Sagara ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ: ಓರ್ವನ ಸೆರೆ
Team Udayavani, Apr 14, 2024, 11:41 PM IST
ಸಾಗರ: ಸುಮಾರು 60ಕ್ಕೂ ಹೆಚ್ಚು ಸಣ್ಣ ಅಡಿಕೆ ವ್ಯಾಪಾರಿಗಳಿಗೆ ಅಂದಾಜು 4 ಕೋ. ರೂ. ವಂಚಿಸಿದ್ದ ಆರೋಪದಲ್ಲಿ ನಗರದ ಅಜೀಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ನೆಹರು ನಗರದ ಮದೀನಾ ಮಸೀದಿ ಪಕ್ಕದ ನಿವಾಸಿಯಾಗಿದ್ದ ಅಜೀಂ ಬೆಂಗಳೂರಿನಲ್ಲಿ ಖಾಸಗಿ ಚಿಟ್ಫಂಡ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ಕಾಲದಲ್ಲಿ, ಅಂದರೆ 2020ರಲ್ಲಿ ಸಾಗರಕ್ಕೆ ಬಂದು ಸಣ್ಣದಾಗಿ ಅಡಿಕೆ ವ್ಯವಹಾರ ಆರಂಭಿಸಿದ್ದ. ಜತೆಯಲ್ಲಿ ಆನ್ಲೈನ್ ಜೂಜಾಟ ಆಡುವ ಅಭ್ಯಾಸವಿತ್ತು ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಈತ ಇಲ್ಲಿನ ಸಣಪುಟ್ಟ ವ್ಯಾಪಾರಿಗಳಿಂದ ಉದ್ರಿ ಲೆಕ್ಕದಲ್ಲಿ ಖರೀದಿಸಿ, ಬೇರೆಯವರಿಗೆ ಮಾರುತ್ತಿದ್ದ. ಆನ್ಲೈನ್ ಜೂಜಾಟದ ಅಭ್ಯಾಸವಿದ್ದ ಈತ ವ್ಯಾಪಾರದಲ್ಲಿ ಬಂದ ಲಾಭವನ್ನು ಅದರಲ್ಲಿ ಕಳೆದು ಕೊಳ್ಳುತ್ತಿದ್ದ. ಕಳೆದ 7-8 ತಿಂಗಳಿಂದ ಜೂಜಾಟದಿಂದ ನಿರಂ ತರ ನಷ್ಟವಾಗಿ ಸಾಲದ ಮೊತ್ತವೂ ಕೋಟಿ ಲೆಕ್ಕದಲ್ಲಿ ಬೆಳೆದಿತ್ತು. ಅಡಿಕೆ ಪಡೆದವರಿಗೆ ಹಣ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ಬಂದಿದ್ದ. ಅಡಿಕೆ ಕೊಟ್ಟವರು ಮನೆಗೆ ಬರುತ್ತಿದ್ದಂತೆ ಕೆಲವು ದಿನ ತಲೆ ಮರೆಸಿಕೊಂಡು ಬೆಂಗಳೂರು, ಬಿಹಾರ ಎಂದೆಲ್ಲ ಓಡಾಡಿ ಸಾಗರಕ್ಕೆ ಮರಳಿದ್ದ. ಇದನ್ನೇ ಕಾದಿದ್ದ ಹಲವು ಅಡಿಕೆ ವ್ಯಾಪಾರಿಗಳು ಪೊಲೀಸರಿಗೆ ದೂರು ನೀಡಿದ್ದರು.
ವಿಚಾರಣೆ ವೇಳೆ, 4 ಕೋ. ರೂ.ಗೂ ಹೆಚ್ಚು ಸಾಲದಲ್ಲಿದ್ದೇನೆ. ಅಡಿಕೆ ನೀಡಿದವರಿಗೆ ಹಣ ಕೊಡಲಾಗದ ಸ್ಥಿತಿಯಲ್ಲಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್