ಓದುಗರಿದ್ದರೂ ಪುಸ್ತಕಗಳದ್ದೇ ಕೊರತೆ

ನಿಯತಕಾಲಿಕೆಗಳಿಗಿದೆ ಬೇಡಿಕೆಪ್ರತಿನಿತ್ಯ 300ಕ್ಕೂ ಹೆಚ್ಚು ಓದುಗರ ಭೇಟಿ

Team Udayavani, Oct 27, 2019, 4:16 PM IST

27-October-29

ಶಿಕಾರಿಪುರ: ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪನರು ಮೊದಲ ಬಾರಿ ಮುಖ್ಯಮಂತ್ರಿಯಾದ ಬಳಿಕ ಶಿಕಾರಿಪುರ ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಅದರಲ್ಲಿ ಗ್ರಂಥಾಲಯವೂ ಒಂದಾಗಿದೆ. ಶಿಶುವಿಹಾರ ರಸ್ತೆಯಲ್ಲಿ ಬಸ್‌ ನಿಲ್ದಾಣಕ್ಕೆ ಹತ್ತಿರವಿರುವ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಿಸಲಾಗಿದ್ದು ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಗ್ರಂಥಪಾಲಕ ಸಹಾಯಕರ ಕೊರತೆ ಪ್ರಮುಖ ಸಮಸ್ಯೆಯಾಗಿದೆ.

ಪಟ್ಟಣದ ಗ್ರಂಥಾಲಯದಲ್ಲಿ ಒಟ್ಟು 46000 ಸಾವಿರಕ್ಕೂ ಹೆಚ್ಚು ಪುಸ್ತಕಗಳಿದ್ದು ಕನ್ನಡ, ಇಂಗ್ಲಿಷ್‌, ಹಿಂದಿ, ಉರ್ದು, ತೆಲುಗು, ತಮಿಳು ಹೀಗೆ ಅನೇಕ ಭಾಷಾ ಪುಸ್ತಕಗಳಿವೆ. 2657 ಒಟ್ಟು ಸದಸ್ಯರು ನೋಂದಣಿಯಾಗಿದ್ದಾರೆ. ಅದರಲ್ಲಿ 1515 ಪುರುಷರು ಹಾಗೂ 1142 ಮಹಿಳಾ ಸದಸ್ಯರು ಇದ್ದಾರೆ.

ಪ್ರತಿನಿತ್ಯ 300ಕ್ಕೂ ಹೆಚ್ಚು ಓದುಗರು ಭೇಟಿ ನೀಡಿ ತಮ್ಮ ಜ್ಞಾನದ ಹಸಿವನ್ನು ನೀಗಿಸಿಕೊಳ್ಳುತ್ತಿದ್ದಾರೆ. ಗ್ರಂಥಾಲಯ ಎರಡು ಮಹಡಿಯ ಬೃಹತ್‌ ಸುಸಜ್ಜಿತವಾದ ಕಟ್ಟಡ ಹೊಂದಿದೆ. ಉತ್ತಮ ಸೌಲಭ್ಯಗಳಿವೆ. ಕೆಳ ಮಹಡಿಯಲ್ಲಿ ಪತ್ರಿಕಾ ವಿಭಾಗ ಇದ್ದು ಇಲ್ಲಿ ದಿನಕ್ಕೆ 30 ಕನ್ನಡ ಪತ್ರಿಕೆಗಳು, ಎರಡು ಇಂಗ್ಲಿಷ್‌ ಪತ್ರಿಕೆಗಳು, 21 ನಿಯತಕಾಲಿಕೆಗಳು ಬರುತ್ತವೆ. ಒಂದನೇ ಮಹಡಿಯಲ್ಲಿ ಪುಸ್ತಕಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪುಸ್ತಕಗಳನ್ನು ಓದಲು ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಂಥಾಲಯಕ್ಕೆ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಆದರೆ ಜಿಲ್ಲಾ ಕೇಂದ್ರ ಗ್ರಂಥಾಲಯವಾಗಿದ್ದು ಅಧಿಕೃತವಾಗಿ ಗ್ರಂಥಾಲಯದಲ್ಲಿ ಗ್ರಂಥಪಾಲಕರು ಒಬ್ಬರೇ ಇದ್ದಾರೆ. ಎರಡು ವಿಭಾಗಗಳನ್ನು ಒಬ್ಬರೇ ನಿರ್ವಹಿಸಬೇಕಾಗಿರುವುದರಿಂದ ಸಾಕಷ್ಟು ಸಮಸ್ಯೆಯಾಗಿದೆ.

