ಅಭಿವೃದ್ಧಿ ಮಾಡಿದ್ರೂ ಸೋತಿದ್ದು ದುರಂತ: ಖರ್ಗೆ

ಯುವ ಜನತೆ ಮೋದಿ ಪರ ವಾಲಿದ್ದು ದುರದೃಷ್ಟಕರ•ನನ್ನ ಸೋಲು ದೇಶಕ್ಕೆ ಸ್ವಾತಂತ್ರ್ಯ ತಂದ ಕಾಂಗ್ರೆಸ್‌ ಸೋಲು

Team Udayavani, Jun 12, 2019, 1:14 PM IST

21

ಶಹಾಬಾದ: ಕಾರ್ಯಕರ್ತರ ಕೃತಜ್ಞತಾ ಸಮಾರಂಭದಲ್ಲಿ ಸಾಹಿತಿ ಗಿರೀಶ ಕಾರ್ನಾಡ ಅವರಿಗೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.

ಶಹಾಬಾದ: ಎಷ್ಟೋ ಸಂಸದರು ಗೆದ್ದು ಜನತೆಗೆ ಮುಖ ತೋರಿಸಿಲ್ಲ. ಅಭಿವೃದ್ಧಿ ಮಾಡಿಲ್ಲ. ನಾನು ರಾಷ್ಟ್ರೀಯ ಹೆದ್ದಾರಿ, ಇಎಸ್‌ಐ ಆಸ್ಪತ್ರೆ, 371 (ಜೆ) ಕಲಂ, ಕೇಂದ್ರೀಯ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ರೂ ಮತ ನೀಡದೇ ಸೋಲಿಸಿದ್ದು ದುರಂತ. ನಾನು ಮುಖ ತೋರಿಸುವುದೇ ತಪ್ಪಾಯ್ತಾ ಎಂದು ಮಾಜಿ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳವಾರ ನಗರದ ಪಾರ್ವತಿ ಸಭಾಂಗಣದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕರ್ತರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ನನ್ನ ಈ ಸೋಲು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್‌ ಪಕ್ಷದ ಸೋಲು. ದೇಶದ ಸ್ವಾತಂತ್ರ್ಯಕ್ಕಾಗಿ ಅಗಲಿ ಹೋದ ಆ ಮಹಾತ್ಮರ ಸೋಲು. ನನ್ನ ಸೋಲಿಗೆ ಕಾರಣವೇ ಇಲ್ಲ ಎಂದು ಹೇಳಿದರು.

ನಾನು ಒಬ್ಬ ಸಂಸದನಾಗಿ ಕೆಲಸ ಮಾಡಿಲ್ಲವೇ? ಸಂಸತ್‌ನಲ್ಲಿ ಅಭಿವೃದ್ಧಿ ಬಗ್ಗೆ ಮಾತನಾಡಿಲ್ಲವೇ? ಯಾವತ್ತಿಗೂ ಕೆಟ್ಟ ಹೆಸರು ತರುವಂಥ ಕೆಲಸವನ್ನು ನಾನು ಮಾಡಿಲ್ಲ. ಎಲ್ಲೂ ನನ್ನಿಂದ ಲೋಪ ಆಗಿಲ್ಲ. ಆದರೂ ನನಗೆ ಸೋಲು ಉಂಟಾಗಿದೆ. ಇದಕ್ಕೆ ಕಾರಣ ಬಿಜೆಪಿಯವರು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸಿದ್ದು. ಕಾಂಗ್ರೆಸ್‌ ಪಕ್ಷದ ಬಗ್ಗೆ ಹಾಗೂ ನನ್ನ ಬಗ್ಗೆ ಅಪಪ್ರಚಾರ ಮಾಡಿ ಮೋಸದಿಂದ ಗೆದ್ದಿದ್ದಾರೆ. ಮುಗ್ದ ಜನರಿಗೆ ಸುಳ್ಳಿನ ಭಾವಾನಾತ್ಮಕ ಮಾತಿನಿಂದ ಸೆಳೆದು ಮೋಸ ಮಾಡಿದ್ದಾರೆ ಎಂದರು.

