ಟಡ ಕಾಮಗಾರಿ ವೀಕ್ಷಿಸಿದ ಅವರು, ಭಕ್ತರಿಗೆ ಆಶೀರ್ವಚನ ನೀಡಿದರು.
ರಾಘವೇಂದ್ರ ಸ್ವಾಮಿ ಸೇಡಂ ಜನತೆ ಮೇಲೆ ಪ್ರೀತಿ ಇಟ್ಟಿದ್ದಾರೆ. ಅದರ ಪರಿಣಾಮವಾಗಿಯೇ ಇಲ್ಲಿ ಮಠ ನಿರ್ಮಾಣವಾಗುತ್ತಿದೆ. ರಾಘವೇಂದ್ರ ಸ್ವಾಮಿಗಳ ಮಠ ಭಕ್ತರ ಶ್ರದ್ಧಾ ಕೇಂದ್ರವಾಗಬೇಕು. ಕೆಳ ಮಹಡಿ ಪೂರ್ಣಗೊಂಡ ಕೂಡಲೇ ಭಕ್ತಿ, ಧರ್ಮ ಕಾರ್ಯಗಳು ನಡೆಯಲಿ. ಎಲ್ಲ ಸಮಾಜದಲ್ಲಿ ರಾಘವೇಂದ್ರ ಸ್ವಾಮಿಗಳ ಭಕ್ತರಿದ್ದಾರೆ. ಕಲಬುರಗಿಯಲ್ಲೇ ಮಾದರಿ ಮಠ ಇದಾಗಲಿದೆ ಎಂದರು.
ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ, ರಾಘವೇಂದ್ರ ಸ್ವಾಮಿಗಳ ಮಠ ನಿರ್ಮಾಣ ಈ ಭಾಗದ ಜನತೆಗೆ ಅತ್ಯಂತ ಸಂತೋಷದ ವಿಷಯವಾಗಿದೆ. ಸಮಾಜದ ಮುಖಂಡರೊಂದಿಗೆ ಚರ್ಚೆ ಮಾಡಲಾಗಿದೆ. ಶಾಸಕರ ಅನುದಾನದಲ್ಲಿ ಮಠದ ಕಾಮಗಾರಿಗೆ 10 ಲಕ್ಷ ರೂ. ನೀಡಲಾಗುವುದು. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇನೆ. ನಾಲೈ್ಕದು ದಿನದಲ್ಲಿ ಅನುಮೋದನೆ ದೊರೆಯಲಿದೆ ಎಂದು ಭರವಸೆ ನೀಡಿದರು.
ಯತಿಗಳು ಕೆಲಹೊತ್ತು ಕಟ್ಟಡವನ್ನು ಸುತ್ತಾಡಿ ಕಾಮಗಾರಿ ವೀಕ್ಷಿಸಿ, ಪ್ರಶಂಶಿಸಿದರು. ಸಂತೋಷ ಕುಲಕರ್ಣಿ ಕಾರ್ಯಕ್ರಮ ನಡೆಸಿಕೊಟ್ಟರು. ಡಾ| ವಾಸುದೇವ ಅಗ್ನಿಹೋತ್ರಿ, ಡಾ| ಮುರಳೀಧರ ದೇಶಪಾಂಡೆ, ಮುಕುಂದ ದೇಶಪಾಂಡೆ, ಮನೋಹರ ದೊಂತಾ, ಶರಣು ಮೆಡಿಕಲ್, ಸುಧೀಂದ್ರ ಕುಲಕರ್ಣಿ, ವಿಜಯಕುಮಾರ ಕುಲಕರ್ಣಿ, ದತ್ತಾತ್ರೇಯ ಐನಾಪುರ, ಸುಭಾಶ ಮಹಾಡಿಕ, ಶ್ರೀನಿವಾಸ ದೇಶಪಾಂಡೆ, ಲಕ್ಷ್ಮೀನಾರಯಣ ಚಿಮ್ಮನಚೋಡ್ಕರ್, ರಾಜು ಕಟ್ಟಿ, ಓಂಪ್ರಕಾಶ ಪಾಟೀಲ, ಅನೀಲ ರನ್ನೆಟ್ಲಾ, ಮೋಹನಕುಮಾರ ರಂಜೋಳಕರ್, ಅಂಕಿತ ಜೋಶಿ, ರಾಮಚಂದ್ರ ಜೋಶಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Prajwal Revanna: ಪ್ರಜ್ವಲ್ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ
Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ
Voting ಹದಿನೈದು ನಿಮಿಷ ಕಾದು ಮತ ಹಾಕಿದ ಅನಂತಕುಮಾರ್ ಹೆಗಡೆ!
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