ಮಲೆನಾಡಿನ ಪುಟ್ಟ ಬಾಳೆಹಣ್ಣೆಗೆ ತಮಿಳುನಾಡು ಬಾಳೆ ಹೊಡೆತ!


Team Udayavani, Dec 11, 2019, 12:38 PM IST

11-December-10

„ಶರತ್‌ ಭದ್ರಾವತಿ
ಶಿವಮೊಗ್ಗ:
ತಮಿಳುನಾಡು ಬಾಳೆ ಜಿಲ್ಲೆಗೆ ಕಾಲಿಟ್ಟ ಕಾರಣ ಗ್ರಾಹಕರ ಜೇಬಿಗೆ ಹೊರೆಯಾಗಿದ್ದು ಪುಟ್ಟ ಬಾಳೆ (ಏಲಕ್ಕಿ ಬಾಳೆ) ಈಗ ಭಾರೀ ಇಳಿಕೆಯಾಗಿದ್ದು ಬಾಳೆ ಬೆಳೆಗಾರರು ಹಾಗೂ ವ್ಯಾಪಾರಸ್ಥರನ್ನು ಆತಂಕಕ್ಕೀಡು ಮಾಡಿದೆ.

ಕಳೆದ ವರ್ಷ ಇದೇ ಸಮಯಕ್ಕೆ ಬಾಳೆ ಹಣ್ಣು ಬೆಲೆ ಕಡಿಮೆಯಾಗಿರಲಿಲ್ಲ. ಈ ಬಾರಿ ಅವಧಿಗಿಂತ ಮುನ್ನವೇ ಇಳಿಕೆಯಾಗಿದೆ. ಹಬ್ಬದ ಸೀಸನ್‌ ಆದ ಸೆಪ್ಟೆಂಬರ್‌, ಅಕ್ಟೋಬರ್‌ ವೇಳೆ ಚಿಲ್ಲರೆ ದರ 80-90 ರೂ. ಇತ್ತು. ಆದರೀಗ, 35-40 ರೂ.ಗೆ ಇಳಿಕೆಯಾಗಿದೆ. ಅದೇ ರೀತಿ, 60-65 ರೂ. ಗಳಷ್ಟಿದ್ದ ಸಗಟು ದರ 15-25 ರೂ.ಗೆ ಇಳಿಕೆಯಾಗಿದೆ.

ಆಗಸ್ಟ್‌ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಗೆ ಶಿವಮೊಗ್ಗ, ದಾವಣಗೆರೆ, ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಪುಟ್ಟಬಾಳೆ ಬೆಳೆ ಹಾಳಾಗಿತ್ತು. ಜತೆಗೆ, ಅನಿರೀಕ್ಷಿತವಾಗಿ ಬೆಳೆಯಲ್ಲಿ ಕಂಡುಬಂದ ಪಲಾಮ, ಸೊರಗು ರೋಗವೂ ಇಳುವರಿ ಕಡಿಮೆಯಾಗಲು ಕಾರಣವಾಗಿತ್ತು. ಶಿವಮೊಗ್ಗದೆಲ್ಲೆಡೆ ಹೇರಳವಾಗಿ ಬಾಳೆ ಬೆಳೆಯಲಾಗುತ್ತದೆ. ಆದರೆ, ಪ್ರಕೃತಿ ವಿಕೋಪದಿಂದಾಗಿ ಮಾರುಕಟ್ಟೆಯಲ್ಲಿ ಪುಟ್ಟ ಬಾಳೆ ಪೂರೈಕೆ ಆಗಿರಲಿಲ್ಲ. ಹೀಗಾಗಿ, ನೆರೆಯ ಜಿಲ್ಲೆಗಳಿಂದಲೂ ಆಮದು ಮಾಡಿಕೊಳ್ಳಲಾಗಿತ್ತು. ಗಣೇಶ ಚತುರ್ಥಿ, ದಸರಾ ಮತ್ತು ದೀಪಾವಳಿ ಸರಣಿ ಹಬ್ಬಗಳ ನಡುವೆ ಪುಟ್ಟ ಬಾಳೆಯ ಪೂರೈಕೆ ಕಡಿಮೆ ಆದ ಪರಿಣಾಮ ಬೆಲೆ ದ್ವಿಗುಣವಾಗಿತ್ತು. ಈಗ ಪರಿಸ್ಥಿತಿ ಪೂರ್ಣ ಹದ್ದುಬಸ್ತಿನಲ್ಲಿದೆ.

ಶಿವಮೊಗ್ಗದಲ್ಲೇ ನಿತ್ಯ 50 ಟನ್‌ ಬಾಳೆಗೆ ಬೇಡಿಕೆ ಇದ್ದು, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೂ ನಿತ್ಯ 50 ಟನ್‌ ಬಾಳೆ ರಫ್ತು ಮಾಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ, ಆನವಟ್ಟಿ, ಜಡೆ, ಭದ್ರಾವತಿ, ಆನವೇರಿ, ಹೊಳಲೂರು ಸೇರಿದಂತೆ ನಾನಾ ಕಡೆಗಳಿಂದ ಪುಟ್ಟ ಬಾಳೆ ಮಾರುಕಟ್ಟೆಗೆ ಬರುತ್ತಿದೆ.

