ದರ್ಶನ ಇಲ್ಲದಿದ್ರೂ ಸಿಗಂದೂರಲ್ಲಿ ಭಕ್ತರ ದಂಡು
ಬೇರೆ ಬೇರೆ ಸ್ಥಳಗಳಿಂದ ಭಕ್ತರು, ಪ್ರವಾಸಿಗರ ಆಗಮನ-ಸ್ಥಳೀಯರಲ್ಲಿ ಆತಂಕ
Team Udayavani, Jun 30, 2020, 1:22 PM IST
ಸಾಗರ: ಸಿಗಂದೂರಿನ ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಲು ಲಾಂಚ್ನಲ್ಲಿ ಪ್ರವಾಸಿ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ.
ಸಾಗರ: ತಾಲೂಕಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲೊಂದಾದ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಭಕ್ತರಿಗೆ ನಿರ್ಬಂಧ ಮುಂದುವರೆದಿದ್ದರೂ ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ಭಕ್ತರು, ಪ್ರವಾಸಿಗರು ಖಾಸಗಿ ವಾಹನಗಳಲ್ಲಿ ಆಗಮಿಸುತ್ತಿದ್ದಾರೆ. ಇದು ಸ್ಥಳೀಯರ ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕೊರೊನಾ ಭಯ ತೀವ್ರವಾಗುತ್ತಿದ್ದರೂ ಲಾಕ್ಡೌನ್ ಸಡಿಲಿಕೆಯಾಗಿದ್ದರಿಂದ ಎಲ್ಲೆಡೆಯಿಂದ ಪ್ರವಾಸಿಗರು ಆಗಮಿಸುತ್ತಲೇ ಇದ್ದಾರೆ. ಕೆಲ ದಿನಗಳ ಹಿಂದೆ ಈ ತುಮರಿ ದ್ವೀಪದ ಹಳ್ಳಿಯೊಂದರಲ್ಲಿ ಯುವಕನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದರೂ, ಆತ ಬೇರೆ ರಾಜ್ಯದಿಂದ ಬಂದು ಕ್ವಾರಂಟೈನ್ ಆಗಿದ್ದ ಹಿನ್ನೆಲೆಯಲ್ಲಿ ಸೋಂಕು ಪಸರಿಸಿರಲಿಲ್ಲ. ಆದರೆ ಈಗ ಪ್ರವಾಸಿಗರು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಸಿಗಂದೂರು ಪ್ರದೇಶವನ್ನು ಸೂಕ್ಷ್ಮವಾಗಿಸಿದೆ.
ಈಗಾಗಲೇ ತಾಲೂಕಿನ ವರದಪುರದಲ್ಲಿ ಸರ್ಕಾರದ ಸಡಿಲಿಕೆಯ ಅವಕಾಶದ ಹೊರತಾಗಿಯೂ ಶ್ರೀಧರರ ಸಮಾಧಿ ದರ್ಶನ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಈ ನಡುವೆ ಸಿಗಂದೂರಿನಲ್ಲಿಯೂ ಭಕ್ತರಿಗೆ ನಿಷೇಧ ಮುಂದುವರಿಸಿದ್ದನ್ನು ಕ್ಷೇತ್ರದ ವ್ಯವಸ್ಥಾಪಕರಾದ ರವಿಕುಮಾರ್ ಕೆಲ ದಿನಗಳ ಹಿಂದೆ ಪ್ರಕಟಣೆಯಲ್ಲಿ ತಿಳಿಸಿದ್ದರು. ಆದರೂ ಜನ ಸಿಗಂದೂರಿನತ್ತ ಧಾವಿಸುತ್ತಿದ್ದಾರೆ. ಜನರ ಒತ್ತಡಕ್ಕೆ ಮಣಿದು ಸಿಗಂದೂರಿನ ಚೌಡೇಶ್ವರಿಯ ದರ್ಶನ, ಪೂಜೆ, ಸೇವೆಗಳಿಗೆ ಯಾವುದೇ ರೀತಿಯಲ್ಲಿ ಅವಕಾಶ ಕೊಡಬಾರದು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈಗಿನ ಪರಿಸ್ಥಿತಿಯನ್ನು ಸೂಕ್ತವಾಗಿ ಅವಲೋಕಿಸಿ, ಶರಾವತಿ ಹಿನ್ನೀರಿನಲ್ಲಿ ತುಮರಿ ಭಾಗಕ್ಕೆ ಸಂಚರಿಸಲು ಸ್ಥಳೀಯರಿಗೆ ಮಾತ್ರ ಲಾಂಚ್ನಲ್ಲಿ ಅವಕಾಶ ಕಲ್ಪಿಸುವ ಷರತ್ತನ್ನು
ಜಿಲ್ಲಾಡಳಿತ ಜಾರಿಗೆ ತಂದು ಕೋವಿಡ್ ಆಪತ್ತಿನಿಂದ ಸ್ಥಳೀಯರನ್ನು ಕಾಪಾಡಬೇಕು ಎಂದು ತುಮರಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ ಅವರು
ಡಿಸಿಯವರಿಗೆ ಮನವಿ ಮಾಡಿದ್ದಾರೆ.
ನಾನು ಊರಿಗೆ ಬರುವಾಗ ಬೆಂಗಳೂರು ರಿಜಿಸ್ಟ್ರೇಷನ್ ಇರುವ ಬಹಳಷ್ಟು ವಾಹನಗಳು ಲಾಂಚಿನಲ್ಲಿದ್ದವು. ನಿಜಕ್ಕೂ ಅಂಜಿಕೆಯಾಗುತ್ತಿದೆ. ಬೆಂಗಳೂರು ಈಗ ಅತಿ ಹೆಚ್ಚು ಕೊರೊನಾ ಸೋಂಕಿತರ ಹೊಂದಿರುವ ನಗರವಾಗಿದೆ. ಅಲ್ಲಿಂದ ಬಂದವರೊಂದಿಗೆ ಪ್ರಯಾಣಿಸುವಾಗ ಅತೀ ಎಚ್ಚರ ಅಗತ್ಯ. ಈ ಪ್ರವಾಸಿಗರು ಮಾಸ್ಕ್ ಸಹ ಧರಿಸುತ್ತಿಲ್ಲ. ತಾಲೂಕು ಆಡಳಿತದ ಗಮನ ಈ ಕಡೆ ಬಹು ಮುಖ್ಯವಾಗಿದೆ. ರಾಮಸ್ವಾಮಿ ಕಳಸವಳ್ಳಿ, ಸ್ಥಳೀಯ ಹಾಗೂ ಸಾಗರ ಬಳಕೆದಾರರ ವೇದಿಕೆ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