ಅರಿಶಿನಗೇರಿ ಶಾಸನಕ್ಕಿದೆ ಅಪಾರ ಮಹತ್ವ


Team Udayavani, Oct 21, 2019, 4:13 PM IST

21-October-20

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಅರಿಶಿನಗೇರಿ ಗ್ರಾಮದಲ್ಲಿ ಇತ್ತೀಚೆಗೆ 17ನೇ ಶತಮಾನದ ಅಪ್ರಕಟಿತ ಶಿಲಾ ಶಾಸನವೊಂದು ಪತ್ತೆಯಾಗಿದ್ದು ಸರ್ಕಾರದ ಸೇವೆಯಲ್ಲಿದ್ದ ಓರ್ವ ನೌಕರನಿಗೆ ಭೂಮಿ ದಾನ ಮಾಡಿದ ವಿಷಯ ಮಹತ್ವದ್ದಾಗಿದೆ ಎಂದು ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ|ಬಾಲಕೃಷ್ಣ ಹೆಗಡೆ ತಿಳಿಸಿದರು.

ಹೊಸನಗರ ತಾಲೂಕಿನ ಹೊಂಬುಜ ಜೈನ ಮಠದಲ್ಲಿ ಕರ್ನಾಟಕ ಇತಿಹಾಸ ಅಕಾಡೆಮಿ ವತಿಯಿಂದ ಆಯೋಜಿಸಿದ್ದ 33ನೇ ವಾರ್ಷಿಕ ಸಮ್ಮೇಳನ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ “ಅರಿಶಿಣಗೇರಿಯಲ್ಲಿ ಇತ್ತೀಚೆಗೆ ದೊರೆತ ಅಪ್ರಕಟಿತ ಶಿಲಾ ಶಾಸನ’ ಎನ್ನುವ ತಮ್ಮ ಸಂಶೋಧನಾ ಪ್ರಬಂಧ ಮಂಡಿಸಿ ಅವರು ಮಾತನಾಡಿದರು.

ತಮ್ಮ ಕ್ಷೇತ್ರ ಕಾರ್ಯ ಸಂದರ್ಭದಲ್ಲಿ ಅರಿಶಿಣಗೇರಿಯ ವೀರೇಂದ್ರ ಪಾಟೀಲ್‌ ಎಂಬುವರ ಮನೆಯ ಮುಂದಿನ ಅಂಗಳದ ಅಂಚಿನಲ್ಲಿ ಈ ಶಾಸನವನ್ನು ಸನಿಹದ ಬೇರೆ ಎಲ್ಲಿಂದಲೋ ತಂದು ಇಲ್ಲಿ ನಿಲ್ಲಿಸಿದಂತೆ ಕಾಣುತ್ತದೆ ಎಂದ ಅವರು, 95 ಸೆಂಮೀ ಎತ್ತರದ ಗ್ರಾನೈಟ್‌ ಶಿಲೆಯಲ್ಲಿ ಶಾಸನವನ್ನು ಖಂಡರಿಸಲಾಗಿದೆ. 30 ಸೆಂಮೀ ಅಗಲವಿರುವ ಈ ಶಾಸನ ಸುಮಾರು 8 ಇಂಚು ದಪ್ಪ ಇದೆ. ಎರಡು ಪಟ್ಟಿಕೆಯಲ್ಲಿ ತಲಾ ಮೂರು ಸಾಲಿನಂತೆ ಒಟ್ಟು ಆರು ಸಾಲುಗಳ ಶಾಸನವನ್ನು ಕೊರೆಯಲಾಗಿದೆ. ಮೇಲಿನಿಂದ ಕೆಳಕ್ಕೆ ಬಂದಂತೆ ಅಗಲದ ಪ್ರಮಾಣದಲ್ಲಿ ಕಡಿಮೆಯಾಗುತ್ತ ಬಂದಿದೆ ಎಂದು ಅವರು ವಿವರಿಸಿದರು.

