ಮಂಡಗಳ್ಳಿ ರುದ್ರಭೂಮಿ ಅತಿಕ್ರಮಣ

ಶವ ಸಂಸ್ಕಾರಕ್ಕೆ ಅವಕಾಶ ಕಲ್ಪಿಸುತ್ತಿಲ್ಲ: ಮುಖಂಡರ ಆರೋಪ

Team Udayavani, Jun 7, 2019, 11:18 AM IST

07-Jun-11

ಶಹಾಪುರ: ಮಂಡಗಳ್ಳಿ ಸ್ಮಶಾನ ಭೂಮಿಯಲ್ಲಿ ಬಣಿಮೆ ಒಟ್ಟಿರುವುದು.

ಶಹಾಪುರ: ಬಹು ವರ್ಷಗಳ ಹಿಂದೆಯೇ ದಲಿತರ ಶವ ಸಂಸ್ಕಾರಕ್ಕಾಗಿ ನೀಡಿದ್ದ ಸ್ಮಶಾನ ಭೂಮಿಯೊಂದನ್ನು ಗ್ರಾಮದ ಕೆಲವರು ಅತಿಕ್ರಮಣ ಮಾಡಿದ್ದು, ಸ್ಮಶಾನ ಭೂಮಿಯಲ್ಲಿ ಶವ ಸಂಸ್ಕಾರ ಅವಕಾಶ ಕಲ್ಪಿಸದೆ ಸಮೀಪದ ಹಳ್ಳದ ದಂಡೆಯಲ್ಲಿ ಮಾಡಿ ಎಂದು ದಾರಿ ತಪ್ಪಿಸುವ ಮೂಲಕ ಸ್ಮಶಾನ ಭೂಮಿ ಕಬಳಿಕೆಗೆ ಮುಂದಾಗಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ತಾಲೂಕಿನ ಮಂಡಗಳ್ಳಿ ಗ್ರಾಮದಲ್ಲಿರುವ ದಲಿತರ ಸ್ಮಶಾನ ಭೂಮಿಯನ್ನು ಕೆಲ ಪಟ್ಟಭದ್ರ ಹಿತಾಸಕ್ತಿ ಜನರು ಸ್ಮಶಾನ ಭೂಮಿಯಲ್ಲಿ ತಮ್ಮ ಬಣಮೆಗಳನ್ನು ಒಟ್ಟಿದ್ದು, ಅಲ್ಲದೇ ಪಕ್ಕದ ತಮ್ಮ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಮಾರಾಟ ಮಾಡುತ್ತಿರುವ ಹಿನ್ನೆಲೆ ಸ್ಮಶಾನ ಭೂಮಿಯಲ್ಲಿ ಶವ ಸಂಸ್ಕಾರಕ್ಕೆ ಆಸ್ಪದ ನೀಡುತ್ತಿಲ್ಲವೆಂದು ಗ್ರಾಮದ ದಲಿತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಅಲ್ಲದೆ ಈ ಕುರಿತು ತಹಶೀಲ್ದಾರ್‌ ಗಮನಕ್ಕೆ ಸಾಕಷ್ಟು ಬಾರಿ ತಂದರೂ ಇಲ್ಲಿವರೆಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ದಲಿತರಿಗಾಗಿ ಶವ ಸಂಸ್ಕಾರ ಮಾಡಲು ಇಲ್ಲಿನ ಸರ್ವೇ ನಂ. 24ರಲ್ಲಿ 17 ಗುಂಟೆ ಜಮೀನನ್ನು ಬಹು ವರ್ಷಗಳ ಹಿಂದೆಯೇ ನೀಡಿದೆ. ಈಗಾಗಲೇ ಸ್ಮಶಾನ ಭೂಮಿ ಅತಿಕ್ರಮಿಸಿದ್ದು, ಅಲ್ಲದೆ ಮುಂದಿನ ಸ್ಥಳಕ್ಕೂ ಹೋಗಲು ರಸ್ತೆ ನೀಡದೆ ಶವ ಊಳಲು ಅಡ್ಡಗಾಲ ಹಾಕುತ್ತಿದ್ದಾರೆ. ಸಮೀಪದ ಹಳ್ಳದ ದಂಡೆಯಲ್ಲಿ ಸಂಸ್ಕಾರ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಗ್ರಾಮದ ದಲಿತರು ತಿಳಿಸಿದ್ದಾರೆ.

