ಹದಗೆಟ್ಟ ನೈರ್ಮಲ್ಯ: ನಗರಸಭೆ ನಿರ್ಲಕ್ಷ್ಯ
ಹಲವು ವಾರ್ಡ್ಗಳಲ್ಲಿ ಕಸದ ರಾಶಿ-ಚರಂಡಿ ದುರ್ನಾತಕಾಡುತ್ತಿದೆ ಸಾಂಕ್ರಾಮಿಕ ರೋಗ ಭೀತಿ
Team Udayavani, Dec 6, 2019, 1:22 PM IST
ಶಹಾಪುರ: ನಗರದ ಹಲವು ವಾರ್ಡ್ಗಳಲ್ಲಿ ಕಸದ ರಾಶಿ, ಚರಂಡಿ ನೀರು ಸಂಗ್ರಹದಿಂದ ಗಬ್ಬೆದ್ದು ದುರ್ವಾಸನೆ ಕಾಡುತ್ತಿದ್ದು, ನಗರಸಭೆ ನಿರ್ಲಕ್ಷ್ಯ ವಹಿಸಿದೆ ಎಂದು ನಾಕರಿಕರು ಆರೋಪಿಸಿದ್ದಾರೆ.
ನಗರಸಭೆ ಚುನಾವಣೆ ಮುಗಿದು 6 ತಿಂಗಳಾಗಿದೆ. ನಗರಸಭೆಗೆ ಆಯ್ಕೆಯಾದ ಸದಸ್ಯರಿಗೆ ತಾಂತ್ರಿಕ ಕಾರಣದಿಂದ ಇನ್ನೂ ಅಧಿಕಾರ ಸಿಕ್ಕಿಲ್ಲ. ಅಲ್ಲದೇ ಅಧಿಕಾರಿಗಳು ಸ್ವತ್ಛತೆ ಕಡೆಗೆ ಗಮನಹರಿಸಿಲ್ಲ. ನಗರದ ಕೆಲ ಭಾಗದಲ್ಲಿ ಡೆಂಘೀ, ಚಿಕೂನ್ಗುನ್ಯಾ ಜ್ವರ ಹರಡಿದೆ. ನಗರದ ಸರ್ಕಾರಿ ಆಸ್ಪತ್ರೆ ಅಧಿಕಾರಿಗಳು ಎರಡು ಮೂರು ದಿನ ನಗರದಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. ಬಳಿಕ ಕೈತೊಳೆದುಕೊಂಡು ಬಿಟ್ಟರು ಎಂಬಂತೆ ಕಾಣುತ್ತಿದೆ. ಸಾಂಕ್ರಾಮಿಕ ರೋಗ, ಡೆಂಘೀ ಮತ್ತು ಚಿಕೂನ್ ಗುನ್ಯಾ ಭೀತಿ ಕಡಿಮೆಯಾಗಿಲ್ಲ.
ಚಾಮುಂಡೇಶ್ವರಿ ನಗರದಲ್ಲಿ ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿರುವುದು ಕಂಡು ಬಂದಿದೆ. ಅಲ್ಲಿಯೇ ಆರೋಗ್ಯ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಇದೆ. ಆದರೂ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ನಗರಸಭೆ ಬಡಾವಣೆ ಸ್ವಚ್ಚತೆಗೊಳಿಸಿದರುವುದೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.
ಗಣೇಶ ನಗರ, ಶರಣಬಸವೇಶ್ವರ, ಸಂಗಮೇಶ್ವರ ನಗರಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ಎಲ್ಲೆಂದರಲ್ಲಿ ಚರಂಡಿ ನೀರು ಸಂಗ್ರಹವಾಗಿ ಗಬ್ಬೆದ್ದು ನಾರುತ್ತಿದೆ. ಇದರಿಂದ ಸೊಳ್ಳೆ, ಕ್ರಿಮಿಕೀಟಗಳ ಕಾಟ ಜಾಸ್ತಿಯಾಗಿದೆ. ಹೀಗಾಗಿ ಉತ್ತಮ ನೈರ್ಮಲ್ಯ ಒದಗಿಸಬೇಕಿದ್ದ ನಗರಸಭೆ ನಿದ್ರೆಗೆ ಜಾರಿದೆ ಎಂದು ವಾರ್ಡ್ ನಾಗರಿಕರು ಆರೋಪಿಸಿದ್ದಾರೆ.
ಕೆಲವು ವಾರ್ಡ್ಗಳಲ್ಲಿ ನಿವಾಸಿಗಳು ಮನೆ ತಲುಪಬೇಕಾದರೆ ಮೂಗು ಮುಚ್ಚಿಕೊಂಡು ಕೆಸರು ಗದ್ದೆಯಂತ ರಸ್ತೆಯಲ್ಲಿಯೇ ಹೋಗಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರು ಕೂಡ ನಗರಸಭೆ ಸ್ಪಂದಿಸುತ್ತಿಲ್ಲ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸದ ಗೂಡು ಕೆಸರು ಗದ್ದೆಯಾದ ರಸ್ತೆಯಲ್ಲಿಯೇ ದಿನನಿತ್ಯದ ಬದುಕು ಸಾಗಿಸಬೇಕಾಗಿದೆ ಎಂದು ನಾಗರಿಕರು ದೂರಿದ್ದಾರೆ.
ಚಾಮುಂಡೇಶ್ವರಿ ನಗರದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಚರಂಡಿ ನೀರು ಸಂಗ್ರಹವಾಗಿ ಕೆರೆಯಂತಾಗಿದೆ. ಸಾಕಷ್ಟು ಬಾರಿ ನಗರಸಭೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಾಯಬಣ್ಣ ನಾಶಿ,
ಚಾಮುಂಡಿ ಬಡಾವಣೆ
ನಗರದ ಹಲವಡೆ ಚರಂಡಿ ಅಸಮರ್ಪಕತೆಯಿಂದ ಕೊಳಚೆ ನೀರು ಸಂಗ್ರಹವಾಗಿ ಗಬ್ಬೆದ್ದು ನರುತ್ತಿದೆ. ನಗರಸಭೆ ಅಧಿಕಾರಿಗಳು ಸ್ವತ್ಛತೆಗೆ ಕ್ರಮ ಕೈಗೊಳ್ಳಬೇಕು. ಅಂಗಡಿ, ಮುಂಗಟ್ಟುಗಳ ಸಹ ಕಸದ ರಾಶಿಯನ್ನು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ.
ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಹೆದ್ದಾರಿ ಪಕ್ಕದಲ್ಲಿ ತ್ಯಾಜ್ಯ ಎಸೆಯಲಾಗುತ್ತಿದೆ. ಅದನ್ನು ನಿಲ್ಲಿಸಬೇಕು. ಬಡಾವಣೆ ಸ್ವಚ್ಛತೆಗೆ ನಗರಸಭೆ ಆದ್ಯತೆ ನೀಡಬೇಕು.
ನಂದಕುಮಾರ ಚಿಲ್ಲಾಳ,
ನಗರ ವಾಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