ಪರೋಪಕಾರಂ ತಂಡದಿಂದ ಮಾದರಿ ಕಾರ್ಯ!

ಪ್ರತೀ ಭಾನುವಾರ ಸ್ವಚ್ಛತಾ ಕಾರ್ಯ ಮಾಡುವ ತಂಡ ಪರಿಸರ ಸ್ವಚ್ಛತೆ, ಜಾಗೃತಿಯೇ ತಂಡದ ಗುರಿ

Team Udayavani, Nov 13, 2019, 1:44 PM IST

13-November-13

„ರಘು ಶಿಕಾರಿ
ಶಿಕಾರಿಪುರ:
ಭಾನುವಾರ ಬಂತು ಎಂದರೆ ಸಾಕು ಸ್ವಚ್ಛತೆಗೆ ಇಳಿಯುತ್ತದೆ ಈ ತಂಡ. ಪಟ್ಟಣದಲ್ಲಿ ಸ್ವಚ್ಛತೆಗೆ ಮಾದರಿಯಾದ ಪರ ಉಪಕಾರಿ ಈ ತಂಡ ಪರೋಪಕಾರಂ..!

ಸ್ವಚ್ಛತೆ ಪ್ರತಿಯೊಬ್ಬರ ಧ್ಯೇಯ. ಆದರೆ ಅದರ ಅದನ್ನು ಅನುಷ್ಠಾನ ಮಾಡುವುದು ತುಂಬಾ ಕಷ್ಟ. ಸ್ವಾರ್ಥ ಪ್ರಪಂಚದಲ್ಲಿ ಜನರು ತಮ್ಮ ಮನೆಯ ಸ್ವಚ್ಛತೆಗೆ ನೀಡುವ ಪ್ರಾಶಸ್ತ್ಯವನ್ನು ಸರ್ಕಾರಿ ಕಚೇರಿಗಳಿಗೆ ನೀಡುವುದಿಲ್ಲ. ಸರ್ಕಾರಿ ಕಚೇರಿಗಳನ್ನು ಸ್ವಚ್ಛಗೊಳಿಸುವವರು ಯಾರು. ಜನರಿಗೆ ಸ್ವಚ್ಛತೆಯ ಪಾಠ ಹೇಳುವುದು ಯಾರು? ಎಲ್ಲರೂ ಹೇಳುವವರಾದರೆ ಸ್ವತ್ಛತೆ ಮಾಡುವವರು ಯಾರು ಎಂಬುದಕ್ಕೆ ಈ ಪರೋಪಕಾರಂ ತಂಡ ಇಡೀ ತಾಲೂಕಿಗೆ ಮಾದರಿಯಾಗಿದೆ.

ಸ್ವಚ್ಛತೆ, ಪರಿಸರ, ಜನ ಜಾಗೃತಿ ಈ ಮೂರು ಅಂಶಗಳನ್ನು ಮುಖ್ಯ ಗುರಿಯಾಗಿಸಿಕೊಂಡು ಪ್ರತಿ ಭಾನುವಾರ 70-80 ಜನರು ಸೇರಿ ಸ್ವತ್ಛತಾ ಕಾರ್ಯ ಕೈಗೊಳ್ಳುತ್ತಾರೆ. ಈ ತಂಡದಲ್ಲಿ ಯಾವುದೇ ಅಧಿಕಾರಿ, ಬಡವ, ಬಲ್ಲಿದ, ಜಾತಿ, ಮತ- ಪಂಥಗಳಿಲ್ಲದೇ ಯಾರು ಬೇಕಾದರೂ ಬಂದು ಸೇವಾ ಕಾರ್ಯವನ್ನು ಮಾಡಬಹುದು ಎಂದು ತಂಡದವರು ಕರೆ ನೀಡಿದ್ದಾರೆ.