ಬಣಮೆ, ತಿಪ್ಪೆಗುಂಡಿ ಹಾಕಿಕೊಂಡು ಶವ ಸಂಸ್ಕಾರಕ್ಕೆ ಜಾಗವಿಲ್ಲದಂತೆ ಮಾಡಿದ್ದು, ಕೂಡಲೇ ತಾಲೂಕು ದಂಡಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಅತಿಕ್ರಮಣಗೊಂಡಿರುವ ದಲಿತರ ಸ್ಮಶಾನ ಭೂಮಿಯನ್ನು ಮರಳಿ ವಶಕ್ಕೆ ಒಪ್ಪಿಸಬೇಕೆಂದು ಮನವಿ ಮಾಡಿದ್ದಾರೆ.

ಬಹು ವರ್ಷಗಳ ಹಿಂದೆಯೇ ದಲಿತರ ಶವ ಸಂಸ್ಕಾರಕ್ಕಾಗಿ ನೀಡಿದ್ದ ಸ್ಮಶಾನ ಭೂಮಿಯೊಂದನ್ನು ಗ್ರಾಮದ ಕೆಲವರು ಅತಿಕ್ರಮಣ ಮಾಡಿದ್ದು, ಸ್ಮಶಾನ ಭೂಮಿಯಲ್ಲಿ ಶವ ಸಂಸ್ಕಾರ ಅವಕಾಶ ಕಲ್ಪಿಸದೆ ಸಮೀಪದ ಹಳ್ಳದ ದಂಡೆಯಲ್ಲಿ ಮಾಡಿ ಎಂದು ದಾರಿ ತಪ್ಪಿಸುವ ಮೂಲಕ ಸ್ಮಶಾನ ಭೂಮಿ ಕಬಳಿಕೆಗೆ ಮುಂದಾಗಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ತಾಲೂಕಿನ ಮಂಡಗಳ್ಳಿ ಗ್ರಾಮದಲ್ಲಿರುವ ದಲಿತರ ಸ್ಮಶಾನ ಭೂಮಿಯನ್ನು ಕೆಲ ಪಟ್ಟಭದ್ರ ಹಿತಾಸಕ್ತಿ ಜನರು ಸ್ಮಶಾನ ಭೂಮಿಯಲ್ಲಿ ತಮ್ಮ ಬಣಮೆಗಳನ್ನು ಒಟ್ಟಿದ್ದು, ಅಲ್ಲದೇ ಪಕ್ಕದ ತಮ್ಮ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಮಾರಾಟ ಮಾಡುತ್ತಿರುವ ಹಿನ್ನೆಲೆ ಸ್ಮಶಾನ ಭೂಮಿಯಲ್ಲಿ ಶವ ಸಂಸ್ಕಾರಕ್ಕೆ ಆಸ್ಪದ ನೀಡುತ್ತಿಲ್ಲವೆಂದು ಗ್ರಾಮದ ದಲಿತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಅಲ್ಲದೆ ಈ ಕುರಿತು ತಹಶೀಲ್ದಾರ್‌ ಗಮನಕ್ಕೆ ಸಾಕಷ್ಟು ಬಾರಿ ತಂದರೂ ಇಲ್ಲಿವರೆಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ದಲಿತರಿಗಾಗಿ ಶವ ಸಂಸ್ಕಾರ ಮಾಡಲು ಇಲ್ಲಿನ ಸರ್ವೇ ನಂ. 24ರಲ್ಲಿ 17 ಗುಂಟೆ ಜಮೀನನ್ನು ಬಹು ವರ್ಷಗಳ ಹಿಂದೆಯೇ ನೀಡಿದೆ. ಈಗಾಗಲೇ ಸ್ಮಶಾನ ಭೂಮಿ ಅತಿಕ್ರಮಿಸಿದ್ದು, ಅಲ್ಲದೆ ಮುಂದಿನ ಸ್ಥಳಕ್ಕೂ ಹೋಗಲು ರಸ್ತೆ ನೀಡದೆ ಶವ ಊಳಲು ಅಡ್ಡಗಾಲ ಹಾಕುತ್ತಿದ್ದಾರೆ. ಸಮೀಪದ ಹಳ್ಳದ ದಂಡೆಯಲ್ಲಿ ಸಂಸ್ಕಾರ ಮಾಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಗ್ರಾಮದ ದಲಿತರು ತಿಳಿಸಿದ್ದಾರೆ.

