ಪುಸ್ತಕಗಳಿಂದ ಜ್ಞಾನ ಹೆಚ್ಚಳ
ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಿ: ಸಾಹಿತಿ ಹೊನ್ಕಲ್
Team Udayavani, Aug 11, 2019, 1:02 PM IST
ಶಹಾಪುರ: ನಗರದ ಸುಮಿತ್ರಾ ಸ್ಮಾರಕ ಶಾಲೆಯಲ್ಲಿ ನಡೆದ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಕಾರ್ಯಕ್ರಮವನ್ನು ಕಸಾಪ ಅಧ್ಯಕ್ಷ ಸಿದ್ದಲಿಂಗಣ್ಣ ಆನೇಗುಂದಿ ಉದ್ಘಾಟಿಸಿದರು.
ಶಹಾಪುರ: ವಿವಿಧ ಬಗೆಯ ಸಾಹಿತ್ಯ ಪ್ರಕಾರದ ಉತ್ತಮ ಪುಸ್ತಕಗಳನ್ನು ಓದುವುದರಿಂದ ಸೃಜನಶೀಲತೆ ಹಾಗೂ ಕ್ರಿಯಾಶೀಲತೆ ಜೊತೆಗೆ ಮನುಷ್ಯನ ಜ್ಞಾನ ಭಂಡಾರ ಹೆಚ್ಚಾಗಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ದಲಿಂಗಣ್ಣ ಆನೇಗುಂದಿ ಹೇಳಿದರು.
ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ವತಿಯಿಂದ ನಗರದ ಸುಮಿತ್ರಾ ಪಿ. ಸ್ಮಾರಕ ಪ್ರೌಢಶಾಲೆಯಲ್ಲಿ ನಡೆದ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೆಲವೊಮ್ಮೆ ಪುಸ್ತಕಗಳಿಂದ ತಮ್ಮ ಬದುಕನ್ನೆ ಬದಲಾವಣೆ ಮಾಡಿಕೊಂಡ ಸಾಕಷ್ಟು ಉದಾಹರಣೆಗಳು ನಮ್ಮಲ್ಲಿವೆ. ಪುಸ್ತಕಗಳು ಕೆಲವರಿಗೆ ಧೈರ್ಯ ತುಂಬುತ್ತವೆ. ಸಾಧನೆ ಶಿಖರವೇರಲು ಪ್ರೇರಣೆ ನೀಡುತ್ತವೆ ಎಂದರು.
ಸಾಹಿತಿ ಚಂದ್ರಕಾಂತ ಕರದಳ್ಳಿ ಮಾತನಾಡಿ, ಪುಸ್ತಕಗಳು ವ್ಯಕ್ತಿಯ ಸಾಧನೆಯ ಪ್ರತೀಕಗಳಾಗಿವೆ. ಆದ್ದರಿಂದ ಶಿಕ್ಷಕರು ಮಕ್ಕಳಿಗೆ ವ್ಯಕ್ತಿತ್ವ ಬೆಳೆಸುವಂತಹ ಪುಸ್ತಕಗಳನ್ನು ಓದುವಂತೆ ಸಲಹೆ ನೀಡಬೇಕು ಎಂದರು.
ಸಾಹಿತಿ ಸಿದ್ಧರಾಮ ಹೊನ್ಕಲ್ ಮಾತನಾಡಿ, ಪುಸ್ತಕಗಳು ಮೌಲ್ಯಯುತ ಸಂಬಂಧಗಳನ್ನು ಗಟ್ಟಿಗೊಳಿಸುವುದಲ್ಲದೆ, ಸುಸಂಸ್ಕೃತ ಬದುಕಿಗೆ ಸ್ಫೂರ್ತಿದಾಯಕ ಆಗಬಲ್ಲವು. ಕಾರಣ ಮಕ್ಕಳಿಗೆ ಚಿಕ್ಕಂದಿನಿಂದ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಬೇಕು ಎಂದು ತಿಳಿಸಿದರು.
ಅಚ್ಚುಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆಯಲ್ಲಿ ಸುಮಾರು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು ನಾಡಿನ ಹಿರಿಯ ಸಾಹಿತಿಗಳ ಪುಸ್ತಕಗಳನ್ನು ಓದಿ ಅದರ ಅಭಿಪ್ರಾಯ ವ್ಯಕ್ತಪಡಿಸಿದರು.
10ನೇ ತರಗತಿ ವಿದ್ಯಾರ್ಥಿ ಅರುಣ್, ಸಿದ್ದಣ್ಣ ಕುಂಬಾರ ರಚಿಸಿರುವ ಶಹಾಪುರದ ಪರಿಸರ ಶಾಸನಗಳು ಮತ್ತು ದೇವಾಲಯಗಳು ಪುಸ್ತಕದ ಕುರಿತು ಅಭಿಪ್ರಾಯ ಮಂಡಿಸಿ ಪ್ರಥಮ ಸ್ಥಾನ ಪಡೆದರೆ, ವಿದ್ಯಾರ್ಥಿನಿ ಸವಿತಾ ಜೀವಿಶಾಸ್ತ್ರಿ ಅವರು ರಚಿಸಿರುವ ಬೇಂದ್ರೆಯವರ ಬದುಕಿನ ಸಾರಾಂಶ ಕುರಿತು ಅಭಿಪ್ರಾಯ ಮಂಡಿಸಿ ದ್ವಿತೀಯ ಸ್ಥಾನ ಪಡೆದರು. ಇತರೆ ವಿದ್ಯಾರ್ಥಿಗಳು ಹಲವಾರು ಕೃತಿ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು. ಡಾ| ಮೋನಪ್ಪ ಶಿರವಾಳ, ಬಸವರಾಜ ಸಿನ್ನೂರು, ಸಣ್ಣ ನಿಂಗಣ್ಣ ನಾಯ್ಕೋಡಿ, ರವೀಂದ್ರನಾಥ ಪತ್ತಾರ, ಶೈಲಜಾ ಪತ್ತಾರ ಉಪಸ್ಥಿತರಿದ್ದರು. ಶಾಲೆಯ ಮುಖ್ಯಗುರು ವೆಂಕಟೇಶರಾವ್ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಈರಮ್ಮ ಉಪಾಸೆ ಪ್ರಾರ್ಥಿಸಿದರು. ರೇಣುಕಾ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