ಆಹಾರ ಅಸಮತೋಲನ ನಿವಾರಣೆಗೆ ಆದ್ಯತೆ ನೀಡಿ


Team Udayavani, Oct 18, 2019, 6:59 PM IST

18-October-22

ಶಿವಮೊಗ್ಗ: ಭಾರತವು ಇಂದು ಅಗತ್ಯಕ್ಕಿಂತ ಹೆಚ್ಚಿನ ಅಹಾರ ಧಾನ್ಯ, ಹಾಲು ಮತ್ತು ಮತ್ಶ್ಯ ಪದಾರ್ಥಗಳನ್ನು ಉತ್ಪಾದಿಸುತ್ತಿದ್ದರೂ ಸಹ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು 102ನೇ ಸ್ಥಾನ ಪಡೆದಿದೆ. ಈ ಅಸಮತೋಲನ ನಿವಾರಣೆಯತ್ತ ಜೀವ ವಿಜ್ಞಾನಗಳ ಸಂಶೋಧಕರು ಗಮನ ನೀಡಬೇಕು ಎಂದು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕ ವಿವಿಯ ಕುಲಪತಿ ಪ್ರೊ| ಮಂಜುನಾಥ ಕೆ. ನಾಯ್ಕ ಅಭಿಪ್ರಾಯಪಟ್ಟರು.

ಭಾರತ ಸರ್ಕಾರದ ಜೈವಿಕ ತಂತ್ರಜ್ಞಾನ ಸಚಿವಾಲಯದ ಸಹಯೋಗದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಜೀವ ವಿಜ್ಞಾನ ನಿಖಾಯದಿಂದ ಒಟ್ಟಾಗಿ “ಚಿಕಿತ್ಸಕ ಸಂಯುಕ್ತಗಳನ್ನು ಉತ್ಪಾದಿಸುವಲ್ಲಿ ಸಸ್ಯ ಸೂಕ್ಷ್ಮಜೀವಿಗಳ ಪಾತ್ರ’ ವಿಷಯ ಕುರಿತು ಆಯೋಜಿಸಿರುವ ಹತ್ತು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತಿನಲ್ಲಿಯೇ ಮೊದಲ ಬಾರಿಗೆ ಆಹಾರ ಭದ್ರತಾ ಹಕ್ಕು ನೀಡಿದ ಭಾರತದಲ್ಲಿ ಇಂದು ಪೋಷಕಾಂಶಗಳ ಭದ್ರತೆಯು ಮರೀಚಿಕೆಯಾಗಿದೆ. ಮಣ್ಣಿನ ಜೀವ ವೈವಿಧ್ಯತೆಯನ್ನು ನಾಶ ಮಾಡಿರುವ ಕಾರಣದಿಂದ ಬೆಳೆಯ ಉತ್ಪಾದನೆಯು ಪೌಷ್ಟಿಕವಾಗಿಲ್ಲ. ಅದನ್ನು ಸೇವಿಸುತ್ತಿರುವ ದೇಶದ ಜನರು ರಕ್ತಹೀನತೆ, ರೋಗ ನಿರೋಧಕ ಶಕ್ತಿಯ ಕೊರತೆಗಳಿಂದ ಬಳಲುತ್ತಿದ್ದು, ಡೆಂಘೀ, ಮಂಗನ ಕಾಯಿಲೆಯಂತಹ ಸೋಂಕು ರೋಗಗಳಿಗೆ ಸುಲಭವಾಗಿ ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಸ್ಯ ಮತ್ತು ಸೂಕ್ಷ್ಮಜೀವಿಗಳನ್ನೊಳಗೊಂಡು ಚಿಕಿತ್ಸಕ ಔಷಧೋತ್ಪನ್ನಗಳನ್ನು ತಯಾರಿಸಲು ಸಂಶೋಧಕರಿಗೆ ಇಂತಹ ಕಾರ್ಯಾಗಾರಗಳು ಸಹಾಯಕ ಎಂದು ತಿಳಿಸಿದರು.

ಭಾರತದ ಶೇ. 42ರಷ್ಟು ಮಹಿಳೆಯರು ಅನಿಮೀಯಾ ಸಮಸ್ಯೆಯಿಂದ ಬಳಲುತ್ತಿದ್ದಾರೆ. 5ವರ್ಷಕ್ಕಿಂತ ಕಡಿಮೆ ವಯಸ್ಸಿನ 10 ಲಕ್ಷ ಮಕ್ಕಳು ಪ್ರತಿ ವರ್ಷ ಅಪೌಷ್ಟಿಕತೆಯಿಂದಾಗಿ ಸಾವನ್ನಪ್ಪುತ್ತಿದ್ದಾರೆ ಎನ್ನುತ್ತವೆ ವರದಿಗಳು. ಮಣ್ಣು, ಬೆಳೆಧಾನ್ಯಗಳು ಮತ್ತು ಆಹಾರದಲ್ಲಿ ಪೌಷ್ಟಿಕಾಂಶಗಳ ಇರುವಿಕೆಯನ್ನು ಖಾತರಿ ಪಡಿಸುವ ಬೃಹತ್‌ ಸವಾಲನ್ನು ಸರಿಯಾಗಿ ನಿಭಾಯಿಸಿದಲ್ಲಿ ಮಾತ್ರವೇ 2030ರ 2ನೇ ಹಂತದ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ತಲುಪಲು ಸಾಧ್ಯ ಎಂದು ಪ್ರೊ| ಮಂಜುನಾಥ ಕೆ. ನಾಯ್ಕ ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಸಚಿವ ಪ್ರೊ| ಎಸ್‌.ಎಸ್‌. ಪಾಟೀಲ್‌, ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ತಮ್ಮನ್ನು ಸೀಮಿತಗೊಳಿಸಿಕೊಳ್ಳಬಾರದು. ತಮ್ಮ ಕ್ಷೇತ್ರದಲ್ಲಿ ಈಗಾಗಲೇ ಇರುವ ಜ್ಞಾನವನ್ನು ವಿಶ್ಲೇಷಣೆಗೆ ಒಳಪಡಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಜೊತೆಗೆ ವೈಯಕ್ತಿಕ ಕೊಡುಗೆಯನ್ನು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಶಿಲೀಂಧ್ರಶಾಸ್ತ್ರದ ಹಿರಿಯ ವಿಜ್ಞಾನಿ ಬೆಂಗಳೂರಿನ ಕೃಷಿ ವಿವಿಯ ಪ್ರೊ| ಭಾಗ್ಯರಾಜ್‌, ಕಾರ್ಯಾಗಾರದ ಸಂಘಟಕ ಡಾ| ವಿ. ಕೃಷ್ಣ, ಪ್ರೊ| ಕೃಷ್ಣಪ್ಪ, ಹಣಕಾಸು ಅಧಿಕಾರಿ ಪ್ರೊ| ರಮೇಶ್‌ ಮಾತನಾಡಿದರು. ಪ್ರೊ| ನಾರಾಯಣ್‌, ಡಾ| ಬಿ. ತಿಪ್ಪೇಸ್ವಾಮಿ, ಡಾ| ನಾಗರಾಜ್‌ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳು ಇದ್ದರು. ಕಾರ್ಯಾಗಾರಕ್ಕೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಮೂವತ್ತು ಶಿಬಿರಾರ್ಥಿಗಳು ಆಗಮಿಸಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.