ಕಸ ಸಂಸ್ಕರಣೆಗೆ ಆಧುನಿಕ ವಿಧಾನ

ಪ್ರತಿದಿನ ಉತ್ಪಾದನೆಯಾಗುವ ಹೆಚ್ಚಿನ ಕಸ ನಿಯಂತ್ರಣಕ್ಕೆ ಕ್ರಮ: ಡಿಸಿ

Team Udayavani, Dec 28, 2019, 4:35 PM IST

28-December-20

ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯದಲ್ಲಿ ಹಸಿಕಸ ಮತ್ತು ಒಣ ಕಸವನ್ನಾಗಿ ಬೇರ್ಪಡಿಸಿ ಮೂಲದಲ್ಲಿಯೇ ಸಂಸ್ಕರಿಸಿ, ಪ್ರತಿನಿತ್ಯ ಪಾಲಿಕೆ ವತಿಯಿಂದ ಸಂಗ್ರಹಿಸಲಾಗುತ್ತಿರುವ ಕಸವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹೊಸ, ಆಧುನಿಕ ಹಾಗೂ ಸರಳ ವಿಧಾನವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಅವರು ಹೇಳಿದರು.

ಶುಕ್ರವಾರ ತಮ್ಮ ಮನೆಯ ಆವರಣದಲ್ಲಿ ಪೈಪ್‌ ಕಾಂಪೋಸ್ಟ್‌ ಕಿರುಘಟಕ ಸ್ಥಾಪಿಸಿಕೊಳ್ಳುವ ಮೂಲಕ ತ್ಯಾಜ್ಯ ನಿಯಂತ್ರಣದ ಭಾಗವಾಗಿ ಮಹಾನಗರ ಪಾಲಿಕೆ ವತಿಯಿಂದ ಆರಂಭಿಸಿರುವ ತ್ಯಾಜ್ಯ ನಿಯಂತ್ರಣ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮನೆಯಲ್ಲಿ ಉತ್ಪತ್ತಿಯಾಗುವ ಹಸಿಕಸವನ್ನು ಮನೆಯಲ್ಲಿಯೇ ಸಂಗ್ರಹಿಸಿ, ಅದನ್ನು ವ್ಯವಸ್ಥಿತವಾಗಿ ಪೈಪ್‌ ಕಾಂಪೋಸ್ಟ್‌ ಕೊಳವೆಗೆ ನಿಯಮಾನುಸಾರ ಹಾಕುವುದರಿಂದ ಕಸದ ಪ್ರಮಾಣ ಕಡಿಮೆಯಾಗಲಿದೆ. ಇದರ ಅಳವಡಿಕೆಯಿಂದ ಪ್ರತಿ ಮನೆಯಿಂದ ಪಾಲಿಕೆಯ ಕಸದ ಗಾಡಿಗೆ ಬರುವ ತ್ಯಾಜ್ಯದ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಲಿದೆ ಎಂದರು.

ಈ ಕಸ ಕೆಲವೇ ತಿಂಗಳುಗಳಲ್ಲಿ ಸಾವಯವ, ಸಾರಯುಕ್ತ ಸುವಾಸಿತ ಗೊಬ್ಬರವಾಗಿ ದೊರೆಯಲಿದ್ದು, ಅದನ್ನು ತಮ್ಮ ಕೈತೋಟಗಳಿಗೆ ಬಳಸಬಹುದಾಗಿದೆ ಎಂದ ಅವರು, ಈ ಕಾರ್ಯಕ್ರಮದ ಮೊದಲ ಹಂತವಾಗಿ ನಗರದ ಸರ್ಕಾರಿ ವಸತಿಗೃಹಗಳಲ್ಲಿ ಪೈಪ್‌ ಕಾಂಪೋಸ್ಟ್‌ ಪೈಪ್‌ ಅಳವಡಿಸಲು ಪಾಲಿಕೆ ಕಾರ್ಯಕ್ರಮವನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಹಾಸ್ಟೆಲ್‌, ಸರ್ಕಾರಿ ಶಾಲೆಗಳು, ವಿವಿಗಳು, ಖಾಸಗಿ ಕಚೇರಿಗಳು, ಸರ್ಕಾರಿ ಸ್ವಾಮ್ಯದ ಕಚೇರಿಗಳ ಆವರಣಗಳಲ್ಲಿ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಪ್ರತಿದಿನ ಉತ್ಪತ್ತಿಯಾಗುವ ಟನ್‌ಗಟ್ಟಲೆ ಕಸದ ಉತ್ಪಾದನೆಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದರು.

ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯರನ್ನು ಗಮನದಲ್ಲಿಟ್ಟುಕೊಂಡು ಕಸ ಉತ್ಪಾದನೆಯ ಸಾಮರ್ಥಯಕ್ಕನುಗುಣವಾಗಿ ಘಟಕವನ್ನು ಅಳವಡಿಸಿಕೊಳ್ಳಬಹುದಾಗಿದೆ. ಈ ಕಾರ್ಯಕ್ರಮದ ಅನುಷ್ಠಾನದಲ್ಲಿ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳು ಸಹಕಾರ ನೀಡಿರುವುದು ಅಭಿನಂದನೀಯ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ 2018ರ ಸ್ವಚ್ಛ ಸರ್ವೇಕ್ಷಣ ಪ್ರಶಸ್ತಿ ವಿಜೇತ ಟಿ.ಎಸ್‌. ಮಹದೇವಸ್ವಾಮಿ ಅವರು ಮಾತನಾಡಿ, ಸಹಜವಾಗಿ ಮಹಿಳೆಯರು ಮನೆಯ ಮೇಲ್ವಿಚಾರಣೆ ನಡೆಸುವುದರಿಂದ ಅವರ ಅನುಕೂಲಕ್ಕೆ ತಕ್ಕಂತೆ ಅಳವಡಿಸುವ ಕೊಳವೆ ಸುಮಾರು 5ಅಡಿ ಇರುವಂತೆ ವಿನ್ಯಾಸಗೊಳಿಸಲಾಗಿದೆ. ಮನೆಯಲ್ಲಿ ಉತ್ಪತ್ತಿಯಾಗುವ ಹಸಿಕಸವನ್ನು ಹಾಗೂ ವಾರಕ್ಕೊಮ್ಮೆ ಹಿಡಿ ಮಣ್ಣು ಮತ್ತು ಒಂದು ಬಿಂದಿಗೆ ನೀರನ್ನು ಹಾಕಬೇಕು. ಇದರ ನಿರ್ವಹಣೆಗೆ ಹೆಚ್ಚಿನ ಹಣ ಮತ್ತು ಸಮಯದ ಅಗತ್ಯವಿಲ್ಲ ಎಂದರು.

ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ಎಸ್‌. ವಟಾರೆ, ಯೋಜನಾ ನಿರ್ದೇಶಕ ನಾಗೇಂದ್ರ ಎಫ್‌.ಹೊನ್ನಳ್ಳಿ, ಟಿ.ಎಸ್‌.ಮಹದೇವಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.