ಸಂತ್ರಸ್ತರ ಸಮಸ್ಯೆ ಆಲಿಸಿದ ರಾಜುಗೌಡ
•ಬೇಕಾದ ನೆರವು ನೀಡಲು ನಾನಿದ್ದೇನೆ •ಪ್ರವಾಹ ಇಳಿಯುವವರೆಗೆ ಪರಿಹಾರ ಕೇಂದ್ರ ಬಿಟ್ಟು ಕದಲಬೇಡಿ
Team Udayavani, Aug 14, 2019, 4:04 PM IST
ಸುರಪುರ: ಎಪಿಎಂಸಿ ಕೇಂದ್ರದ ಆವರಣದಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಶಾಸಕ ನರಸಿಂಹ ನಾಯಕ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದರು.
ಸುರಪುರ: ನಗರದ ಎಪಿಎಂಸಿಯಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಸೋಮವಾರ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಬಟ್ಟೆ, ಬೆಡ್ಸೀಟ್ ಮತ್ತಿತರ ವಸ್ತುಗಳನ್ನು ವಿತರಿಸಿದರು.
ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿ ನಂತರದ ಮಾತನಾಡಿದ ಅವರು, ನೆರೆ ರಾಜ್ಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ವಿಪರೀತವಾಗಿ ಸುರಿಯುತ್ತಿದೆ. ಇದರಿಂದ ನದಿ ಪ್ರವಾಹದಲ್ಲಿ ಹರಿಯುವಿನ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಇದರಿಂದ ನಾರಾಯಣಪುರ ಜಲಾಶಯಕ್ಕೆ ಒಳಹರಿಯುವಿನ ಪ್ರಮಾಣ ಹೆಚ್ಚಾಗುತ್ತಿದೆ. ಇದರಿಂದ ಹೊರಹರಿಯುವಿನ ಪ್ರಮಾಣದಲ್ಲಿ ಅಧಿಕವಾಗಲಿದೆ. ಆದ್ದರಿಂದ ನದಿ ನೀರಿನ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಹೀಗಾಗಿ ಅಪಾರ ಬೆಳೆ ನಷ್ಟವಾಗಿದೆ. ಆದ್ದರಿಂದ ರೈತರ ವರದಿ ತರಿಸಿಕೊಂಡು ಸರಕಾರಕ್ಕೆ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ನದಿ ತೀರದ ತಿಂಥಿಣಿ, ದೇವಪುರ, ಗೆದ್ದಲಮರಿ, ಶೆಳ್ಳಗಿ, ಮುಷ್ಠಳ್ಳಿ, ಸೂಗೂರು, ಚೌಡೇಶ್ವರಹಾಳ ಸೇರಿದಂತೆ ವಿವಿಧ ಗ್ರಾಮಗಳ ಕೊನೆ ಭಾಗದಲ್ಲಿರುವ ವಾರ್ಡ್ಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರವಾಹ ಇಳಿಮುಖವಾದ ತಕ್ಷಣ ನೆರೆ ಸಂತ್ರಸ್ತರ ಜೀವನವನ್ನು ಸಹಜ ಸ್ಥಿತಿಗೆ ತರಲು ಸಾಧ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಮನೆ ಕಳೆದುಕೊಂಡುವರಿಗೆ ಮನೆ ನಿರ್ಮಿಸಿಕೊಡಲಾಗುವುದು. ಪ್ರವಾಹ ಇಳಿಯುವರೆಗೆ ಯಾರು ಗಂಜಿ ಕೇಂದ್ರ ಬಿಟ್ಟು ಕದಲಬಾರದು. ನಿಮ್ಮ ನೆರವಿಗೆ ಸರಕಾರವಿದೆ. ಬೇಕಾದ ನೆರವು ನೀಡಲು ನಾನಿದ್ದೇನೆ. ಹೆದರಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…