ಶಿವಮೊಗ್ಗ ಶೀಘ್ರ ಕಳ್ಳಭಟ್ಟಿ ಮುಕ್ತ ಜಿಲ್ಲೆ!

•ಅತಿ ಹೆಚ್ಚು ಕಳ್ಳಭಟ್ಟಿ ವ್ಯವಹಾರ ಇದ್ದ ಜಿಲ್ಲೆಯಲ್ಲಿ ಹತೋಟಿ•ಅಬಕಾರಿ ಇಲಾಖೆ ಅಧಿಕಾರಿಗಳ ಸಮರಕ್ಕೆ ಜಯ

Team Udayavani, Jul 18, 2019, 11:36 AM IST

Udayavani Kannada Newspaper

ಶಿವಮೊಗ್ಗ: ಮದ್ಯ ಪ್ರಿಯರಿಗೆ, ಜನರಿಗೆ ಕಂಟಕವಾಗಿರುವ ಕಳ್ಳಭಟ್ಟಿ ಸಾರಾಯಿ ಮುಕ್ತ ಮಾಡಲು ಶಿವಮೊಗ್ಗ ಜಿಲ್ಲೆ ಕೊನೆಯ ಹೆಜ್ಜೆ ಇಟ್ಟಿದೆ. ಈ ಮೂಲಕ ರಾಜ್ಯದಲ್ಲೇ ಮೊದಲ ಕಳ್ಳಭಟ್ಟಿ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆ ಗಳಿಸಲು ತುದಿಗಾಲಲ್ಲಿ ನಿಂತಿದೆ.

ಕಳ್ಳಭಟ್ಟಿ ಸಾರಾಯಿ ಸೇವನೆಯಿಂದ ಅನೇಕ ಸಂಸಾರಗಳು ಹಾಳಾಗುತ್ತಿದ್ದು, ಸೇವನೆ ಮಾಡುವವರು ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದುದನ್ನು ಮನಗಂಡ ಸರ್ಕಾರ ಕಳ್ಳಭಟ್ಟಿ ತಯಾರಕರ ವಿರುದ್ಧ ಸಮರ ಸಾರಿತ್ತು. ಈ ಸಮರದಲ್ಲಿ ಶಿವಮೊಗ್ಗ ಜಿಲ್ಲೆ ಗೆಲುವಿನತ್ತ ದಾಪುಗಾಲಿಟ್ಟಿದ್ದು, ಸ್ವಾತಂತ್ರ್ಯ ದಿನಾಚರಣೆಯಷ್ಟರಲ್ಲೇ ಜಿಲ್ಲೆ ಸಂಪೂರ್ಣ ಕಳ್ಳಭಟ್ಟಿ ಮುಕ್ತವಾಗುವ ವಿಶ್ವಾಸವನ್ನು ಅಬಕಾರಿ ಇಲಾಖೆ ವ್ಯಕ್ತಪಡಿಸಿದೆ.

ಆಗ 121, ಈಗ 3: ಒಂದು ಸಮಯದಲ್ಲಿ ಜಿಲ್ಲೆಯಲ್ಲಿ ಯಥೇಚ್ಛವಾಗಿ ಕಳ್ಳಭಟ್ಟಿ ಬಳಸಲಾಗುತ್ತಿತ್ತು. ಒಂದು ನಿರ್ದಿಷ್ಟ ಸಮುದಾಯ ಇದನ್ನೇ ಕಸುಬನ್ನಾಗಿ ಮಾಡಿಕೊಂಡಿತ್ತು. ಅಬಕಾರಿ ಇಲಾಖೆ ಜಾಗೃತಿ ಮೇರೆಗೆ ಹಾಗೂ ಆ ಸಮುದಾಯ ಮುಖ್ಯವಾಹಿನಿಗೆ ಬರುತ್ತಿರುವುದರಿಂದ ಈ ಕಸುಬಿಂದ ದೂರವಾಗುತ್ತಿದೆ. ಜಿಲ್ಲೆಯ ಶಿಕಾರಿಪುರ, ಸೊರಬ, ಸಾಗರದಲ್ಲಿ ತಯಾರಕರ ಸಂಖ್ಯೆ ಹೆಚ್ಚಾಗಿತ್ತು. ಶಿಕಾರಿಪುರ ತಾಲೂಕಿನಲ್ಲಿ 26 ಹಳ್ಳಿಗಳು, ಸಾಗರ 31, ಸೊರಬ 31, ಭದ್ರಾವತಿ 8, ಶಿವಮೊಗ್ಗ 18, ತೀರ್ಥಹಳ್ಳಿ 3, ಹೊಸನಗರ ತಾಲೂಕಿನ ನಾಲ್ಕು ಗ್ರಾಮಗಳು ಕಳ್ಳಭಟ್ಟಿ ತಯಾರಿಕೆಯಿಂದ ಮುಕ್ತವಾಗಿವೆ.