ಕ್ರಿ.ಶ.6-7ನೇ ಶತಮಾನದ ಶಾಸನಗಳಲ್ಲಿ ಉಲ್ಲೇಖೀತವಾದ “ಗೌಜ’ ಎಂಬ ಹೆಸರಿನ ಗ್ರಾಮವೇ ಸಾಗರ ತಾಲೂಕಿನ ಈಗಿನ “ಗೌತಮಪುರ’ವಾಗಿದೆ. ಒಂದು ಕಾಲದಲ್ಲಿ ಈ ಪ್ರದೇಶ ದೊಡ್ಡ ಶೈವ ಕೇಂದ್ರವಾಗಿತ್ತು. ಅಲ್ಲದೆ ಇದೇ ಗ್ರಾಮದಲ್ಲಿ ದೊರೆತ ಕ್ರಿಶ 8ನೇ ಶತಮಾನದ ಶಾಸನವೊಂದರಲ್ಲಿ 100ಕ್ಕೂ ಹೆಚ್ಚು ಜನರಿಗೆ “ದಾನ ಮಾಡಿದ’ ವಿಷಯ ಹಾಗೂ “ಇಂಥಹ ಗೋತ್ರದವರಿಗೆ ಬಿಟ್ಟಿದ್ದು’ ಎಂಬ ಉಲ್ಲೇಖವನ್ನೂ ಕಾಣಬಹುದು ಎಂದು ಅವರು ತಿಳಿಸಿದರು.

ಕಾಲಾನಂತರದಲ್ಲಿ ಅನೇಕ ಶೈವ ದೇವಾಲಯಗಳು ನಾಶವಾಗಿ ವೈಷ್ಣವ- ಶ್ರೀವೈಷ್ಣವ ಪಂಥಗಳು ಪ್ರವರ್ಧಮಾನಕ್ಕೆ ಬಂದವು ಎಂದು ಅವರು ತಿಳಿಸಿ, ಈ ಶಾಸನದಲ್ಲಿ ಉಲ್ಲೇಖೀತವಾಗಿರುವ “ವಲಿಕಾ ರನ ಗದ್ದೆ’ ಅಂದರೆ ಬಹುಷ ಓರ್ವ “ವಾಲಿಕಾರನ’ ಎಂದಾಗಿರಬೇಕು. “ವಾಲಿಕಾರ’ ಎಂದರೆ ಅರಸನು ಅಕ್ಕ ಪಕ್ಕದ ಗ್ರಾಮಗಳಿಗೆ ಕಳುಹಿಸುವ ಸುದ್ದಿ, ಪತ್ರ, ದಾಖಲೆ ಇತ್ಯಾದಿಗಳನ್ನು ಕೊಂಡೊಯ್ಯುವ “ಸಂದೇಶ’ ತಲುಪಿಸುವಾತ ಎಂದರ್ಥ.

ಅದ್ದರಿಂದ ಓರ್ವ “ವಾಲಿಕಾರನಿ’ಗೆ ಒಂದಷ್ಟು ಭೂಮಿಯನ್ನು ಓರ್ವ ಆಡಳಿತಗಾರ ದಾನವಾಗಿ ನೀಡಿದ್ದಿರಬಹುದು ಎಂದು ಅವರು ತಿಳಿಸಿದರು. ಶಾಸನ ಓದುವಲ್ಲಿ ಸಹಕರಿಸಿದ ಡಾ| ಜಗದೀಶ ಎ. ಹಾಗೂ ಖ್ಯಾತ ಪುರಾತತ್ವ ಶಾಸ್ತ್ರಜ್ಞ ಪ್ರೊ| ಎ.ಸುಂದರ ಅವರಿಗೆ ಡಾ| ಹೆಗಡೆ ಇದೇ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.

ಡಾ| ಪಿ. ನಂಜುಡಸ್ವಾಮಿ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಪ್ರೊ| ದತ್ತಪ್ರಸನ್ನ ಪಾಟೀಲ್‌, ಡಾ| ದೇವರ ಕೊಂಡಾರೆಡ್ಡಿ, ಸೀತಾಲಕ್ಷ್ಮೀ ಮತ್ತಿತರರು ಇದ್ದರು.

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.