ಕೊನೇ ದಿನ ನಾಮಪತ್ರಗಳ ಸುರಿಮಳೆ!

ನಾಮಪತ್ರ ಸಲ್ಲಿಕೆಗೆ ಮುಗಿಬಿದ್ದ ವಿವಿಧ ಪಕ್ಷಗಳ ನಾಯಕರು•ಕಣಕ್ಕೆ ಧುಮುಕುವಲ್ಲಿ ಪಕ್ಷೇತರರದ್ದೇ ಪಾರಮ್ಯ

Team Udayavani, May 17, 2019, 4:41 PM IST

17-MAY-30

ಶಿಕಾರಿಪುರ: ಪಟ್ಟಣದ ಪುರಸಭೆ ಚುನಾವಣೆಗೆ ಬಿಜೆಪಿಯ ಟಿಎಸ್‌. ಮೋಹನ್‌ ನಾಮಪತ್ರ ಸಲ್ಲಿಸಿದರು.

ಶಿಕಾರಿಪುರ: ಪಟ್ಟಣದ ಪುರಸಭೆಗೆ ತನ್ನದೇ ಆದ ಇತಿಹಾಸವಿದೆ. ರಾಜ್ಯದಲ್ಲಿ ಶರವೇಗದಲ್ಲಿ ಬೆಳೆಯುತ್ತಿರುವ ಪಟ್ಟಣದಲ್ಲಿ ಶಿಕಾರಿಪುರ ಕಳೆದ ನಾಲ್ಕು ದಶಕಗಳ ಹಿಂದೆ ಅತಿ ಹಿಂದುಳಿದ ತಾಲೂಕೆಂದು ನಂಜುಂಡಪ್ಪ ವರದಿಯಲ್ಲಿ ಪ್ರಸ್ತಾಪವಾಗಿತ್ತು. ಈಗ ನಿರಂತರ ಅಭಿವೃದ್ಧಿಯಿಂದ ಹೊಸ ಬದಲಾವಣೆಯತ್ತ ಕಾಲಿಟ್ಟಿದೆ. ರಾಷ್ಟ್ರೀಯ ಹೆದ್ದಾರಿ ಮೂಲ ಸೌಕರ್ಯಗಳಿಂದ ಶಿಕಾರಿಪುರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ಒಂದು ಅವಧಿ ಬಿಟ್ಟರೆ ಬಹುತೇಕ ಬಿಜೆಪಿ ಹಿಡಿತದಲ್ಲಿಯೇ ಶಿಕಾರಿಪುರ ಪುರಸಭೆಯ ಆಡಳಿತ ಇದೆ. ಹಿಂದಿನ ಆಡಳಿತಲ್ಲಿ 15 ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಈ ಬಾರಿ ಚುನಾವಣೆ ಬಹುತೇಕ ರಂಗೇರಿದ್ದು ಯುವಕರು, ಹೊಸಬರು ಮತ್ತು 3 ಜನ ಪತ್ರಕರ್ತರು ಕಣದಲ್ಲಿದ್ದಾರೆ. ಬಿಜೆಪಿ ಇಬ್ಬರು ಪತ್ರಕರ್ತರಿಗೆ ಸ್ಥಾನ ಕಲ್ಪಿಸಿ ಕೊಟ್ಟಿದ್ದು ಒಬ್ಬರು ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.

