12 ವಾರ್ಡ್‌ ಸ್ಮಾರ್ಟ್  ಸಿಟಿ ವ್ಯಾಪ್ತಿಗೆ 


Team Udayavani, Sep 20, 2017, 3:40 PM IST

20-shivamoga-1.jpg

ಶಿವಮೊಗ್ಗ: ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಸ್ಮಾರ್ಟ್‌ಸಿಟಿ ಕುರಿತು ಸೋಮವಾರ ಸಂಜೆ ಪಾಲಿಕೆಯಲ್ಲಿ ಸಭೆ ನಡೆಯಿತು.

ನಗರ ಪಾಲಿಕೆ ಆಯುಕ್ತ ಮುಲೈ ಮುಹಿಲನ್‌ ಮಾತನಾಡಿ, ನಗರದ ಕೇಂದ್ರ ಭಾಗದಲ್ಲಿನ 12 ವಾರ್ಡ್‌ಗಳ ಆಯ್ದ ಪ್ರದೇಶಗಳು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಸೇರುತ್ತವೆ. ಉಳಿದಂತೆ ಪಾರ್ಕ್‌ ಅಭಿವೃದ್ಧಿ, ವೃತ್ತಗಳ ಅಭಿವೃದ್ಧಿ ಇದರಿಂದ ಹೊರತಾಗಿರುತ್ತವೆ ಎಂದು ತಿಳಿಸಿದರು.

ಯೋಜನೆಗೆಂದು ನೀಡಲಾಗುವ ಒಂದು ಸಾವಿರ ಕೋಟಿ ರೂ. ಪೈಕಿ 600 ಕೋಟಿ ರೂ. ಮೂಲ ಸೌಕರ್ಯಕ್ಕೆ ವ್ಯಯ ಮಾಡಲಾಗುತ್ತದೆ. ಉಳಿದ 400 ಕೋಟಿ ರೂ. ವೃತ್ತಗಳ ಅಭಿವೃದ್ಧಿ, ಸಂಚಾರಿ ವ್ಯವಸ್ಥೆ ಅಭಿವೃದ್ಧಿ, ಘನತ್ಯಾಜ್ಯ ನಿರ್ವಹಣೆಗೆ ಬಳಸಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಐದು ವರ್ಷಗಳ ಕಾಲ ಒಂದೇ ಪ್ರದೇಶವನ್ನೂ ಅಭಿವೃದ್ಧಿ ಮಾಡ್ತೀರಾ? ನಗರ ಪಾಲಿಕೆಯ ಯಾವ ವಾರ್ಡ್‌ಗಳು ಸ್ಮಾರ್ಟ್‌ ಸಿಟಿ ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ ಎಂಬ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳನ್ನು ಪ್ರಶ್ನಿಸಿದರು.

ಇಂಜಿನಿಯರ್‌ ಗಣೇಶ್‌ ಮಾತನಾಡಿ, 500 ಎಕರೆ ಪ್ರದೇಶ ಮಾತ್ರ ಸ್ಮಾರ್ಟ್‌ ಸಿಟಿ ಯೋಜನೆಗೆ ಆಯ್ಕೆ ಮಾಡಬೇಕೆಂದು ಕೇಂದ್ರ ಸರ್ಕಾರದ ನಿಯಮವಿದೆ. ಒಂದು ಸಾವಿರ ಕೋಟಿ ರೂ.ನಲ್ಲಿ ಎಷ್ಟು ಪ್ರದೇಶ ಅಭಿವೃದ್ಧಿಪಡಿಸಬಹುದೋ ಅದನ್ನು ಯೋಜನೆಯಲ್ಲಿ ಸೇರಿಸಲಾಗಿದೆ. ಆರು ಸಂಪೂರ್ಣ ವಾರ್ಡ್‌ಗಳು ಸ್ಮಾರ್ಟ್‌ ಸಿಟಿಯಿಂದ ಹೊರಗುಳಿಯುತ್ತವೆ ಎಂದು ಮಾಹಿತಿ ನೀಡಿದರು.

