ಶಹಾಪುರದಲ್ಲಿ ನೀರಿಗಾಗಿ ಹಾಹಾಕಾರ

ಬತ್ತಿ ಹೋದ ಕೊಳವೆ ಬಾವಿಗಳು•ನಾಗರಕೆರೆ-ಮಾವಿನಕೆರೆ ಈಗ ಬರಿದು•ಅಂತರ್ಜಲ ಕುಸಿತ

Team Udayavani, May 15, 2019, 11:16 AM IST

15-May-9

ಶಹಾಪುರ: ಚಾಮುಂಡಿ ನಗರದ ಜನರು ಸ್ವಂತ ಖರ್ಚಿನಲ್ಲೇ ಟ್ಯಾಂಕರ್‌ ತರಿಸಿ ನೀರು ತುಂಬಿಕೊಳ್ಳುತ್ತಿರುವುದು. (ಸಂಗ್ರಹ ಚಿತ್ರ)

ಶಹಾಪುರ: ನಗರದಲ್ಲಿ ಈಗ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನಗರದ ಜನರ ಜೀವನಾಡಿಯಾಗಿದ್ದ ನಾಗರ ಕೆರೆ ಮತ್ತು ಮಾವಿನ ಕೆರೆಗಳು ಬತ್ತಿ ಬರಿದಾಗಿವೆ. ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಅಂತರ್ಜಲ ಸಂಪೂರ್ಣ ಕುಸಿತಗೊಂಡಿದೆ.

ನಗರದ ವಾರ್ಡ್‌ ನಂ. 3, 4, 5, 6, 7, 8, 9, 10, 13 ಸೇರಿದಂತೆ ಬಹುತೇಕ ಬಡಾವಣೆಗಳಲ್ಲಿ ನೀರಿನ ಸಮಸ್ಯೆ ತಾಂಡವಾಡುತ್ತಿದೆ. ನೀರಿಗಾಗಿ ಹೊಸ ಕೊಳವೆ ಬಾವಿಗಳನ್ನು ತೋಡಿದರೂ ನೀರು ಬರುತ್ತಿಲ್ಲ. 300 ಫೀಟ್ ಆಳ ತೋಡಿದರೂ ನೀರು ಬೀಳುತ್ತಿಲ್ಲ.

ನಗರಕ್ಕೆ ನೀರು ಪೂರೈಸುತ್ತಿರುವ ಏಕೈಕ ಫಿಲ್ಟರ್‌ ಬೆಡ್‌ ಕೆರೆಯಲ್ಲೂ ನೀರಿಲ್ಲ. ಕಳೆದ ವಾರದ ಹಿಂದೆಯಷ್ಟೇ ಫಿಲ್ಟರ್‌ ಕೆರೆಗೆ ಕೃಷ್ಣಾ ಕಾಲುವೆ ಮೂಲಕ ನೀರು ತುಂಬುವ ಕಾರ್ಯ ನಡೆಯಿತು. ಆದರೂ ಫಿಲ್ಟರ್‌ ಬೆಡ್‌ ಕೆರೆ ಸಂಪೂರ್ಣ ತುಂಬಲಿಲ್ಲ.

ನಗರಸಭೆ ಪ್ರಸ್ತುತ ನಾಲ್ಕು ದಿನಕ್ಕೊಮ್ಮೆ ನೀರು ಬಿಡುತ್ತಿದೆ. ಅದು ಸಮರ್ಪಕವಾಗಿ ತಲುಪುತ್ತಿಲ್ಲ. ಕೆಲವೆಡೆ ಕಿರು ನೀರು ಸರಬರಾಜು ವ್ಯವಸ್ಥೆ ಇದೆ. ಆದರೆ ಕೊಳವೆ ಬಾವಿಯಲ್ಲಿ ನೀರು ಬಾರದ ಕಾರಣ ಕಿರು ನೀರು ಸರಬರಾಜು ಸ್ಥಗಿತಗೊಂಡಿವೆ.

ನಗರದ ಚಾಮುಂಡಿ ಬಡಾವಣೆಯಲ್ಲಿ ನೀರಿನ ಸಮಸ್ಯೆ ಸಾಕಷ್ಟಿದೆ. ಹತ್ತಾರು ಬಾರಿ ನಗರಸಭೆ ಮೆಟ್ಟಿಲೇರಿದರೂ, ಪ್ರತಿಭಟನೆ ನಡೆಸಿದರೂ ನೀರೊದಗಿಸುವ ಕಾರ್ಯ ಮಾಡಲಾಗಿಲ್ಲ. ಚಾಮುಂಡಿ ಬಡಾವಣೆ ನಾಗರಿಕರು ಸ್ವಂತ ಖರ್ಚಿನಲ್ಲೇ ಟ್ಯಾಂಕರ್‌ ನೀರು ತರಿಸಿಕೊಂಡ ಉದಾಹರಣೆಗಳಿವೆ.