ಧರ್ಮ, ಜಾತಿ ಹೆಸರಿನಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಸಂಸತ್‌ನಲ್ಲಿ ಮೋದಿ ವಿರುದ್ಧ ಮಾತನಾಡಿದಕ್ಕೆ ಸಹಿಸದ ಅಮಿತ್‌ ಶಾ ಹಾಗೂ ಮೋದಿ ನನಗೆ ಧಮಕಿ ಹಾಕಿದ್ದರು.ಅದನ್ನು ನಾನು ಎಲ್ಲರ ಮುಂದೆ ಹೇಳಿದ್ದೇನೆ. ಅಲ್ಲದೇ ನನ್ನನ್ನೇ ಟಾರ್ಗೆಟ್ ಮಾಡಿದರು. ನನ್ನ ವಿರುದ್ಧ ವಾಟ್ಸ ಆ್ಯಪ್‌, ಫೇಸ್‌ಬುಕ್‌ನಲ್ಲಿ ಇಲ್ಲ ಸಲ್ಲದ ವಿಷಯಗಳನ್ನು ಹಾಕಿ ಷಡ್ಯಂತ್ರ ರೂಪಿಸಿ, ಮೋಸದಿಂದ ಗೆದ್ದರು. ಮೆಡಿಕಲ್ ಕಾಲೇಜು, ಇಂಜಿನಿಯರ್‌ ಕಾಲೇಜು ಸೇರಿದಂತೆ 371(ಜೆ)ನೇ ಕಲಂ ಮಾಡಿದ್ದು ಕಾಂಗ್ರೆಸ್‌ ಪಕ್ಷ. ಇದರ ಉಪಯೋಗ ಪಡೆದ ಯುವ ಜನರೇ ಮೋದಿ ಪರವಾಗಿ ನಿಂತಿದ್ದು ದುರಂತ ಎಂದು ಕಳವಳ ವ್ಯಕ್ತಪಡಿಸಿದರು.

ವಾಟ್ಸ ಆ್ಯಪ್‌ನಲ್ಲಿ ನಾನು ಲಿಂಗಾಯತರ ವಿರೋಧಿ ಎಂದು ಬಣ್ಣಿಸಿದ್ದಾರೆ. ನಾನು ಲಿಂಗಾಯತರ ವಿರೋಧಿಯಲ್ಲ. ರಾಜಕೀಯ ಜೀವನದಲ್ಲಿ ನಾನು ಯಾವ ಸಮಾಜದೊಂದಿಗೂ ವಿರೋಧ ಕಟ್ಟಿಕೊಂಡಿಲ್ಲ. ಕಾಂಗ್ರೆಸ್‌ ಪಕ್ಷದ ವಿಚಾರಧಾರೆಯೇ ಎಲ್ಲರೊಂದಿಗೆ ಒಂದುಗೂಡುವುದು.ಆ ತತ್ವದ ಮೇಲೆ ನಡೆಯುತ್ತೇನೆ. ಅದನ್ನು ಬಿಟ್ಟು ಇಲ್ಲಸಲ್ಲದ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯವರೇ ಹಾಕಿದ್ದಾರೆ. ಬಿಜೆಪಿಯದ್ದು ಒಡೆದಾಳುವ ನೀತಿಯಾದರೆ, ಕಾಂಗ್ರೆಸ್‌ ಪಕ್ಷದ ವಿಚಾರಧಾರೆ ಎಲ್ಲರನ್ನೂ ಒಂದುಗೂಡಿಸುವುದು. ಆ ವಿಚಾರಧಾರೆಗಳನ್ನು ಹಳ್ಳಿ ಯುವಕರಿಗೆ ತಲುಪಿಸುವ ಕೆಲಸವಾಗಿಲ್ಲ.ಅದನ್ನು ಬೇರು ಮಟ್ಟದಿಂದ ಮಾಡಬೇಕಾಗಿದೆ. ಯಾವೊಬ್ಬ ಕಾರ್ಯಕರ್ತರು ಸೋಲಿನಿಂದ ಧೃತಿಗೆಡದೆ ಮತ್ತೇ ಪಕ್ಷವನ್ನು ಬಲಪಡಿಸುವತ್ತ ಮುಂದಾಗಬೇಕಿದೆ. ಇದಕ್ಕೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದರು.

