ರೋಟಾ ವೈರಸ್ ತಡೆಗೆ ಲಸಿಕೆ
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಕ್ರಮ •ಸಮನ್ವಯದಿಂದ ಕೆಲಸ ನಿರ್ವಹಣೆಗೆ ಸೂಚನೆ
Team Udayavani, Aug 31, 2019, 3:41 PM IST
ಶಿವಮೊಗ್ಗ: ಆರೋಗ್ಯ ಇಲಾಖೆ ನಾನಾ ಯೋಜನೆ ಅನುಷ್ಠಾನ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
ಶಿವಮೊಗ್ಗ: ಮಕ್ಕಳಲ್ಲಿ ಭೇದಿಗೆ ಕಾರಣವಾಗುವ ರೋಟಾ ವೈರಸ್ ತಡೆಗೆ ಹೊಸ ಲಸಿಕೆ ನೀಡಲಾಗುತ್ತಿದ್ದು, ಅದನ್ನು ಪ್ರತಿಯೊಂದು ಮಗುವಿಗೆ ಹಾಕಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಅವರು ಸಭೆ ನಡೆಸಿ ಮಾತನಾಡಿದರು.
ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಟಾ ವೈರಸ್ ಲಸಿಕೆ ನೀಡಲಾಗುತ್ತಿದ್ದು, ಮಗುವಿಗೆ 6, 10 ಮತ್ತು 14ನೇ ವಾರದಲ್ಲಿ ಈ ಲಸಿಕೆಯನ್ನು ಹಾಕಬೇಕು. ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಮಕ್ಕಳು ರೋಟಾ ವೈರಸ್ ಲಸಿಕೆ ಹಾಕಿರುವುದನ್ನು ಖಾತ್ರಿಪಡಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಕೋಟ್ಪಾ ಕಾಯ್ದೆ ಕಟ್ಟುನಿಟ್ಟಿನಿಂದ ಜಾರಿ: ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಶಾಲೆಗಳ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ತಂಬಾಕು ಉತ್ಪನ್ನ ಮಾರಾಟಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ಕಳೆದ ಎಪ್ರಿಲ್ನಿಂದ ಈವರೆಗೆ 589 ಕೊಟ್ಪಾ ದಾಳಿಗಳನ್ನು ನಡೆಸಲಾಗಿದೆ. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಈ ಕಾರ್ಯದಲ್ಲಿ ಸಹಕರಿಸಬೇಕು ಎಂದು ಅವರು ಹೇಳಿದರು.
ಕೆಲವು ಗ್ರಾಪಂ ವ್ಯಾಪ್ತಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಸ್ಥಳೀಯ ಪಿಡಿಒ ಸಹಕಾರ ನೀಡದಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ಪಿಡಿಒಗಳಿಗೆ ಶೋಕಾಸ್ ನೊಟೀಸ್ ಜಾರಿಗೊಳಿಸಿ ಇಲಾಖಾ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ನೀರಿನ ಪರೀಕ್ಷೆ ಮಾಡಬೇಕು: ಈ ಬಾರಿ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಿವೆ. ಮುಂಜಾಗರೂಕತಾ ಕ್ರಮಗಳಿಂದಾಗಿ ಇದುವರೆಗೆ ಸಾಂಕ್ರಾಮಿಕ ರೋಗಗಳು ಹರಡಿಲ್ಲ. ಇನ್ನು ಮುಂದೆ ಸಹ ಜಾಗರೂಕತೆಯಿಂದಿದ್ದು, ಕುಡಿಯುವ ನೀರಿನ ಗುಣಮಟ್ಟವನ್ನು ನಿರಂತರವಾಗಿ ಪರೀಕ್ಷೆ ಮಾಡಬೇಕು ಎಂದು ಅವರು ಸೂಚಿಸಿದರು.
ಆಹಾರ ಗುಣಮಟ್ಟ ಪರೀಕ್ಷೆ ಹೆಚ್ಚಿಸಿ: ಆಹಾರ ಸುರಕ್ಷತೆಯನ್ನು ಖಾತ್ರಿಪಡಿಸಲು ಆಹಾರ ಮತ್ತು ಪಾನೀಯಗಳ ಗುಣಮಟ್ಟವನ್ನು ನಿರಂತರವಾಗಿ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಕೇವಲ ದೂರು ಬಂದ ಪ್ರಕರಣಗಳಲ್ಲಿ ಮಾತ್ರ ಈ ಕ್ರಮ ಕೈಗೊಳ್ಳಬಾರದು. ಜಿಲ್ಲೆಯಲ್ಲಿ 298 ಹಾಲು ನೋಂದಣಿ ಕೇಂದ್ರಗಳಿದ್ದು, ಕೇವಲ 4 ಮಾದರಿಗಳನ್ನು ಮಾತ್ರ ಪರೀಕ್ಷೆ ಮಾಡಲಾಗಿದೆ. ಇದೇ ರೀತಿ ಕುಡಿಯುವ ನೀರಿನ ಘಟಕಗಳ ಮೇಲೆ ಸಹ ನಿಗಾ ಇರಿಸಬೇಕು ಎಂದು ಅವರು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ ಸುರಗಿನಹಳ್ಳಿ, ಆರ್ಸಿಎಚ್ ಡಾ| ನಾಗರಾಜ ನಾಯಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಶಂಕರಪ್ಪ, ಡಾ| ಕಿರಣ ಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