ಮುಂಗಾರು ನಿರೀಕ್ಷೆಯಲ್ಲಿ ರೈತರು

ರೈತ ಸಂಪರ್ಕ ಕೇಂದ್ರದಲ್ಲಿ ತೊಗರಿ-ಉದ್ದು-ಹೆಸರು ಬೀಜ ಸಂಗ್ರಹ

Team Udayavani, Jun 17, 2019, 2:59 PM IST

17-June-25

ಶಹಾಬಾದ: ಬಿತ್ತನೆಗಾಗಿ ಹೊಲ ಹದ ಮಾಡುತ್ತಿರುವ ರೈತ.

ಶಹಾಬಾದ: ತಾಲೂಕಿನಲ್ಲಿ ಹೊಲ ಹದ ಮಾಡಿಕೊಂಡು ಬಿತ್ತನೆಗೆ ಸಿದ್ಧತೆಯಲ್ಲಿರುವ ರೈತರು ಮುಂಗಾರು ಮಳೆ ಆಗಮನಕ್ಕೆ ಕಾಯುತ್ತಿದ್ದಾರೆ.

ಜೂನ್‌ ತಿಂಗಳ ಮೊದಲ ವಾರದಲ್ಲಿ ಮಳೆಯಾಗುತ್ತದೆ ಎಂಬ ಆಶಾಭಾವನೆಯಿಂದ ಕಾದು ಕುಳಿತಿದ್ದ ರೈತರಿಗೆ ತೀವ್ರ ನಿರಾಸೆಯಾಗಿದೆ. ಸುಮಾರು 15 ದಿನಗಳಾದರೂ ಮಳೆಯಾಗುವ ಲಕ್ಷಣಗಳು ಕಾಣದಿರುವುದರಿಂದ ರೈತರಲ್ಲಿ ಆತಂಕದ ಮನೆ ಮಾಡಿದೆ.

ನಗರದ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ ಹೆಸರು, ತೊಗರಿ, ಜೋಳ ಬೆಳೆಯಲು ಯೋಗ್ಯವಾದ ಭೂಮಿ ಇದೆ. ಈ ಪ್ರದೇಶದಲ್ಲಿ ಮುಂಗಾರು ಹಂಗಾಮಿನಲ್ಲಿ ಹೆಸರು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ ಮಳೆ ಮುನಿಸಿಕೊಂಡಿದ್ದರಿಂದ ಹೆಸರು, ಉದ್ದು, ಎಳ್ಳು ಬೆಳೆಯುವ ಕನಸು ನುಚ್ಚುನೂರಾಗಿದೆ. ಈಗಲಾದರೂ ಕಣ್ಣು ತೆರೆದರೆ ರೈತರ ಮೊಗದಲ್ಲಿ ಒಂದಿಷ್ಟು ಸಂತೋಷ ಕಾಣಬಹುದು.

ಶಹಾಬಾದ ರೈತ ಸಂಪರ್ಕ ವಲಯದಲ್ಲಿ ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರಗಳ ದಾಸ್ತಾನು ಸಂಗ್ರಹ ಇದೆ. ಕೇವಲ ಭೂಮಿ ಹಸಿಯಾದರೆ ಸಾಕು ಬಿತ್ತನೆ ಮಾಡುತ್ತೇವೆ ಎಂದು ಹೇಳುತ್ತಾರೆ ಇಲ್ಲಿನ ರೈತ ಸದಾನಂದ ಕುಂಬಾರ.