ಬಸ್‌ ನಿಲ್ದಾಣದಿಂದ ಕೃಷ್ಣಪ್ಪ ವೃತ್ತದ ರಸ್ತೆ ಅಭಿವೃದ್ಧಿಗೆ 48 ಕೋಟಿ ರೂ., ಸ್ಮಾರ್ಟ್‌ ರಸ್ತೆಗಳ ನಿರ್ಮಾಣಕ್ಕೆ 265.92 ಕೋಟಿ ರೂ., ಬಸ್‌ ಟರ್ಮಿನಲ್‌ ನಿರ್ಮಾಣಕ್ಕೆ 22.74 ಕೋಟಿ ರೂ., ಕನ್ಸರ್ವೆನ್ಸಿ ಅಭಿವೃದ್ಧಿಗೆ 21 ಕೋಟಿ ರೂ., ನಾಲೆಗಳ ಸೌಂದರ್ಯ ಹೆಚ್ಚಿಸಲು 72 ಕೋಟಿ ರೂ., ಪಾರ್ಕ್‌ ಅಭಿವೃದ್ಧಿಗೆ 96.84 ಕೋಟಿ ರೂ., ಜೈವಿಕ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂ., ಹೆರಿಟೇಜ್‌ ವಿಲೇಜ್‌ಗೆ 6 ಕೋಟಿ ರೂ. ಹಾಗೂ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 81 ಕೋಟಿ ರೂ. ಬಳಕೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಅಲ್ಲದೆ, ಖಾಸಗಿ ಸಹಭಾಗಿತ್ವದಲ್ಲಿ ಪಂಪ್‌ ಹೌಸ್‌ನಲ್ಲಿ ಸೋಲಾರ್‌ ಮೇಲ್ಚಾವಣಿ ಅಳವಡಿಕೆಗೆ 4 ಕೋಟಿ ರೂ., ತುಂಗಾ ನಾಲೆಗೆ ಸೋಲಾರ್‌ ಮೇಲ್ಚಾವಣಿ 324 ಕೋಟಿ ರೂ., ಯೋಗ-ನ್ಯಾಚುರೋಪತಿ ಕೇಂದ್ರ 68 ಕೋಟಿ ರೂ., ಇಕೋ ರೆಸಾರ್ಟ್ -ಬಟರ್‌ಫ್ಲೈ ಪಾರ್ಕ್‌-93.91 ಕೋಟಿ ರೂ., ಐದು ಎಕರೆಯಲ್ಲಿ ವಾಟರ್‌ ಥೀಮ್‌ ಪಾರ್ಕ್‌ 15 ಕೋಟಿ ರೂ., ಶಿವಪ್ಪ ನಾಯಕ ಅರಮನೆ ನವೀಕರಣ 37.54 ಕೋಟಿ ರೂ., ಪುಷೋದ್ಯಮದ ಅಭಿವೃದ್ಧಿಗೆ 10.42 ಕೋಟಿ ರೂ., ಎಲ್‌ಇಡಿ ಬೀದಿ ದೀಪ ಅಳವಡಿಕೆ-2.97 ಕೋಟಿ ರೂ. ಹಾಗೂ 10 ಕೋಟಿ ರೂ. ವೆಚ್ಚದಲ್ಲಿ ಬಹುಮಹಡಿ ಕಾರ್‌ ಪಾರ್ಕಿಂಗ್‌ ನಿರ್ಮಾಣವಾಗಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಮೇಯರ್‌ ಏಳುಮಲೈ, ಉಪಮೇಯರ್‌ ರೂಪಾ ಲಕ್ಷ್ಮಣ್‌, ನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅರ್ಚನಾ ಬಳ್ಳಕೆರೆ, ಎಸ್‌.ರಮೇಶ್‌, ನಗರ ಪಾಲಿಕೆ ಸದಸ್ಯರಾದ ಎನ್‌. ಜೆ. ರಾಜಶೇಖರ್‌, ಮಾಲತೇಶ್‌, ಮೋಹನ್‌ ರೆಡ್ಡಿ ಮತ್ತಿತರರು ಇದ್ದರು.

ಡೆಂಘೀ ಜ್ವರ ಹೆಚ್ಚಳವಾಗುತ್ತಿದೆ. ಯಾವ ಆಸ್ಪತ್ರೆಯಲ್ಲಿ ನೋಡಿದರೂ ಡೆಂಘೀ ತಗುಲಿರುವ ನಾಗರಿಕರು ಕಾಣುತ್ತಿದ್ದಾರೆ. ಫಾಗಿಂಗ್‌ಗೆ ಏನು ವ್ಯವಸ್ಥೆ ಮಾಡಿಕೊಂಡಿದ್ದೀರಿ. ಪಾಲಿಕೆಯಿಂದ ಸೂಕ್ತ ವ್ಯವಸ್ಥೆ ಮಾಡಿಕೊಂಡಂತಿಲ್ಲ. ಜಿಲ್ಲಾ ಆರೋಗ್ಯ ಇಲಾಖೆಯಿಂದ ನಿಮಗೆ ಏನಾದರೂ ಸಹಾಯ ಬೇಕಿದ್ದರೆ ಪಡೆದುಕೊಳ್ಳಿ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.