ಬಣಮೆ, ತಿಪ್ಪೆಗುಂಡಿ ಹಾಕಿಕೊಂಡು ಶವ ಸಂಸ್ಕಾರಕ್ಕೆ ಜಾಗವಿಲ್ಲದಂತೆ ಮಾಡಿದ್ದು, ಕೂಡಲೇ ತಾಲೂಕು ದಂಡಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಅತಿಕ್ರಮಣಗೊಂಡಿರುವ ದಲಿತರ ಸ್ಮಶಾನ ಭೂಮಿಯನ್ನು ಮರಳಿ ವಶಕ್ಕೆ ಒಪ್ಪಿಸಬೇಕೆಂದು ಮನವಿ ಮಾಡಿದ್ದಾರೆ.

ಕಳೆದ ಮೂರ್‍ನಾಲ್ಕು ಬಾರಿ ತಹಶೀಲ್ದಾರ್‌ಗೆ ದಲಿತರ ಸ್ಮಶಾನ ಭೂಮಿ ಅತಿಕ್ರಮಣ ಕುರಿತು ಅರ್ಜಿ ಸಲ್ಲಿಸಿದ್ದೇವೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೇ ಸ್ಮಶಾನ ಜಮೀನು ಸರ್ವೇ ನಂ. 24ರಲ್ಲಿ ಇರುವ 17 ಗುಂಟೆ ಅಳತೆ ಮಾಡಿಸಿ ಕೊಡಲಿ, ಆಕ್ರಮಿತ ಬಣಮೆ, ತಿಪ್ಪೆಗುಂಡೆಗಳನ್ನು ತೆರವುಗೊಳಿಸಲಿ. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ತಹಶೀಲ್ದಾರ್‌ ಕಚೇರಿ ಎದುರು ಧರಣಿ ಸತ್ಯಾಗ್ರಹ ಹೋರಾಟ ಅನಿವಾರ್ಯ.
ಹಣಮಂತ ಬೀರನೂರ,
ದಲಿತ ಮುಖಂಡ

ಮಂಡಗಳ್ಳಿ ಗ್ರಾಮದಲ್ಲಿ ದಲಿತರಿಗೆ ನೀಡಿದ ಸ್ಮಶಾನ ಭೂಮಿ ಅಷ್ಟೇ ಅಲ್ಲದೆ ಇನ್ನೂ ಕೆಲವು ಸರ್ಕಾರಿ ಜಮೀನುಗಳನ್ನು ಅಕ್ರಮವಾಗಿ ಸ್ವಾಧೀನ ಪಡಿಸಿಕೊಂಡು ಉಳುಮೆ ಮಾಡುತ್ತಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ಜಮೀನುಗಳ ಸರ್ವೇ ಮಾಡಿಸಿ ಮೂಲಕ ಭೂ ಕಬಳಿಕೆಯನ್ನು ಸರ್ಕಾರ ಸ್ವಾಧೀನತೆಗೆ ಪಡೆಯಬೇಕು.
ಸೋಪಣ್ಣ ಸಗರ,
ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.