ಶಿಕಾರಿಪುರದ ಪರೋಪಕಾರಂ ತಂಡ ಇದುವರೆಗೂ ತಾಲೂಕು ಕಚೇರಿ, ಬಿಇಒ ಕಚೇರಿ, ಕೆಇಬಿ ಕಚೇರಿ, ದತ್ತಮಂದಿರ, ರಂಗಮಂದಿರ ಹೀಗೆ ಈವರೆಗೂ ಅನೇಕ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸಿದೆ. ಈ ತಂಡ ಜನರಲ್ಲಿ ಯುವ ಜನತೆಯಲ್ಲಿ ಸ್ವತ್ಛತೆಯ ಜೊತೆ ನಮ್ಮ ಊರನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಕರ್ತವ್ಯ ಎಂಬ ಪಾಠವನ್ನು ಹೇಳುತ್ತದೆ. ಸ್ವಚ್ಛತೆ ಮಾಡಿ ಇಡೀ ತಾಲೂಕಿನಲ್ಲಿಯೇ ಸ್ವಚ್ಛತೆ ಎಂದರೆ ಪರೋಪಕಾರಂ ತಂಡ ಎನ್ನುವಷ್ಟರ ಮಟ್ಟಿಗೆ ಕೀರ್ತಿಗೆ ಪಾತ್ರವಾಗಿದೆ.

ಈ ತಂಡದಲ್ಲಿ ಬಹುತೇಕ ಸರ್ಕಾರಿ ನೌಕರರು ಮತ್ತು ಉದ್ಯಮಿಗಳು, ರೈತರು, ಕೂಲಿ ಕಾರ್ಮಿಕರು, ಜನಪ್ರತಿನಿಧಿಗಳು, ಶಾಲಾ ಮಕ್ಕಳು, ವಿದ್ಯಾರ್ಥಿಗಳು, ಮಹಿಳೆಯರು ಎಲ್ಲರೂ ಕೂಡ ಭಾಗವಹಿಸುತ್ತಾರೆ.

ವಾಟ್ಸ್‌ ಆ್ಯಪ್‌ ಮೂಲಕವೇ ಸೇರುತ್ತಾರೆ ಜನ: ಈಗಾಗಲೇ 16 ಆಯ್ದ ಸ್ಥಳಗಳನ್ನು ಸ್ವತ್ಛಗೊಳ್ಳಿಸಿದ್ದು ಪ್ರತಿ ಭಾನುವಾರ ಒಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು ಮುಂಚಿತವಾಗಿ ಸ್ವಚ್ಛತೆಗೆ ಬೇಕಾದ ಸಾಮಗ್ರಿಗಳನ್ನು ತಯಾರಿ ಮಾಡಿಕೊಳ್ಳುತ್ತಾರೆ. ಈ ತಂಡದ ವಿಶೇಷ ಎಂದರೆ ಯಾರಿಗೂ ಕೂಡ ಕರೆ ಮಾಡುವುದಿಲ್ಲ. ಸ್ವ- ಇಚ್ಛೆಯಿಂದ ವಾಟ್ಸ್‌ ಆ್ಯಪ್‌ ಗ್ರೂಪ್‌ನಲ್ಲಿ ಮೇಸೇಜ್‌ ಓದಿಕೊಂಡು ಸ್ವತ್ಛತೆ ಕಾರ್ಯದಲ್ಲಿ ಭಾಗವಹಿಸುತ್ತಾರೆ.

ವೈಯಕ್ತಿಕ ಹೆಸರು ಬಳಸುವಂತಿಲ್ಲ: ಸ್ವಚ್ಛತೆ ಕಾರ್ಯಕ್ರಮಕ್ಕೆ ಆಗಮಿಸುವ ಯಾವುದೇ ವ್ಯಕ್ತಿಯೂ ಸಮಾಜದಲ್ಲಿ ಎಷ್ಟೇ ಪ್ರಭಾವಿ ಆಗಿದ್ದರೂ ತಮ್ಮ ಹೆಸರನ್ನು ಬಳಸಿಕೊಂಡು ಸ್ವಚ್ಛತೆಗೆ ಭಾಗವಹಿಸುವಂತಿಲ್ಲ ಮತ್ತು ಪತ್ರಿಕೆಗಳಲ್ಲಿ ಕೂಡ ಹೆಸರನ್ನು ನೀಡುವಂತಿಲ್ಲ. ಏಕೆಂದರೆ ಸಂಘಟನೆ ಭದ್ರವಾಗಿರುವ ಉದ್ದೇಶದಿಂದ ಈ ನಿಯಮ ಪಾಲಿಸಲಾಗುತ್ತಿದೆ. ಅನೇಕ ಜನಪ್ರತಿನಿಧಿಗಳು ಸರ್ಕಾರಿ ನೌಕರರು, ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗಳಿದ್ದು ವ್ಯಕ್ತಿ ಪ್ರತಿಷ್ಠೆ ಅಡ್ಡ ಬರಬಾರದು ಎಂದು ಈ ನಿಯಮ ಹಾಕಿಕೊಂಡಿದ್ದಾರೆ.