ಮುಖಂಡ ವಿಜಯಕುಮಾರ ರಾಮಕೃಷ್ಣ ಮಾತನಾಡಿ, ಹೈದ್ರಾಬಾದ ಕರ್ನಾಟಕ ಭಾಗದ ಅಭಿವೃದ್ಧಿಯ ಶ್ರೀ ಮುಕುಟದಂತಿರುವ ಮಲ್ಲಿಕಾರ್ಜುನ ಸಾಹೇಬರು ಕೆಲಸ ಮಾಡಿದರೂ ಮತ ಹಾಕದೇ ಸೋಲಿಸಿದ್ದರಿಂದ ಅತೀವ ನಿರಾಸೆಯಾಗಿದೆ. ಯುವಕರು ಬಿಜೆಪಿ ಕಡೆಗೆ ಅರಿಯದೇ ವಾಲುತ್ತಿದ್ದಾರೆ. ಈ ಭಾಗದ ಎಷ್ಟೋ ಯುವಕರು 371(ಜೆ) ಕಲಂ ಅಡಿಯಲ್ಲಿ ಉಪಯೋಗ ತೆಗೆದುಕೊಂಡಿದ್ದಾರೆ. ಈ 371 (ಜೆ) ಕಲಂ ತಂದದ್ದು ಮಲ್ಲಿಕಾರ್ಜುನ ಖರ್ಗೆ ಎನ್ನುವುದನ್ನು ಯುವಕರು ಮರೆಯಬಾರದಿತ್ತು. ಯಾರು ಕೆಲಸ ಮಾಡಿದ್ದಾರೆಯೋ ಅವರಿಗೆ ಬೆಂಬಲ ನೀಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಕೆಲಸ ನೋಡಿ ಯಾರೂ ಅವರು ಸೋಲುತ್ತಾರೇ ಎಂದು ಊಹಿಸಿರಲಿಲ್ಲ. ಮುಂಬರುವ ದಿನಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳುತ್ತೇವೆ ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವಪ್ಪ ಗುತ್ತೇದಾರ, ವಿಧಾನ ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಗನ್ನಾಥ ಗೋಧಿ, ಸಿ.ಎ. ಪಾಟೀಲ, ದೇವೆಂದ್ರಪ್ಪ ಮರತೂರ, ಚಂದ್ರಿಕಾ ಪರಮೇಶ್ವರ, ಲತಾ ರಾಠೊಡ, ಸುಭಾಷ ರಾಠೊಡ, ಜಿಪಂ ಸದಸ್ಯ ಶಿವಾನಂದ ಪಾಟೀಲ, ಅಜೀತ್‌ ಪಾಟೀಲ, ವಿಜಯಕುಮಾರ ಮುಟ್ಟತ್ತಿ, ಗಿರೀಶ ಕಂಬಾನೂರ, ಸುಭಾಷ ಪವಾರ, ಯಾಕೂಬ ಮರ್ಚಂಟ್, ಸುರೇಶ ನಾಯಕ, ಸಾಹೇಬಗೌಡ ಬೋಗುಂಡಿ, ಸುಭಾಷ ಪಂಚಾಳ ಹಾಗೂ ಮತ್ತಿತರರು ಇದ್ದರು. ಮೃತ್ಯಂಜಯ ಹಿರೇಮಠ ನಿರೂಪಿಸಿದರು, ಡಾ| ರಶೀದ ಮರ್ಚಂಟ್ ಸ್ವಾಗತಿಸಿದರು, ಡಾ| ಅಹ್ಮದ್‌ ಪಟೇಲ್ ವಂದಿಸಿದರು. ಕಾರ್ಯಕ್ರಮಕ್ಕೂ ಮುಂಚೆ ಸಾಹಿತಿ ಗಿರೀಶ ಕಾರ್ನಾಡ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸುಳ್ಳಿಗೆ ಜಯ ಸಿಕ್ಕಿದೆ. ಜನರು ಸುಳ್ಳಿಗೆ ಮಣೆ ಹಾಕಿದ್ದಾರೆ. ಮೋಸದ ಗಾಳಿಗೆ ನಾವು ಸೋತಿರಬಹುದು. ಯಾವುದಕ್ಕೂ ಕಾರ್ಯಕರ್ತರು ಆತ್ಮವಿಶ್ವಾಸ ಕಳೆದುಕೊಳ್ಳದಿರಿ. ಧರ್ಮದ ಕಾಲ ಬಂದೇ ಬರುತ್ತದೆ.
ಅಲ್ಲಮ ಪ್ರಭು ಪಾಟೀಲ,
ಮಾಜಿ ವಿಧಾನ ಪರಿಷತ್‌ ಸದಸ್ಯ

ವಿಚಾರವಂತ, ನಿಷ್ಠುರವಾದಿ ಗಿರೀಶ ಕಾರ್ನಾಡ ಪ್ರಗತಿಪರ ವಿಚಾರಧಾರೆ ಮೂಲಕ, ನಾಟಕ, ಸಿನಿಮಾ ರಂಗ ಮೂಲಕ ದೇಶಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರ ಅಗಲಿಕೆಯಿಂದ ಕನ್ನಡ ಶ್ರೀಮಂತಿಕೆಗೆ ಬಹುದೊಡ್ಡ ನಷ್ಟವಾಗಿದೆ. ಇಂತಹ ವಿಚಾರವಂತರು ಬೆಳೆದು ಬಂದರೆ ಸಮಾಜದಲ್ಲಿ ಸಮಾನತೆ ತರಲು ಸಾಧ್ಯವಾಗುತ್ತದೆ. ಆದರಿಂದು ಇಂತಹ ವಿಚಾರಧಾರೆ ಮೇಲೆ ದೊಡ್ಡ ಕೊಡಲಿ ಪೆಟ್ಟು ಬಿದ್ದಿದೆ.
ಡಾ| ಮಲ್ಲಿಕಾರ್ಜುನ ಖರ್ಗೆ,
 ಮಾಜಿ ಸಂಸದ

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.