ಶಿವಮೊಗ್ಗದ ವ್ಯಾಪಾರಸ್ಥರೊಬ್ಬರು ತಮಿಳುನಾಡಿನಿಂದ ವಾರಕ್ಕೆ 13 ಟನ್‌ ಏಲಕ್ಕಿ ಬಾಳೆ ಆಮದು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಬೆಲೆಯೂ ಇಳಿಕೆಯಾಗಿದೆ. ಅಕ್ಟೋಬರ್‌ನಲ್ಲಿ ಪ್ರತಿ ವರ್ಷ ಬಾಳೆಯ ಬೆಲೆ ಸ್ವಲ್ಪ ಏರಿಕೆ ಕಾಣುತ್ತದೆ. ಇದಕ್ಕೆ ಕಾರಣ, ಈ ತಿಂಗಳಲ್ಲಿರುವ ಹಬ್ಬ- ಹರಿದಿನಗಳು. ಸಾಮಾನ್ಯವಾಗಿ, ಡಿಸೆಂಬರ್‌
ಬಂದಾಕ್ಷಣ ಬೇಡಿಕೆಯಲ್ಲಿ ದಿಢೀರ್‌ ಇಳಿಕೆ ಆಗುತ್ತದೆ.

ಇದೇ ರೀತಿ ಬೇಡಿಕೆ ಕುಸಿತದಲ್ಲಿ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯೂ ಇದೆ. ಕೆಜಿಗೆ 15-20 ರೂ. ಇಳಿಕೆಯಾದಲ್ಲಿ ಬೆಳೆಗಾರರಿಗೆ ನಷ್ಟವಾಗುತ್ತದೆ. ಆದರೆ, ಈಗಿನ ಸದ್ಯದ ಮಾರುಕಟ್ಟೆ ಪರಿಸ್ಥಿತಿಯಲ್ಲಿ ನಿರ್ದಿಷ್ಟವಾಗಿ ಹೇಳುವುದು ಕಷ್ಟಸಾಧ್ಯ.

2017-18ರ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 92,546 ಹೆಕ್ಟೆರ್‌ ಬಾಳೆ ಬೆಳೆಯುವ ಕ್ಷೇತ್ರವಿದೆ. ಚಾಮರಾಜನಗರದಲ್ಲಿ ಅತಿ ಹೆಚ್ಚು 10,040 ಹೆಕ್ಟೇರ್‌ ಹಾಗೂ ಶಿವಮೊಗ್ಗದಲ್ಲಿ 5,191 ಹೆಕ್ಟೇರ್‌ ಪುಟ್ಟ ಬಾಳೆ ಬೆಳೆಸಲಾಗುತ್ತದೆ.

40ರ ಗಡಿ ಇಳಿದ ಬೆಲೆ
ಪುಟ್ಟ ಬಾಳೆ ಬೆಲೆಯು 2001ರಿಂದ 05 ರವರೆಗೆ ಕೆಜಿಗೆ 6-8 ರೂ., 2005-10ರ ವರೆಗೆ 20-25 ರೂ. ಹಾಗೂ 2010ರಿಂದ 15 ರವರೆಗೆ 40 ರೂ. ಇತ್ತು. 2010ರಿಂದೀಚೆಗೆ ಚಿಲ್ಲರೆ ವಹಿವಾಟಿನಲ್ಲಿ ಬಾಳೆಯ ಬೆಲೆಯು ಕೆಜಿಗೆ 40 ರೂ.ಗಿಂತ ಕೆಳಗೆ ಇಳಿದಿಲ್ಲ. ಆದರೆ ಈ ಬಾರಿ ಇಳಿಯುವ ಲಕ್ಷಣಗಳಿವೆ.

ಶಿವಮೊಗ್ಗಕ್ಕೆ ಇದೇ ಮೊದಲ ಬಾರಿಗೆ ಒಂದೂವರೆ ತಿಂಗಳಿನಿಂದ ತಮಿಳುನಾಡು ಬಾಳೆ ಬರುತ್ತಿದೆ. ಹೀಗಾಗಿ ದರದಲ್ಲಿ ಕಡಿಮೆಯಾಗಿದೆ. ಇದೇ ರೀತಿ ಮುಂದುವರಿದರೆ ಚಿಲ್ಲರೆ ವಹಿವಾಟಿನಲ್ಲಿ 30 ರೂ.ಗೂ ಬಾಳೆಹಣ್ಣು ಸಿಗಬಹುದು.
.ದಿನೇಶ್‌, ಬಾಳೆಹಣ್ಣು
ಮಾರಾಟಗಾರರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.