ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ
Team Udayavani, Jun 6, 2022, 3:07 PM IST
ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
“ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳೂರು ಕಿನಾರೆ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಪತ್ತೆ ಮಾಡಿದ್ದು, ರಾಜ್ಯ ಆಂತರಿಕ ಭದ್ರತಾ ವಿಭಾಗದ ಸಿಬ್ಬಂದಿಗಳು ತನಿಖೆಯಲ್ಲಿ ಕೈ ಜೋಡಿಸಿದ್ದಾರೆ.
ಇದನ್ನೂ ಓದಿ:ಪ್ರವಾದಿ ಅವಹೇಳನ ವಿವಾದ: ಇಸ್ಲಾಮ್ ರಾಷ್ಟ್ರಗಳ ಟೀಕೆ ಸಂಕುಚಿತ ಮನಸ್ಸಿನದ್ದು: ಭಾರತ
ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆಯ ಹಿಂದಿನ ದುಷ್ಟರು ಯಾರಿದ್ದಾರೆ ಹಾಗೂ ಯಾರ ಜತೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದರ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…