ಪಾದಚಾರಿಗಳ ಸುಗಮ ಸಂಚಾರಕ್ಕೂ ಸಂಕಷ್ಟ
ರೈಲ್ವೆ ನಿಲ್ದಾಣ ಬಳಿ ಪಾರ್ಕಿಂಗ್ ಸಮಸ್ಯೆ •ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ
Team Udayavani, May 20, 2019, 10:06 AM IST
ಶಹಾಬಾದ: ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುವ ದ್ವಿಚಕ್ರ ವಾಹನಗಳು ಹಾಗೂ ಆಟೋ ರಿಕ್ಷಾಗಳು.
ಶಹಾಬಾದ: ನಗರದ ರೈಲ್ವೆ ನಿಲ್ದಾಣದ ಬಳಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಕೂಡಲೇ ಸಂಚಾರಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಹಿಂದೆ ರೈಲ್ವೆ ಇಲಾಖೆ ವತಿಯಿಂದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ಕೊಟ್ಟಿದ್ದರಿಂದ ಅಷ್ಟೊಂದು ಸಮಸ್ಯೆ ಕಂಡು ಬಂದಿರಲಿಲ್ಲ. ಆದರೆ ಸದ್ಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದ ಕಾರಣ ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಇದರಿಂದ ರೈಲ್ವೆ ನಿಲ್ದಾಣದ ಒಳಗೆ ಪ್ರವೇಶಿಸಲು ತೀವ್ರ ತೊಂದರೆಯಾಗುತ್ತಿದೆ.
ದ್ವಿಚಕ್ರ ವಾಹನ ಹಾಗೂ ಆಟೋಗಳ ನಿಲುಗಡೆಯಿಂದ ರಸ್ತೆ ತುಂಬಿ ಹೋಗಿ ಪಾದಚಾರಿಗಳಿಗೂ ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ನಿಲ್ದಾಣದ ಹೊರಗೆ ಚಹಾ ಹಾಗೂ ಬಜಿ ಸೇವಿಸಲು ಬಂದ ಜನರು ರಸ್ತೆ ಪಕ್ಕ ವಾಹನ ನಿಲ್ಲಿಸಿ ಸಂಚಾರಕ್ಕೆ ಅಡೆತಡೆ ಮಾಡುತ್ತಿದ್ದಾರೆ. ಅಲ್ಲದೇ ಬಸ್ ನಿಲ್ದಾಣದಿಂದ ಬಸ್ ಸಂಚಾರ ರೈಲ್ವೆ ನಿಲ್ದಾಣ ಮುಂಭಾಗದ ವೃತ್ತದ ಮೂಲಕ ಹೋಗುವ ವೃತ್ತದಲ್ಲಿ ರಸ್ತೆ ಇಕ್ಕಟ್ಟಾಗಿರುವುದರಿಂದ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದೆ. ಇಲ್ಲಿ ರೈಲ್ವೆ ನಿಲ್ದಾಣದೊಳಗೆ ಪ್ರವೇಶ ಮಾಡಬೇಕೆಂದರೆ ಹರಸಾಹಸ ಪಡಬೇಕಾಗುತ್ತದೆ. ಹಗಲಿನಲ್ಲಿಯೇ ಸಾಕಷ್ಟು ತೊಂದರೆ ಪಡಬೇಕಾದ ಸಂದರ್ಭವಿದ್ದು, ರಾತ್ರಿಯಾದರೆ ಮಹಿಳೆಯರ ಪಾಡು ಕೇಳದಂತಾಗಿದೆ. ನೆಹರು ವೃತ್ತದಲ್ಲಿ ಇಕ್ಕಟ್ಟಾದ ರಸ್ತೆ ಇದ್ದು, ಬಸ್ ತಿರುವು ತೆಗೆದುಕೊಳ್ಳುವಾಗ ಬಹಳ ತೊಂದರೆಯಾಗುತ್ತಿದೆ. ಇದರಿಂದ ಟ್ರಾಫಿಕ್ ಜಾಮ್ ಆಗುತ್ತಿದೆ. ಇಲ್ಲಿ ರಸ್ತೆ ಅಗಲೀಕರಣ ಆಗಬೇಕು ಎನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ.
