ಅಡಕೆ ಟಾಸ್ಕ್ಫೋರ್ಸ್‌ಗೆ 10 ಕೋಟಿ ರೂ. ಬಿಡುಗಡೆ

ಅಡಕೆ ಬೆಳೆಗೆ ಹಳದಿ ರೋಗಬಾಧೆ ತಡೆಗೆ ಸಂಶೋಧನೆ ಅಗತ್ಯ: ಆರಗ ಜ್ಞಾನೇಂದ್ರ

Team Udayavani, Dec 1, 2020, 5:05 PM IST

ಅಡಕೆ ಟಾಸ್ಕ್ಫೋರ್ಸ್‌ಗೆ 10 ಕೋಟಿ ರೂ. ಬಿಡುಗಡೆ

ಶಿವಮೊಗ್ಗ: ಅಡಕೆ ಬೆಳೆಗಾರರ ರಕ್ಷಣೆಗೆಂದೇ ಅಸ್ತಿತ್ವಕ್ಕೆ ಬಂದಿರುವ ಅಡಕೆ ಕಾರ್ಯಪಡೆಗೆ (ಟಾಸ್ಕ್ ಫೋರ್ಸ್‌) ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 10 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದಾರೆ ಎಂದು ಕಾರ್ಯಪಡೆ ಅಧ್ಯಕ್ಷ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಕೆ ಬೆಳೆಗಾರರು ಬಹಳ ಸಂದಿಗ್ಧ ಸ್ಥಿತಿಯಲ್ಲಿದ್ದರೂ ಬೆಲೆಯಲ್ಲಿ ಅಸ್ತಿರತೆ, ನ್ಯಾಯಾಲಯದ ಕಾಯ್ದೆಗಳು, ಅತಿವೃಷ್ಟಿ, ಅನಾವೃಷ್ಟಿ ಹೀಗೆ ಹಲವು ಕಾರಣಗಳಿಂದ ಸಂಕಷ್ಟಕ್ಕೆ ಒಳಗಾಗಿದ್ದರೂ ಸರ್ಕಾರ ಇದನ್ನು ಗಮನಿಸಿ ಅಡಕೆ ಟಾಸ್ಕ್ಫೋರ್ಸ್‌ ರಚಿಸಿತು. ತಾವು ಇದಕ್ಕೆ ಅಧ್ಯಕ್ಷನಾಗಿದ್ದೇನೆ ಎಂದರು.

ಕಾರ್ಯಪಡೆ ರಚನೆಯಾದ ನಂತರ ನಾವು ಸುಮ್ಮನೆ ಕುಳಿತುಕೊಳ್ಳಲಿಲ್ಲ.ಸರ್ಕಾರಕ್ಕೆ ನೆರವು ಕೇಳಿದ್ದೆವು.ಮುಖ್ಯಮಂತ್ರಿಗಳು 10 ಕೋಟಿ ರೂ.ಹಣ ಬಿಡುಗಡೆ ಮಾಡಲು ಒಪ್ಪಿದ್ದಾರೆ.ಈಗಾಗಲೇ ಹಣಕಾಸು ಇಲಾಖೆ ತೋಟಗಾರಿಕೆ  ಇಲಾಖೆಯ ಮೂಲಕ ಈ ಹಣವನ್ನು ಬಿಡುಗಡೆ ಮಾಡಿದೆ ಎಂದರು.

ಈ ಹಣವನ್ನು ಅಡಕೆ ಬೆಳೆಗಾರರ ಹಿತಕ್ಕಾಗಿಯೇ ಬಳಸಿಕೊಳ್ಳಲಾಗುವುದು. ಮುಖ್ಯವಾಗಿ ಅಡಕೆಗೆ ಸಂಬಂಧಿಸಿದಂತೆ ಅನೇಕ ಕೇಸುಗಳು ಸುಪ್ರಿಂ ಕೋರ್ಟ್‌ನಲ್ಲಿವೆ. ಅವುಗಳಿಂದ ನಾವು ಹೊರಬರಬೇಕಾಗಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಅಡಕೆಯಲ್ಲಿ ಕ್ಯಾನ್ಸರ್‌ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು. ನಾವು ಈಗ ಅದನ್ನು ಸುಪ್ರೀಂ ಕೋರ್ಟ್‌ಗೆ ಪ್ರಶ್ನೆ ಮಾಡಿ ಅಡಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬುದನ್ನು ಸಾಬೀತುಪಡಿಸಬೇಕು. ಇದಕ್ಕಾಗಿ ಸಂಶೋಧನಾ ವರದಿ ಬೇಕಾಗಿದೆ ಎಂದರು.

