ಶಿವಮೊಗ್ಗದಲ್ಲಿ ಔಷಧ ಅಂಗಡಿ ಬಂದ್ಗೆ ಉತ್ತಮ ಪ್ರತಿಕ್ರಿಯೆ
Team Udayavani, Sep 29, 2018, 2:07 PM IST
ಶಿವಮೊಗ್ಗ: ಆನ್ಲೈನ್ನಲ್ಲಿ ಔಷಧ ಮಾರಾಟ ಮಾಡುವುದಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ ಶುಕ್ರವಾರ ದೇಶಾದ್ಯಂತ ಔಷಧ ವ್ಯಾಪಾರಿಗಳು ಕರೆ ನೀಡಿರುವ ಬಂದ್ಗೆ ಶಿವಮೊಗ್ಗದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ನಗರದ ಎಲ್ಲ ಮೆಡಿಕಲ್ ಶಾಪ್ಗ್ಳನ್ನು ಬೆಳಗ್ಗಿನಿಂದಲೇ ಮುಚ್ಚಲಾಗಿತ್ತು. ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಆನ್ಲೈನ್ ಔಷಧ ವ್ಯಾಪಾರದಿಂದ ದೇಶದಲ್ಲಿ 8 ಲಕ್ಷ ಕುಟುಂಬಗಳು ಬೀದಿಗೆ ಬೀಳುವ ಸಂಭವವಿದೆ. ಇದು ಔಷಮಾರಾಟಗಾರರ ವೃತ್ತಿಯ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತದೆ ಎಂದರು.
ಆನ್ಲೈನ್ನಲ್ಲಿ ಔಷಧ ಖರೀದಿಸುವುದರಿಂದ ರೋಗಿಗಳಿಗೆ ಸಮರ್ಪಕ ಔಷಧಗಳು ದೊರೆಯುವುದಿಲ್ಲ. ಅದಕ್ಕಿಂತ ಮುಖ್ಯವಾಗಿ ಯುವ ಜನತೆ ಆನ್ಲೈನ್ನಲ್ಲಿ ಮಾದಕ ಪರಿಣಾಮ ಬೀರುವ ಔಷಧಗಳನ್ನು ಖರೀದಿಸುತ್ತಿದ್ದು, ಇದು ಕೂಡ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹಲವಾರು ಯುವಕರು ಒತ್ತಡ ನಿಯಂತ್ರಣಕ್ಕಾಗಿ ಮಾದಕ ಚಟಗಳಿಗೆ ಬಲಿಯಾಗುತ್ತಿದ್ದು ಆನ್ ಲೈನ್ ಮೂಲಕ ಔಷಧಗಳನ್ನು ಖರೀದಿಸುತ್ತಿದ್ದಾರೆ.
ಹೀಗಿರುವಾಗ ಕೇಂದ್ರ ಸರಕಾರ ಆನ್ಲೈನ್ ಔಷಧ ವ್ಯಾಪಾರವನ್ನು ಕಾನೂನುಬದ್ಧಗೊಳಿಸಲು ಮುಂದಾಗಿರುವುದು ಸರಿಯಲ್ಲ ಎಂದರು. ಔಷಧ ವ್ಯಾಪಾರವನ್ನೇ ನಂಬಿಕೊಂಡು ಲಕ್ಷಾಂತರ ಮಂದಿ ಬದುಕುತ್ತಿದ್ದಾರೆ. ಆನ್ ಲೈನ್ ವಹಿವಾಟಿನಿಂದಾಗಿ ಅವರ ಬದುಕು ಸಂಕಷ್ಟಕೀಡಾಗಿದೆ. ಕೂಡಲೇ ಕೇಂದ್ರ ಸರಕಾರ ಆನ್ಲೈನ್ ಔಷಧ ವ್ಯಾಪಾರ ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿವೇಕಾನಂದ ನಾಯ್ಕ, ರುದ್ರಪ್ರಸಾದ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