ಸತತ ಪ್ರಯತ್ನದಿಂದ ಯಶಸ್ಸು ನಿಶ್ಚಿತ

ಸಾಧನೆ ಪರಿಪೂರ್ಣತೆಗೆ ಇಚ್ಛಾಶಕ್ತಿ ಅಗತ್ಯ ಅನಾಥ ಮಕ್ಕಳಿಗೆ ಬಾಲ ಸಂಸ್ಕಾರ ಕೇಂದ್ರ ಸ್ಥಾಪನೆ

Team Udayavani, Dec 16, 2019, 4:53 PM IST

16-December-24

ಶಹಾಪುರ: ಸಾಧನೆಗಳ ಪರಿಪೂರ್ಣತೆಗೆ ಇಚ್ಛಾಶಕ್ತಿ ದೃಢ ನಿಷ್ಠೆ, ಕಾರ್ಯದಲ್ಲಿ ಅಚಲ ಶ್ರದ್ಧೆ ಜತೆಗೆ ಗುರುಕಾರುಣ್ಯದೊಂದಿಗೆ ಸತತ ಪ್ರಯತ್ನದ ದಾರಿ ಹಿಡಿದರೆ ಯಶಸ್ಸು ನಿಶ್ಚಿತವಾಗಿ ದೊರಕುತ್ತದೆ ಎಂದು ದಂಡಗುಂಡ ಸಂಸ್ಥಾನಮಠದ ಶ್ರೀ ಸಂಗನಬಸವ ಶಿವಾಚಾರ್ಯರು ಹೇಳಿದರು.

ನಗರದ ಹೊರವಲಯದಲ್ಲಿರುವ ಶ್ರೀಶೈಲ ಮಲ್ಲಿಕಾರ್ಜುನ ಫೌಂಡೇಶನ್‌ ಆಶ್ರಯದಲ್ಲಿರುವ ಶ್ರೀಶೈಲ ಮಲ್ಲಿಕಾರ್ಜುನ ಅನಾಥಾಶ್ರಮದ ಎರಡನೇ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು.

ಭಗವಂತನ ಅನುಗ್ರಹ ಗುರುವಿನ ಕಾರುಣ್ಯದಿಂದ ಸೇವಾ ಕಾರ್ಯದಲ್ಲಿ ತೊಡಗಿರುವ ರೇಣುಕಾ ಬಿ. ಹುಗ್ಗಿ ಮತ್ತು ಅವರ ಪುತ್ರ ಸೋಮಲಿಂಗ ಬಿ. ಹುಗ್ಗಿ ತಂದೆ-ತಾಯಿ, ಬಂಧು-ಬಳಗ ಪ್ರೀತಿಯಿಂದ ವಂಚಿತರಾದ ಎಳೆಯ ಮಕ್ಕಳ ಭವಿಷ್ಯ ರೂಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಜೀವನದ ಗುರಿ ಸಾಧನೆಗೆ ಅವರ ಪರಿಶ್ರಮ ಮೆಚ್ಚುವಂಥದ್ದು, ಅವರ ಕಾರ್ಯಕ್ಕೆ ಯಶಸ್ಸು ಸಿಗಲಿ. ಮುಂಬರುವ ದಿನಗಳಲ್ಲಿ ಇಲ್ಲಿನ 16 ಮಕ್ಕಳು ಉತ್ತಮ ಶಿಕ್ಷಣ ಸೌಲಭ್ಯ ಪಡೆದು ಪ್ರತಿಭಾವಂತರಾಗಲಿ ಎಂದು ಹರಸಿದರು.