ಶಿಕಾರಿಪುರ ತಾಲೂಕಿನ ಮೂರು ಗ್ರಾಮಗಳು ಮಾತ್ರ ಬಾಕಿ ಇದ್ದು, ಈ ಗ್ರಾಮಗಳ ಮೇಲೆ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಮಳವಳ್ಳಿ ತಾಂಡಾ, ಚಿಕ್ಕಮಾಗಡಿ ತಾಂಡಾ, ಕೊರಟಗೆರೆ ತಾಂಡಾಗಳಲ್ಲಿ ಕದ್ದುಮುಚ್ಚಿ ಕಳ್ಳಭಟ್ಟಿ ತಯಾರು ಮಾಡಲಾಗುತ್ತಿದ್ದು ರೇಡ್‌ ಮಾಡಲು ಹೋದಾಗ ಗ್ರಾಮಸ್ಥರ ಮಾಹಿತಿ ಮೇರೆಗೆ ಧಂಧೆಕೋರರು ತಪ್ಪಿಸಿಕೊಳ್ಳುತ್ತಿದ್ದಾರೆ. ಸದ್ಯದಲ್ಲೇ ಈ ಮೂರು ಗ್ರಾಮಗಳಲ್ಲಿ ಕಾರ್ಯಾಚರಣೆ ಮೂಲಕ ಕಳ್ಳಭಟ್ಟಿ ನಿರ್ಮೂಲನೆ ಮಾಡಲು ಅಬಕಾರಿ ಇಲಾಖೆ ಸನ್ನದ್ಧವಾಗಿದೆ.

ಕಡಿಮೆ ಖರ್ಚು: ತುಂಬಾ ಕಡಿಮೆ ಖರ್ಚಿನಲ್ಲಿ ಕಳ್ಳಭಟ್ಟಿ ತಯಾರಿಸಬಹುದಾಗಿದ್ದರಿಂದ ಹಳ್ಳಿಗಳಲ್ಲಿ ಕದ್ದುಮುಚ್ಚಿ ಉತ್ಪಾದಿಸಲಾಗುತ್ತಿತ್ತು. ಆದರೆ ಇದನ್ನು ತಯಾರಿಸುವಾಗ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿರಲಿಲ್ಲ. ಬೆಲ್ಲದ ಕೊಳೆಯನ್ನು ಕನಿಷ್ಠ 21 ದಿನಗಳ ಕಾಲ ಬಿಟ್ಟು ಭಟ್ಟಿ ಇಳಿಸಬೇಕು. ಆದರೆ ಪೊಲೀಸರ ದಾಳಿಗೆ ಹೆದರಿ ಬೇಗ ಭಟ್ಟಿ ಇಳಿಸಲು ಅನುಕೂಲವಾಗುವಂತೆ ಯೂರಿಯಾ, ನವಸಾಗರ, ಹಳೆಯ ಬ್ಯಾಟರಿ ಶೆಲ್, ಕೊಳೆತ ಮಾಂಸ, ಕಪ್ಪೆ, ಇಲಿ, ಹೆಗ್ಗಣ, ಸತ್ತ ನಾಯಿಯ ದೇಹದ ತುಣುಕುಗಳನ್ನು ಹಾಕುತ್ತಿದ್ದರು. ಇವುಗಳಿಂದ ಆಲ್ಕೋಹಾಲ್ ಜತೆಗೆ ವಿಷಕಾರಿ ರಾಸಾಯನಿಕಗಳೂ ಉತ್ಪತ್ತಿಯಾಗುತ್ತಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಇಲಾಖೆ ಸಂಪೂರ್ಣ ಕಳ್ಳಭಟ್ಟಿ ನಾಶಕ್ಕೆ ಮುಂದಾಗಿದೆ.

ಮೆಥನಾಲ್, ಎಥೆನಾಲ್: ಹೆಸರು ಬೇರೆ ಬೇರೆಯಾದರೂ ನೋಡಲು ಒಂದೇ ರೀತಿ ಇರುವ ಈ ರಾಸಾಯನಿಕದಿಂದಲೇ ರಾಜ್ಯದಲ್ಲಿ ಕಳ್ಳಭಟ್ಟಿ ದುರಂತಗಳು ನಡೆಯುತ್ತಿದ್ದವು. ಎಥೆನಾಲ್ ಕಳ್ಳಭಟ್ಟಿಗೆ ಬಳಸುವ ವಸ್ತುಗಳಿಂದ ಬರುವ ರಾಸಾಯನಿಕ ಅಂಶವಾಗಿದ್ದು, ಇದರಿಂದ ಪ್ರಾಣಕ್ಕೆ ಕುತ್ತು ಬರುವುದಿಲ್ಲ. ಕಳ್ಳಭಟ್ಟಿ ತಯಾರಕರು ಎಥೆನಾಲ್ ಬಳಸುವ ಬದಲು ಎಷ್ಟೋ ಬಾರಿ ಮೆಥನಾಲ್ ಬಳಸಿದ ಕಾರಣ ಅಪಾರ ಸಾವು, ನೋವುಗಳು ಉಂಟಾಗಿವೆ. ಹಾಗಾಗಿ ಪೇಂಟ್ ಇತರೆ ಕಂಪನಿಗಳಿಗೆ ಬೇಕಾಗುವ ಮೆಥನಾಲ್ ಲಾರಿಗಳನ್ನು ಗುರಿ ತಲುಪಿಸುವವರೆಗೂ ಅಬಕಾರಿ ಇಲಾಖೆ ಜಾಗೃತೆ ವಹಿಸುತ್ತದೆ. ಈ ಕಾರಣದಿಂದಲೂ ಕಳ್ಳಭಟ್ಟಿ ದುರಂತಗಳು ಕಡಿಮೆಯಾಗಿವೆ.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.