ಕಣ್ಮನ ಸೆಳೆದ ವಿದ್ಯಾರ್ಥಿಗಳ ಝಲಕ್‌!

ನವದುರ್ಗೆಯರ ವೇಷ-ವಿವಿಧ ನೃತ್ಯಗಳ ಮೆರುಗುವಿಶ್ವ ಮಾನವ ಸಂದೇಶ ಸಾರಿದ ಜಾಥಾ

Team Udayavani, Oct 4, 2019, 1:00 PM IST

4-October-10

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಮೂರು ದಿನಗಳ ಕಾಲ ನಡೆಯುವ ಸಹ್ಯಾದ್ರಿ ಉತ್ಸವಕ್ಕೆ ಚಿತ್ರನಟಿ ಮಾನ್ವಿತಾ ಹರೀಶ್‌ ಕುವೆಂಪು ಅವರ ಪ್ರತಿಮೆಗೆ ಹೂವಿನ ಮಾಲೆ ಹಾಕುವ ಮೂಲಕ ಚಾಲನೆ ನೀಡಿದರು.

ಅವರಿಗೆ ಕುಲಪತಿ ಪ್ರೊ| ಬಿ.ಪಿ.ವೀರಭದ್ರಪ್ಪ ಸಾಥ್‌ ನೀಡಿದರು. ಚಿಕ್ಕಮಗಳೂರು, ಶಿವಮೊಗ್ಗದ 40 ಪ್ರಥಮ ದರ್ಜೆ ಕಾಲೇಜುಗಳ ತಂಡಗಳು ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಿ ಉತ್ಸವಕ್ಕೆ ಮೆರುಗು ತಂದರು.

ನೆರೆ-ಬರಗಳಿಂದಾಗಿ ರೋಸಿ ಹೋದ ರೈತ ಹೇಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಎಂಬ ವಿಷಯ ಕುರಿತು ರೈತನ ಅಣುಕು ಶವಯಾತ್ರೆಯನ್ನು ಪ್ರದರ್ಶಿಸಿ ಸಂಕಷ್ಟ ತಿಳಿಸಿದರು. ಹೆಗ್ಗೋಡು ಕಾಲೇಜಿನ ವಿದ್ಯಾರ್ಥಿಗಳ ಹುಲಿವೇಷ, ಸೊರಬ ಕಾಲೇಜಿನ ಡೊಳ್ಳು ಕುಣಿತ, ಚಿಕ್ಕಮಗಳೂರಿನ ಕಳಸ ಕಾಲೇಜಿನ ವಿದ್ಯಾರ್ಥಿಗಳ ವಿಂಗ್‌ ಕಮಾಂಡರ್‌ ಅಭಿನಂದನ್‌ ವೇಷ, ವಿಮಾನ, ಮೆರವಣಿಗೆ ಆಕರ್ಷಣೆ ಹೆಚ್ಚಿಸಿದವು. ಕುವೆಂಪು ವಿವಿ ಆವರಣದಲ್ಲಿರುವ ಕಲಾ ಮತ್ತು ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳ ನವದುರ್ಗೆಯರ ವೇಷಭೂಷಣ ನೋಡುಗರ ಮನಸೂರೆಗೊಳಿಸಿತು. ಮೈತ್ರಿ ಶಿಕ್ಷಣ ವಿದ್ಯಾಲಯದಿಂದ ಸಂಚಾರ ನಿಯಮದ ಬಗ್ಗೆ ಜಾಗೃತಿ, ಮೂಡಿಗೆರೆ ಡಿಎಸ್‌ ಜಿಬಿ ಕಾಲೇಜು ವಿದ್ಯಾರ್ಥಿಗಳಿಂದ ಪರಿಸರ ಉಳಿಸಿ, ಶಿವಮೊಗ್ಗದ ಎಟಿಎನ್‌ಸಿಸಿ ಸಂಜೆ ಕಾಲೇಜು ವಿದ್ಯಾರ್ಥಿಗಳು ಕನ್ನಡ ಉಳಿಸಿ ಘೋಷಣೆ ಕೂಗಿದರು.

ಎನ್‌ಇಎಸ್‌ ಶಿಕ್ಷಣ ಸಂಸ್ಥೆಯಿಂದ ವಾಹನ ಸವಾರರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು, ಚಿಕ್ಕಮಗಳೂರಿನ ಮಲೆನಾಡು ವಿದ್ಯಾಸಂಸ್ಥೆಯಿಂದ ಬಾಲ್ಯ ವಿವಾಹ ವಿರೋಧಿ ಘೋಷಣೆ ಮೊಳಗಿದವು. ಡಿವಿಎಸ್‌ ಕಾಲೇಜಿನಿಂದ ವಿವಿಧತೆಯಲ್ಲಿ ಏಕತೆ ಬಿಂಬಿಸುವ ವೇಷಭೂಷಣ, ಕಳಸ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಎನ್‌ಸಿಸಿ, ಇಂಡಿಯನ್‌ ಆರ್ಮಿ ಬಗ್ಗೆ ವೇಷ ಭೂಷಣದೊಂದಿಗೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಶಿಕಾರಿಪುರ ಪ್ರಥಮ ದರ್ಜೆ ಕಾಲೇಜಿನಿಂದ ಡೊಳ್ಳು, ವಿಶ್ವಮಾನದ ಸಂದೇಶಸಾರುವ ರಥ, ಶಿರಾಳಕೊಪ್ಪ ಕಾಲೇಜಿನ ವಿದ್ಯಾರ್ಥಿಗಳು ಕಂಸಾಳೆಗೆ ನೃತ್ಯ ಪ್ರದರ್ಶಿಸಿದರು. ಚಿಕ್ಕಮಗಳೂರಿನ ಕೇಡಲಸರ ಕಾಲೇಜಿನಿಂದ ಮೂಢನಂಬಿಕೆ ಹೋಗಲಾಡಿಸಿ, ಪರಿಸರ ಉಳಿಸಿ, ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಬಿಇಡಿ ಕಾಲೇಜಿನಿಂದ ಕರ್ನಾಟಕದಲ್ಲಿ ಅನ್ಯಭಾಷೆಗಳ ಹಾವಳಿ, ಕಮಲಾ ನೆಹರು ಕಾಲೇಜಿನಿಂದ ಪ್ಲಾಸ್ಟಿಕ್‌ ತ್ಯಜಿಸಿ ಪರಿಸರ ಉಳಿಸಿ, ಎಟಿಎನ್‌ಸಿಸಿ ಕಾಲೇಜಿನಿಂದ ವೀರಗಾಸೆ, ಸಾಗರ ಇಂದಿರಾ ಗಾಂಧಿ ಕಾಲೇಜಿನಿಂದ ಪರಿಸರ ಉಳಿಸಿ, ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ದೋಣಿ, ಕರಾವಳಿ ಸಂಸ್ಕೃತಿಯನ್ನು
ಬಿಂಬಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.