ಉತ್ತರ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶರಣು ಗದ್ದುಗೆ ಮಾತನಾಡಿ, ಸರ್ಕಾರದ ಸಹಾಯ ಸಹಕಾರವಿಲ್ಲದೆ, ಸಮಾಜದ ಹಲವು ಕಾಳಜಿಯ ಮನಸ್ಸುಗಳು ನೀಡಿದ ಸಹಕಾರದಿಂದ ಆಶ್ರಮ ನಡೆದಿರುವುದು ತಾಯಿ ಮಗನಲ್ಲಿರುವ ಸೇವೆ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಜಿಲ್ಲಾ ಮಕ್ಕಳ ಅಧಿಕಾರಿ ಹಾಗೂ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ ಶರಣಗೌಡ ಪಾಟೀಲ ಕ್ಯಾತನಾಳ ಮಾತನಾಡಿ, ಸರ್ಕಾರ 18 ವರ್ಷದೊಳಗಿನ ಅನಾಥ ಮಕ್ಕಳಿಗೆ ಬಾಲ ಸಂಸ್ಕಾರ ಕೇಂದ್ರ ನಿರ್ಮಾಣ ಮಾಡಿದ್ದು, ಅಲ್ಲಿ ಸೂಕ್ತ ವ್ಯವಸ್ಥೆ ಅವಕಾಶವಿದ್ದು ಒಂದೆಡೆಯಾದರೆ ಇಲ್ಲಿನ ಆಶ್ರಮ ಸ್ವಯಂ ಆಸಕ್ತಿಯಿಂದ ಒಂದಿಲ್ಲೊಂದು ಕಾರಣದಿಂದ ಕುಟುಂಬದ ಪ್ರೀತಿಯಿಂದ ದೂರವಾದ ಮಕ್ಕಳಿಗೆ ಆಶ್ರಯ ನೀಡಿ ಸರ್ಕಾರದ ಭಾರ ಕಡಿಮೆ ಮಾಡಿದೆ.

ಇಲ್ಲಿನ ಕೇಂದ್ರ ಮೂಲಭೂತ ಸೌಲಭ್ಯದಿಂದ ಕೂಡಿ ಮಕ್ಕಳ ಭವಿಷ್ಯಕ್ಕೆ ನಾಂದಿಯಾಗಲಿ ಎಂದು ಹೇಳಿದರು. ಶಿಕ್ಷಕ ಲಕ್ಷ್ಮಣ ಲಾಳಸೇರಿ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಹಲವು ಸಾಧಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಾಂಸ್ಕತಿಕ
ಕಾರ್ಯಕ್ರಮಗಳು ನಡೆದವು. ಗೆಳೆಯರ ಬಳಗದಿಂದ ಅನಾಥಾಶ್ರಮದ ಮುಖ್ಯಸ್ಥರನ್ನು ಗೌರವಿಸಲಾಯಿತು.

ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರು ಕಾಮ, ಮುಖಂಡರಾದ ಚನ್ನಪ್ಪಗೌಡ ಶಿರವಾಳ, ಸುಧೀರ ಚಿಂಚೋಳಿ, ಡಾ| ಮೌನೇಶ ಕೆಂಭಾವಿ, ಮರೆಪ್ಪ ಎಂ. ಪ್ಯಾಟಿ ಪ್ರಶಾಂತ ದೊಡ್ಡಮನಿ, ತಿಪ್ಪಣ್ಣ ಕ್ಯಾತನಾಳ, ಡಾ| ಜಗದೀಶ ಉಪ್ಪಿನ, ರವಿ ಮೋಟಗಿ, ಅರವಿಂದ ಉಪ್ಪಿನ, ರಾಜು ಬಾಂತಾಳ, ಶಿವಕುಮಾರ ಚೌದ್ರಿ, ಅಮರೇಶ, ವೆಂಕಟೇಶ ಕುಲಕರ್ಣಿ, ಬಸ್ಸು ಗುತ್ತೇದಾರ, ಮಲ್ಲಪ್ಪ ದೋರನಹಳ್ಳಿ, ಸಂತೋಷ ಕುಮಾರ, ವೆಂಕಟೇಶ ಟೊಣಪೆ, ಉಮೇಶ ಕುಮಾರ, ರಾಜು ಪಂಚಬಾವಿ, ಸಂತೋಷ ಹಿರೇಮಠ, ಇಕ್ಬಾಲ ಪಠಾಣ ಇದ್ದರು. ಮಲ್ಲಿಕಾರ್ಜುನ ಸ್ವಾಗತಿಸಿದರು. ಮಲ್ಲಯ್ಯಸ್ವಾಮಿ ಇಟಗಿ ನಿರೂಪಿಸಿದರು. ಅವಿನಾಶ ಗುತ್ತೇದಾರ ವಂದಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.