ಯಾತ್ರೆಯಿಂದ ಬಂದವರಲ್ಲಿ ಸೋಂಕು ಜಾತ್ರೆ: ಓಂಶಕ್ತಿ ಯಾತ್ರೆಗೆ ಹೋಗಿ ಬಂದ 63 ಜನರಗೆ ಪಾಸಿಟಿವ್!
Team Udayavani, Jan 9, 2022, 1:38 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚುವ ಭೀತಿ ಎದುರಾಗಿದೆ. ತಮಿಳುನಾಡು ರಾಜ್ಯದ ದೇವಾಲಯಗಳಿಗೆ ಹೋಗಿ ಜಿಲ್ಲೆಗೆ ಮರಳಿ ಬಂದವರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಓಂ ಶಕ್ತಿ ಯಾತ್ರೆಗೆ ಹೋಗಿ ಬಂದ 63 ಜನರಲ್ಲಿ ರವಿವಾರ ಕೋವಿಡ್ ಸೋಂಕು ಪತ್ತೆಯಾಗಿದೆ. ಶನಿವಾರದವರೆಗೂ ಓಂ ಶಕ್ತಿ ಯಾತ್ರೆಗೆ ಹೋಗಿ ಬಂದಿದ್ದ 20 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಮತ್ತೆ 63 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆಯಾಗಿ ಇದುವರೆಗೆ ಓಂ ಶಕ್ತಿ ಯಾತ್ರೆಗೆ ಹೋಗಿ ಬಂದ 83 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಇದನ್ನೂ ಓದಿ:ಒಂದೇ ದಿನ 1.59 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆ; 3623ಕ್ಕೇರಿದ ಒಮಿಕ್ರಾನ್ ಸಂಖ್ಯೆ
ಶನಿವಾರ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 117 ಕೋವಿಡ್ ಪ್ರಕರಣಗಳು ಪತ್ತೆಯಾಗಿತ್ತು. ಇಂದೂ ನೂರರ ಗಡಿ ದಾಟುವ ಸಾಧ್ಯತೆಯಿದೆ. ಶಿಕಾರಿಪುರ, ಭದ್ರಾವತಿ, ಹೊಸನಗರ ತಾಲೂಕಿನಿಂದ ತಮಿಳುನಾಡಿನ ದೇವಾಲಯಗಳಿಗೆ ಭಕ್ತರು ತೆರಳಿದ್ದು, ಶಿವಮೊಗ್ಗದ ಜೊತೆಗೆ ಈ ತಾಲೂಕುಗಳಿಗೂ ಸೋಂಕು ವ್ಯಾಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