ಗ್ರಾಮೀಣ ಭಾಗದಲ್ಲಿ 44 ಉಪ ಗ್ರಂಥಾಲಯ: ತಾಲೂಕಿನ ಎಲ್ಲಾ ಗ್ರಾಪಂಗಳಲ್ಲೂ ಗ್ರಂಥಾಲಯಗಳು ಇದ್ದು ಒಂದು ಅಲೆಮಾರಿ ಗ್ರಂಥಾಲಯ ಕೆಂಗಟ್ಟೆ ಗ್ರಾಮದಲ್ಲಿದೆ. ಒಂದು ಉಪ ಗ್ರಂಥಾಲಯಕ್ಕೆ ತಿಂಗಳಿಗೆ 400 ರೂ. ಗಳನ್ನು ಮಾತ್ರ ನೀಡಲಾಗುತ್ತಿದ್ದು ದಿನಕ್ಕೆ 2 ಪತ್ರಿಕೆಗಳು ಮತ್ತು ತಿಂಗಳಿಗೆ 1 ನಿಯತಕಾಲಿಕೆಯನ್ನು ತರಿಸಲಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವ ನಿಯತಕಾಲಿಕೆಗಳ ಬೇಡಿಕೆ ಇದೆ. ಇನ್ನು ಪುಸ್ತಕಗಳ ಕೊರತೆ ಇದೆ. ಸರ್ಕಾರಿ ಹುದ್ದೆಗಳಿಗೆ ಅನುಕೂಲವಾಗುವ ಪುಸ್ತಕಗಳ ಅವಶ್ಯಕತೆ ಇದೆ.

ಡಿಜಿಟಲ್‌ ಗ್ರಂಥಾಲಯ ಆರಂಭ: 2ನೇ ಮಹಡಿಯಲ್ಲಿ ಡಿಜಿಟಲ್‌ ಗ್ರಂಥಾಲಯ ನಿರ್ಮಾಣವಾಗಲಿದೆ. ಎರಡನೇ ಡಿಜಿಟಲ್‌ ಗ್ರಂಥಾಲಯ ಈಗಾಗಲೇ ಇಲಾಖೆಯ ವತಿಯಿಂದ ಮಂಜೂರಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ ಎಂದು ಗ್ರಂಥಪಾಲಕ ಸಚಿನ್‌ ತಿಳಿಸಿದ್ದಾರೆ. ತಾಲೂಕಿನಲ್ಲಿ ಬಹುತೇಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ವಿದ್ಯಾರ್ಥಿಗಳು ಹೆಚ್ಚಾಗಿ ಗ್ರಂಥಾಲಯಕ್ಕೆ ಆಗಮಿಸುತ್ತಿದ್ದು ಬಡ ವಿದ್ಯಾರ್ಥಿಗಳಿ ಡಿಜಿಟಲ್‌ ಮಾಧ್ಯಮದ ಬಳಕೆಗೆ ಅನುಕೂಲವಾಗಲಿದೆ. ಇಂಟರ್ನೆಟ್‌ ಬಳಕೆಯಿಂದ ಸಾಕಷ್ಟು ಮಾಹಿತಿಗಳನ್ನು ತಿಳಿದುಕೊಳ್ಳುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.