ಕಾರ್ಯಪಡೆ ಈಗ ಸಂಶೋಧನಾ ವರದಿಯನ್ನು ನೀಡಲು ಎಂ.ಎಸ್‌. ರಾಮಯ್ಯ ಅನ್ವಯಿಕ ವಿಜ್ಞಾನ ವಿಭಾಗಕ್ಕೆ ಕೋರಿದೆ. ಸಂಸ್ಥೆಯ ಈಗಾಗಲೇ ಅಡಕೆ ಹಾನಿಕರ ಅಲ್ಲ ಎಂದು ವರದಿ ನೀಡುವತ್ತ ತನ್ನ ಕೆಲಸ ಮುಂದುವರಿಸುತ್ತಾ ಇದೆ. ಇನ್ನು ಕೆಲವೇ ತಿಂಗಳಲ್ಲಿ ವರದಿ ಬರಬಹುದು. ಈ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿ ಅಡಕೆಯಲ್ಲಿ ಕ್ಯಾನ್ಸರ್‌ ಇಲ್ಲ. ಅದು ಹಾನಿಕಾರಕ ಅಲ್ಲ ಎಂಬುದನ್ನು ಸಾಬೀತುಪಡಿಸುತ್ತೇವೆ ಇದಕ್ಕಾಗಿ ತಜ್ಞ ವಕೀಲರ ನೇಮಕ ಕೂಡ ಮಾಡಲಾಗುವುದು ಎಂದರು.

ಇದರ ಜೊತೆಗೆ ಅಡಕೆಗೆ ಬಹುಮುಖ್ಯವಾಗಿ ಹಳದಿ ರೋಗದ ಬಾಧೆ ಇದೆ ಮತ್ತು ಹೊಸ ರೋಗ ಬಂದಿದೆ. ಅನೇಕ ಭಾಗಗಳಲ್ಲಿ ಅಡಕೆ ರೋಗ ಹಬ್ಬಿದೆ. ಇದನ್ನು ತಡೆಗಟ್ಟಲುಔಷಧ ಸಹ ಸಂಶೋಧನೆಯಾಗಬೇಕಾಗಿದೆ. ಕಾರ್ಯಪಡೆಯಿಂದ ಈ ಬಗ್ಗೆಯೂ ಚಿಂತನೆ ನಡೆದಿದೆ. ಕೇಂದ್ರ ಸರ್ಕಾರ ಅಡಕೆಯನ್ನು ಆಮದು ಮಾಡಿಕೊಳ್ಳುವುದನ್ನು ತಡೆಯಲು ಕೂಡ ಕಾರ್ಯಪಡೆ ಮನವಿ ಸಲ್ಲಿಸುತ್ತಾ ಬಂದಿದೆ.ಒಟ್ಟಾರೆ ಅಡಕೆ ಬೆಲೆಯಲ್ಲಿ ಸ್ಥಿರತೆ ಕಾಪಾಡಲು,ಅಡಕೆ ಬೆಳೆಗಾರರು ಸಂಕಟದಿಂದ ಪಾರಾಗಲು ಅಡಕೆ ಮಹಾಮಂಡಲ ಮತ್ತು ಇತರ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಪಡೆ ಅಡಕೆ ಬೆಳೆಗಾರರ ರಕ್ಷಣೆಯತ್ತ ಧಾವಿಸುತ್ತಿದೆ ಎಂದ ಅವರು, ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅವರು ಕಾರ್ಯಪಡೆಗೆ ಹಣ ಬಿಡುಗಡೆ ಮಾಡಿದ್ದಕ್ಕೆ ಅಭಿನಂದನೆಗಳು ಎಂದರು.

ಸುದ್ದಿಗೋಷ್ಠಿಯಲ್ಲಿ ಅಡಕೆ ಮಹಾಮಂಡಲ ಹಾಗೂ ಕಾರ್ಯಪಡೆಯ ಸದಸ್ಯರಾದ ಕೊಂಕೋಡಿ ಪದ್ಮನಾಭ, ಸುಬ್ರಮಣ್ಯ ಯಡಗೆರೆ, ಶಿವಕುಮಾರ್‌, ಸುಬ್ರರಾಯ್‌ ಹೆಗಡೆ, ಸದಾಶಿವಪ್ಪ, ರವಿ, ದೇವಪ್ಪ, ಗಿರಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.