ಇಲ್ಲಿ ಬಡವರ ಬವಣೆ ಕೇಳುವವರಿಲ್ಲ. ಜನಪ್ರತಿನಿಧಿಗಳು ಹಾಯಾಗಿರುತ್ತಾರೆ. ಆದರೆ ನಾವಿಲ್ಲಿ ಹನಿ ನೀರಿಗಾಗಿ ಹಗಲು-ರಾತ್ರಿಯೆನ್ನದೇ ಪರದಾಡುವಂತಾಗಿದೆ ಎನ್ನುತ್ತಾರೆ ಚಾಮುಂಡಿ ನಗರ ನಿವಾಸಿ ಮಹ್ಮದ್‌ ಅಲಿ.

ಶಾಶ್ವತ ಯೋಜನೆ ರೂಪಿಸಲಿ: ನಗರಕ್ಕೆ ಸಮೀಪದ ಸನ್ನತಿ ಬ್ರೀಜ್‌ ಕಂ ಬ್ಯಾರೇಜ್‌ ಮೂಲಕ ಕುಡಿಯುವ ನೀರಿನ ಯೋಜನೆ ಜಾರಿಯಾದಲ್ಲಿ ನಗರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ನಗರಸಭೆ ಆಡಳಿತ, ಶಾಸಕರು, ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು. ಹಾಲಿ ಶಾಸಕ ದರ್ಶನಾಪುರ ಮುತುವರ್ಜಿವಹಿಸಿ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಬೇಕು ಎಂಬುದು ನಾಗರಿಕರ ಆಗ್ರಹ.

ಕುಡಿಯುವ ನೀರಿನ ಸಮಸ್ಯೆ ಭೀಕರತೆ ಕಾಣುತ್ತಿರುವ ಸಂದರ್ಭದಲ್ಲೇ ನಗರಸಭೆ ಚುನಾವಣೆ ಎದುರಿಸುವಂತಾಗಿದೆ. ನಮ್ಮ ಬಡಾವಣೆಗೆ ಯಾರು ಕುಡಿವ ನೀರಿನ ವ್ಯವಸ್ಥೆ ಮಾಡುತ್ತಾರೋ ಅವರಿಗೆ ಮತ ನೀಡುತ್ತೇವೆ ಎಂಬುದು ಮತದಾರರ ಮಾತು.

ಇಂದಿರಾ ನಗರಕ್ಕೆ ಮನಸ್ಸು ಬಂದಾಗ ನೀರು ಬಿಡುತ್ತಾರೆ. ನಾವು ಜಾತಕ ಪಕ್ಷಿಯಂತೆ ನೀರು ಬಿಟ್ಟಿದ್ದಾರೋ ಇಲ್ಲವೋ ಎಂದು ಕಾಯಬೇಕು. ನೀರಿಗಾಗಿ ನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕನಿಷ್ಟ ಟ್ಯಾಂಕರ್‌ ಮೂಲಕವಾದರೂ ನೀರು ಪೂರೈಸಬೇಕು. ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು.
ಅನುಸೂಯಾ ವಿ.ಎಲ್.,
ನಿವೃತ್ತ ಎಸ್‌ಟಿಒ. ಇಂದಿರಾ ನಗರ

ಮಳೆ ಅಭಾವದಿಂದ ಕೆರೆಗಳು ಬತ್ತಿದ್ದು, ನಗರದಲ್ಲಿ ಅಂತರ್ಜಲ ಕುಸಿದ ಪರಿಣಾಮ ಕೊಳವೆ ಬಾವಿಗಳು ಬತ್ತಿವೆ. ಹೀಗಾಗಿ ನೀರಿನ ಸಮಸ್ಯೆ ಉದ್ಭವವಾಗಿದೆ. ಸುಮಾರು 200 ಕೊಳವೆ ಬಾವಿಗಳು ಬತ್ತಿರುವ ಮಾಹಿತಿ ಇದೆ. ಯಾವುದೇ ನಗರಕ್ಕೆ ಟ್ಯಾಂಕರ್‌ ನೀರು ಸರಬರಾಜು ವ್ಯವಸ್ಥೆ ಮಾಡಿಲ್ಲ. ನಾಲ್ಕು ದಿನಕ್ಕೊಮ್ಮೆ ಫಿಲ್ಟರ್‌ ಬೆಡೆ ಕೆರೆ ನೀರು ಬಿಡಲಾಗುತ್ತಿದೆ. ಆದರೂ ಜನರಿಂದ ನೀರಿನ ಸಮಸ್ಯೆ ಬಗ್ಗೆ ದೂರು ಬಂದಿವೆ. ಸದ್ಯ ಚುನಾವಣೆ ಕರ್ತವ್ಯದಲ್ಲಿದ್ದು, ಕೂಡಲೇ ವ್ಯವಸ್ಥೆ ಮಾಡಲಾಗುವುದು.
•ಬಸವರಾಜ ಶಿವಪೂಜೆ,
ಪೌರಾಯುಕ್ತ

ಮಲ್ಲಿಕಾರ್ಜುನ ಮುದ್ನೂರ

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.