ಈ ಬಾರಿ ಪಕ್ಷೇತರರು ಅಧಿಕ ಸಂಖ್ಯೆಯಲ್ಲಿ ಕಣದಲ್ಲಿದ್ದಾರೆ. ಬುಧವಾರ 40 ಮಂದಿ ನಾಮಪತ್ರ ಸಲ್ಲಿಸಿದ್ದು ಕೊನೆಯ ದಿನವಾದ ಗುರುವಾರ 55 ನಾಮಪತ್ರಗಳು ಸಲ್ಲಿಕೆಯಾಗಿವೆ. ಅದರಲ್ಲಿ ಬಿಜೆಪಿ ನಾಲ್ಕು ಜನ ಅಲ್ಪಸಂಖ್ಯಾತರಿಗೆ ಸ್ಥಾನ ಕಲ್ಪಿಸಿದೆ. ಆರು ಜನ ವೀರಶೈವರು, ಆರು ಜನ ಕುರುಬರು, 2 ಎಸ್‌ ಸಿ, 1 ಎಸ್‌ಟಿ ಗಳಿಗೆ ಹಾಗೂ 1 ಬಂಟ್ಸ್‌ , 1 ಭೋವಿ ಜನಾಂಗಕ್ಕೆ ಅವಕಾಶ ಮಾಡಿಕೊಟ್ಟಿದ್ದು ಪ್ರತಿ ವಾರ್ಡ್‌ನಲ್ಲೂ ಜಿದ್ದಾಜಿದ್ದಿ ಇದ್ದು ಪಕ್ಷೇತರರು ಬಹುತೇಕ ಕಡೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಸವಾಲಾಗಿರುವುದು ನಿಜ. ಕಾಂಗ್ರೆಸ್‌ 19 ಸ್ಥಾನಗಳಲ್ಲಿ ಸ್ಪರ್ಧಿಸಿದ್ದು 3 ಜನ ಅಲ್ಪಸಂಖ್ಯಾತರಿಗೆ , 7 ಜನ ವೀರಶೈವರಿಗೆ, 3 ಜನ ಎಸ್‌ಸಿ/ಎಸ್ಟಿ, 6 ಜನ ಕುರುಬ ಸಮಾಜದವರಿಗೆ ಅವಕಾಶ ನೀಡಿದೆ. 19 ಜನರಲ್ಲಿ 11 ಜನ ಮಹಿಳೆಯರಿಗೆ ಅವಕಾಶ ಕಲ್ಪಿಸಿದೆ. ಎರಡು ರಾಷ್ಟ್ರೀಯ ಪಕ್ಷಗಳು ಎಲ್ಲಾ ಸಮುದಾಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಜಾಣತನದಿಂದ ಟಿಕೆಟ್ ಹಂಚಿಕೆ ಮಾಡಿವೆ ಎಂದು ತಿಳಿಯುತ್ತಿದೆ. ಈ ನಡುವೆ ಜೆಡಿಎಸ್‌ ಕೂಡ 6 ವಾರ್ಡ್‌ಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಈ ನಡುವೆ ನಡೆದ ಬೆಳವಣಿಗೆಯಲ್ಲಿ ಜೆಡಿಎಸ್‌ 6 ಸ್ಥಾನಗಳಿಗೆ ಸ್ಪರ್ಧಿಸಿ ಆಚ್ಚರಿ ಮೂಡಿಸಿದ್ದು ಮೈತ್ರಿಯಲ್ಲಿ 2 ಕ್ಷೇತ್ರಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಎರಡು ಪಕ್ಷದ ಮುಖಂಡರ ಜೊತೆ ಮಾತನಾಡಿ ಸರಿ ಪಡಿಸಿಕೊಳ್ಳುತ್ತೇವೆ ಎಂದು ಜೆಡಿಎಸ್‌ ಮುಖಂಡ ಎಚ್.ಟಿ. ಬಳಿಗಾರ್‌ ಹೇಳಿದರು.

ಒಟ್ಟು 23 ವಾರ್ಡ್‌ಗಳಿಗೂ 3 ಪಕ್ಷಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿ 98 ಜನ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದ್ದು ಬಂಡಾಯ ಅಭ್ಯರ್ಥಿಗಳ ಮನವೊಲಿಸಲು ಈಗಿನಿಂದಲೇ ಎಲ್ಲಾ ರಾಜಕೀಯ ಪಕ್ಷಗಳು ಸೆಣಸಾಡುತ್ತಿವೆ. ಒಟ್ಟಿನಲ್ಲಿ 20 ರ ನಂತರ ಅಂತಿಮ ಕಣದಲ್ಲಿ ಯಾರು ಉಳಿಯಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.