ಬಿತ್ತನೆ ಬೀಜ ಲಭ್ಯ: ನಗರದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ತೊಗರಿ, ಉದ್ದು, ಹೆಸರು ಕಾಳುಗಳ ಹಾಗೂ ಪೋಷಕಾಂಶದ ರಸಗೊಬ್ಬರಗಳನ್ನು ವಿತರಿಸಲಾಗುತ್ತಿದೆ. ಶಹಾಬಾದ ಕೃಷಿ ವಲಯದ ತೊನಸನಹಳ್ಳಿ(ಎಸ್‌), ಮರತೂರ, ಭಂಕೂರ, ಮಾಲಗತ್ತಿ, ವ್ಯಾಪ್ತಿಯ ಸಣ್ಣ ಹಾಗೂ ಅತಿಸಣ್ಣ ರೈತರು ರಿಯಾಯಿತಿ ದರದಲ್ಲಿ ನೀಡಲಾಗುವ ಬೀಜ ಹಾಗೂ ರಸಗೊಬ್ಬರ ಪಡೆದುಕೊಳ್ಳಬೇಕು ಎಂದು ಕೃಷಿ ಅಧಿಕಾರಿ ಕಾಶಿನಾಥ ದಂಡೋತಿ ಮತ್ತು ಸಹಾಯಕ ಕೃಷಿ ಅಧಿಕಾರಿ ಸೈಯ್ಯದ್‌ ಪಟೇಲ್ ತಿಳಿಸಿದ್ದಾರೆ.

ಹೋಬಳಿಯ ಭಂಕೂರ, ಶಂಕರವಾಡಿ, ಮಾಲಗತ್ತಿ, ಮುತ್ತಿಗಿ, ತರಿತಾಂಡಾ, ಅಲ್ದಿಹಾಳ, ಯರಗಲ್, ತೆಗೆನೂರ, ಮರತೂರ, ತೊನಸಿನಹಳ್ಳಿ, ಹೊನಗುಂಟಾ, ಕಡೆಹಳ್ಳಿ, ಇಂಗಳಗಿ, ಕಡಬೂರ, ಚಾಮನೂರ, ಕುನ್ನೂರ, ಗೋಳಾ ಅನೇಕ ಗ್ರಾಮಗಳಲ್ಲಿ ರೈತರು ಹೊಲ ಹಸನು ಮಾಡಿಕೊಂಡು ಬಿತ್ತನೆ ಸಿದ್ಧತೆಯಲ್ಲಿದ್ದಾರೆ. ರೈತರು ಮಳೆರಾಯನ ಆಗಮನಕ್ಕೆ ಕಾಯುತ್ತಿದ್ದಾರೆ. ಇನ್ನೂ ಕೆಲವು ಪ್ರದೇಶದಲ್ಲಿ ಹೊಲ ಹಸನು ಮಾಡುವಲ್ಲಿ ತೊಡಗಿದ್ದಾರೆ. ಮಳೆ ಆಗಮನ ವಿಳಂಬವಾದರೆ ಅಲ್ಪಾವಧಿ ಬೆಳೆಗಳ ಬೇಸಾಯಕ್ಕೆ ಸ್ವಲ್ಪ ಹಿನ್ನಡೆಯಾಗುತ್ತದೆ. ಈ ವಾರದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿದ್ದಾರೆ ರೈತರು.

ರೈತ ಸಂಪರ್ಕ ಕೇಂದ್ರದಲ್ಲಿ ಸುಮಾರು 18,070 ಹೆಕ್ಟೇರ್‌ ಪ್ರದೇಶ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದೆ. ರೈತರಿಗೆ ಬಿತ್ತನೆಗೆ ಬೀಜಗಳನ್ನು ಹಾಗೂ ಪೋಷಕಾಂಶದ ರಸಗೊಬ್ಬರಗಳನ್ನು ವಿತರಿಸಲಾಗುತ್ತಿದೆ. ಕಳೆದ ವರ್ಷ ಹೋಬಳಿ ವಲಯದಲ್ಲಿ ನೆಟೆ ರೋಗ ಕಾಣಿಸಿಕೊಂಡಿತ್ತು. ಅದನ್ನು ತಡೆಗಟ್ಟಲು ಅಣುಜೀವಿ ಗೊಬ್ಬರವಾದ ಟ್ರೈಕೋಡರ್ಮವನ್ನು ರೈತರು ತಮ್ಮ ಭೂಮಿಯಲ್ಲಿ ಬಳಸಬೇಕು.
ಸೈಯದ್‌ ಪಟೇಲ್,
ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.