ಇನ್ನು ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಕ್ಕೂ ಈ ಸ್ವಚ್ಛತಾ ಅಭಿಯಾನ ಅಯೋಜನೆ ಮಾಡಲಾಗುವುದು ಮತ್ತು ಶಿಕಾರಿಪುರದ ಪ್ರತಿ ವಾರ್ಡ್‌ಗಳಲ್ಲೂ ಸ್ಥಳೀಯ ವಾಸಿಗಳಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿ ತಮ್ಮ ಬೀದಿ ರಸ್ತೆಗಳನ್ನು ತಾವೇ ಸ್ವಚ್ಛಗೊಳಿಸಿಕೊಳ್ಳುವಂತೆ ಉತ್ತೇಜನ ನೀಡಲಾಗುವುದು ಎಂದು ತಂಡದ ಸದಸ್ಯರು ತಿಳಿಸಿದ್ದಾರೆ.

ಸ್ವಚ್ಛತೆಗೆ ಜೊತೆಗೆ ಮನರಂಜನೆ: ಪ್ರತಿವಾರ ಸ್ವತ್ಛತೆ ಮಾತ್ರವಲ್ಲ. ಅದರ ಜೊತೆ ಮನರಂಜನೆ, ಕ್ರೀಡೆ ಕೂಡ ನಡೆಸಬೇಕು. ಸ್ವಚ್ಛತೆಯ ನಂತರ ಉಪಾ‌ಹಾರ ಸೇವಿಸಿ ಕ್ರೀಡೆ ಮನರಂಜನೆ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಎಷ್ಟೋ ಜನರು ತಮ್ಮ ಕೆಲಸದ ಒತ್ತಡದಲ್ಲಿ ತಮ್ಮ ಬಾಲ್ಯದ ಕ್ರೀಡೆ, ಮನರಂಜನೆಗಳನ್ನು ಮರೆತಿರುತ್ತಾರೆ. ಅದನ್ನು ಮತ್ತೆ ನೆನಪಿಸಿ ಸಂತೋಷವನ್ನು ಹಂಚುವ ಒಂದು ಪ್ರಯತ್ನ ಇದರ ಉದ್ದೇಶವಾಗಿದೆ. ಒಟ್ಟಿನಲ್ಲಿ ಪಟ್ಟಣದಲ್ಲಿ ಸ್ವಚ್ಛತೆಯ ಬಗ್ಗೆ ಪರಿಸರದ ಬಗ್ಗೆ ಕಾಳಜಿ ಹೊಂದಿ ಯಾವುದೇ ಅಪೇಕ್ಷೆ ಇಲ್ಲದೇ ನಿಸ್ವಾರ್ಥ ಸೇವೆ ಮಾಡುತ್ತಿರುವ ತಂಡ ಇನ್ನೂ ಹೆಚ್ಚಾಗಿ ಬೆಳೆಯಲಿ. ಇನ್ನೂ ಸಾವಿರಾರು ಸಂಖ್ಯೆಯಲ್ಲಿ ಜನರು ಸ್ವತ್ಛತೆಯ ಬಗ್ಗೆ ಅರಿತು ಸೇವೆ ಸಲ್ಲಿಸಲಿ ಎಂಬುದೇ ಆಶಯ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.