ಗಡಿನಾಡಲ್ಲಿ ಪೊಲೀಸರ ಹದ್ದಿನ ಕಣ್ಣು

ಜಾಲ್ಸೂರಿನಲ್ಲಿ ಪ್ರತ್ಯೇಕ ಚೆಕ್‌ಪೋಸ್ಟ್‌; ತೀವ್ರ ತಪಾಸಣೆ

Team Udayavani, Mar 31, 2019, 11:56 AM IST

1-April-7

ಜಾಲ್ಸೂರಿನಲ್ಲಿ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ

ಜಾಲ್ಸೂರು : ಗ್ರಾಮೀಣ ಪ್ರದೇಶಗಳಲ್ಲಿ ಚುನಾವಣಾ ಬಿಸಿ ಏರುತ್ತಿದ್ದಂತೆ ಗಡಿ ಭಾಗದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ತೀವ್ರ ತಪಾಸಣೆ ನಡೆಸಲಾಗುತ್ತಿದ್ದು, ವಾಹನ ಸಂಚಾರದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.

ಜಾಲ್ಸೂರಿನಲ್ಲಿ ಪ್ರತ್ಯೇಕ ಚೆಕ್‌ಪೋಸ್ಟ್‌ ನಿರ್ಮಿಸಿ ವಾಹನ ಸಂಚಾರದ ಮೇಲೆ ಸಂಪೂರ್ಣ ನಿಗಾ ಇರಿಸಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶದಲ್ಲಿ ತಾತ್ಕಾಲಿಕ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಈ ಭಾಗದಲ್ಲಿ ಓಡಾಡುವ ವಾಹನಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ.

ಹಾಗೆಯೇ ಸುಳ್ಯ-ಕಾಸರಗೋಡು ಮಾರ್ಗವಾದ ಜಾಲ್ಸೂರಿನಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದ್ದು, ಎಲ್ಲ ವಾಹನಗಳನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಜಾಲ್ಸೂರು ಗಡಿಭಾಗವಾದ ಕಾರಣ ಇಲ್ಲಿ ಪೊಲೀಸರು ಸೂಕ್ಷ್ಮವಾಗಿ ನಿಗಾ ಇರಿಸಿದ್ದಾರೆ. ಈ ಭಾಗದಲ್ಲಿ ಮೊದಲಿನಿಂದಲೇ ಪೊಲೀಸ್‌ ತಪಾಸಣೆ ನಡೆಸಲಾಗುತ್ತಿತ್ತು. ಚುನಾವಣ ನೀತಿ ಸಂಹಿತೆ ಜಾರಿಯಾದ ಅನಂತರ ಪ್ರತ್ಯೇಕ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದೆ. ಚುನಾವಣೆಗೆ ಸಂಬಂಧಪಟ್ಟು ರಾಜ್ಯಕ್ಕೆ ಅನ್ಯ ರಾಜ್ಯಗಳಿಂದ ಹಣ ಹಾಗೂ ಇತರ ವಸ್ತುಗಳ ಅಕ್ರಮ ಸಾಗಾಟ ತಡೆಗಟ್ಟಲು ಅಧಿಕಾರಿಗಳು ಕಾರ್ಯ ಪ್ರವರ್ತರಾಗಿದ್ದಾರೆ.

ಸಿಸಿ ಕೆಮರಾ ಅಳವಡಿಕೆ
ಗಡಿಭಾಗದ ವಾಹನಗಳ ಮೇಲೆ ಕಟ್ಟೆಚ್ಚರ ಇಡಲು ಜಾಲ್ಸೂರಿನ ಚೆಕ್‌ಪೋಸ್ಟ್‌ನಲ್ಲಿ ಎರಡು ಸಿ.ಸಿ. ಟಿವಿ ಕೆಮರಾ ಅಳವಡಿಸಲಾಗಿದೆ. ಕೇರಳ ಭಾಗದಿಂದ ಬರುವ ಹಾಗೂ ಕೇರಳ ಮುದ್ರಿತ ನಂಬರ್‌ ಹೊಂದಿರುವ ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪೊಲೀಸ್‌ ಇಲಾಖೆ ಅಳವಡಿಸಿರುವ ಸಿಸಿ ಕೆಮರಾ ದಿನದ 24 ಗಂಟೆಯೂ ಕಾರ್ಯಾಚರಿಸುತ್ತಿದ್ದು, ಎಲ್ಲ ವಾಹನಗಳ ಮೇಲೆ ನಿಗಾ ಇಡುತ್ತಿದೆ. ರಾತ್ರಿ, ಹಗಲೆನ್ನದೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಪ್ರತ್ಯೇಕ ತಂಡ ಗಳನ್ನು ರಚಿಸಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಹೆದರುವ ಅಗತ್ಯವಿಲ್ಲ
ಚೆಕ್‌ಪೋಸ್ಟ್‌ ಇರುವ ಕಾರಣ ಜಾಲ್ಸೂರಿನ ಗಡಿಭಾಗ ಪ್ರದೇಶಗಳಾದ ಪಂಜಿಕಲ್ಲು, ಬನಾರಿ, ಬೆಳ್ಳಿಪ್ಪಾಡಿ ದೇಲಂಪಾಡಿ ನಿವಾಸಿಗಳು ಕೃಷಿ ಉತ್ಪನ್ನಗಳು ಹಾಗೂ ಇನ್ನಿತರ ವಸ್ತುಗಳನ್ನು ಜೀಪು ಹಾಗೂ ಬೇರೆ ವಾಹನಗಳಲ್ಲಿ ಕೊಂಡೊಯ್ಯುವುದಕ್ಕೆ ಹಿಂಜರಿಯುತ್ತಿದ್ದಾರೆ. ತಪಾಸಣೆಗೆ ಭಯಪಡುವುದು ಬೇಡ. ಇದು ಚುನಾವಣೆಗೆ ಸಂಬಂಧಪಟ್ಟು ನಡೆಸುವ ಸಹಜ ತಪಾಸಣೆಯಾಗಿದೆ. ಜನಸಮಾನ್ಯರು ಹೆದರುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಕ್ರಮ ಪತ್ತೆಯಾಗಿಲ್ಲ
ಚುನಾವಣ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಸಾರ್ವಜನಿಕರು ಸಹಕರಿಸಬೇಕು. ಇಲ್ಲಿಯವರೆಗೆ ಯಾವುದೇ ವಾಹನಗಳಲ್ಲಿ ಅಕ್ರಮ ಸಾಗಾಟ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ.
-ರಾಧಾಕೃಷ್ಣ, ಅಧಿಕಾರಿ
ಜಾಲ್ಸೂರು ಚೆಕ್‌ಪೋಸ್ಟ್‌

ಶಿವಪ್ರಸಾದ್‌ ಮಣಿಯೂರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.