ಈ ಹಿಂದೆ ಪೊಲೀಸ್ ಇಲಾಖೆ ವಾಹನಗಳ ನಿಲುಗಡೆಗೆ ವ್ಯವಸ್ಥಿತ ಕ್ರಮ ಕೈಗೊಂಡಿತ್ತು. ಒಂದು ದಿನ ಒಂದು ಬದಿಯಲ್ಲಿ ವಾಹನಗಳ ನಿಲುಗಡೆಯಾದರೆ ಮರು ದಿನ ಇನ್ನೊಂದು ಬದಿಯಲ್ಲಿ ಅದಲಿ-ಬದಲಿಯಾಗುವಂತೆ ವಾಹನಗಳನ್ನು ನಿಲ್ಲಿಸುವ ಕಾರ್ಯಾಚರಣೆ ಕೈಗೊಂಡಿತ್ತು. ಅಲ್ಲದೇ ಅಡ್ಡಾದಿಡ್ಡಿಯಾಗಿ ನಿಲ್ಲಿಸುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಿತ್ತು. ಇದರಿಂದ ಟ್ರಾಫಿಕ್ ಕಿರಿಕಿರಿ ಇರಲಿಲ್ಲ. ಆದರೆ ಚುನಾವಣೆ ಘೋಷಣೆಯಾದ ನಂತರ ಈ ಕಡೆ ಗಮನ ಹರಿಸುವುದನ್ನು ಬಿಟ್ಟಿದ್ದಾರೆ. ಇದರಿಂದ ಮತ್ತೆ ಯಥಾಸ್ಥಿತಿ ಮುಂದುವರಿದಿದೆ ಎನ್ನುತ್ತಾರೆ ಸಾರ್ವಜನಿಕರು.
ಆಗ್ರಹ: ಸರಳವಾಗಿ ನಡೆದುಕೊಂಡು ಹೋಗುವ ಹಾಗಿಲ್ಲ. ಇದರ ಮಧ್ಯೆ ದ್ವಿಚಕ್ರ ವಾಹನ ಹಾಗೂ ಆಟೋ ರಿಕ್ಷಾದವರು ಜನಗಳ ಮಧ್ಯೆ ಬಂದು ನಿಲ್ಲಿಸುತ್ತಾರೆ. ಇದರಿಂದ ಜನಗಳ ಮಧ್ಯದಿಂದ ಹೋಗಬೇಕಾದರೆ ಮೈ ತಾಗಿಸಿಕೊಂಡು ಹೋಗಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ಕೂಡಲೇ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮಹಿಳೆಯರು ಆಗ್ರಹಿಸಿದ್ದಾರೆ.
ದಿನನಿತ್ಯ ನಗರದಿಂದ ಸಾವಿರಾರು ಜನರು ಕಲಬುರಗಿ ಹಾಗೂ ಇತರ ನಗರಕ್ಕೆ ಹೋಗುತ್ತಾರೆ. ಆದರೆ ರೈಲ್ವೆ ನಿಲ್ದಾಣದ ಒಳಗೆ ಪ್ರವೇಶಿಸುವ ಮುಂಚೆ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡೆತಡೆಯಾಗುತ್ತಿದೆ. ಒಬ್ಬ ವ್ಯಕ್ತಿಯೂ ಸರಳವಾಗಿ ನಡೆದುಕೊಂಡು ಹೋಗದ ರೀತಿಯಲ್ಲಿ ವಾಹನಗಳನ್ನು ನಿಲ್ಲಿಸಿರುತ್ತಾರೆ. ರಾತ್ರಿಯಂತೂ ಈ ಕಡೆ ಮಹಿಳೆಯರನ್ನು ಕಳಿಸಲು ಹಿಂದೇಟು ಹಾಕುವಂತಿದೆ.
•ಸೂರ್ಯಕಾಂತ ಕುಂಟನ್,
ಸ್ಥಳೀಯ ನಿವಾಸಿ
ಮಲ್ಲಿನಾಥ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು