Lok Sabha Election; ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ


Team Udayavani, Apr 17, 2024, 5:49 PM IST

Lok Sabha Election; ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ

ಸಾಗರ: ನಾನು 5 ಬಾರಿ ಶಾಸಕರಾಗಿದ್ದಾಗಲೂ ಇಷ್ಟು ಜನ ಬೆಂಬಲ ಸಿಕ್ಕಿರಲಿಲ್ಲ. ಶಿವಮೊಗ್ಗದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಜನ ಬರುತ್ತಿದ್ದಾರೆ. ಸಾಗರ ತಾಲೂಕಿನ ಹತ್ತಾರು ಕಾಂಗ್ರೆಸ್ ಪ್ರಮುಖರು ಕರೆ ಮಾಡಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷ ದುರ್ಬಲ ಅಭ್ಯರ್ಥಿ ಹಾಕಿಸಿಕೊಂಡು ಬಂದಿದ್ದಾರೆ ಎಂದು ಅವರೇ ಹೇಳುತ್ತಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಪ್ರತಿಪಾದಿಸಿದರು.

ನಗರದ ರಾಷ್ಟ್ರ ಭಕ್ತರ ಬಳಗದ ಕಚೇರಿಯಲ್ಲಿ ಬುಧವಾರ ನಡೆದ ನಗರ, ಹಾಗೂ ಗ್ರಾಮಾಂತರ ಭಾಗದ ಕಾರ‍್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಾಮಾನ್ಯ ಜನರ ಮಧ್ಯೆಯಿದ್ದು, ಅವರಿಗೆ ಅಗತ್ಯ ಇರುವ ಕೆಲಸ ಮಾಡಿಕೊಂಡು ಬಂದವನು. ಬೊಗಳೆ ಭರವಸೆ ನಾನು ಕೊಡುವುದಿಲ್ಲ.

ಶಿವಮೊಗ್ಗದಲ್ಲಿ ಐದು ಬಾರಿ ಗೆದ್ದು ಬಂದಾಗಲೂ ನಾನು ಕೇವಲ ಭರವಸೆ ನೀಡಿಲ್ಲ. ಸಮಾಜದ ಪ್ರತಿ ವರ್ಗವರ ಅವಶ್ಯಕತೆಗಳನ್ನು ಅರಿತು, ಅವರಿಗೆ ಬೇಕಿರುವ ಎಲ್ಲ ಕೆಲಸಗಳನ್ನೂ ಮಾಡಿ ತೋರಿಸಿದ್ದೇನೆ. ಜನರಿಗೆ ಅಗತ್ಯವಿರುವ ಅಭಿವೃದ್ಧಿ ವಿಚಾರಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಕ್ಕೆ ಹಿಂದೇಟು ಹಾಕುವುದಿಲ್ಲ. ಹೀಗಾಗಿ ನಾನು ಬಿಜೆಪಿಯವರಂತೆ ಸುಳ್ಳು ಹೇಳಿಕೊಂಡು ಜನರ ಬಳಿ ಮತ ಕೇಳುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮುಖ್ಯವಾಗಿ ಕ್ಷೇತ್ರದ ಸಾಮಾನ್ಯ ಜನ ಈಶ್ವರಪ್ಪರನ್ನು ಬೆಂಬಲಿಸುವ ಮಾತನಾಡಿದ್ದಾರೆ. ಅವರು ಯಾವ ಕಾರಣಕ್ಕೆ ಚುನಾವಣೆಗೆ ಇಳಿದಿದ್ದಾರೆನ್ನುವುದನ್ನು ಗುರುತಿಸಿದ್ದಾರೆ. ಜೆಡಿಎಸ್, ಬಿಜೆಪಿ ಸೇರಿದಂತೆ ಎಲ್ಲ ಪಕ್ಷದವರು, ಸಮಾಜದ ನೂರಾರು ಗಣ್ಯ ವ್ಯಕ್ತಿಗಳು, ವಕೀಲರು, ವೈದ್ಯರು, ವ್ಯಾಪಾರಿಗಳು, ಜನಸಾಮಾನ್ಯರು ಬೆಂಬಲ ನೀಡುತ್ತಿದ್ದಾರೆ. ಪ್ರಮುಖವಾಗಿ ಅದೃಷ್ಟ ಮತದಾರರು ನನ್ನ ಕೈ ಹಿಡಿಯುತ್ತಾರೆ ಎನ್ನುವುದು ಗೊತ್ತಾಗಿದೆ ಎಂದು ಹೇಳಿದರು.

ಮೊದಲ ಹಂತದಲ್ಲಿ ಜಿಲ್ಲಾ ಪಂಚಾಯ್ತಿ, ತಾಲೂಕು, ಗ್ರಾಮ ಪಂಚಾಯ್ತಿ, ಬೂತ್ ಮಟ್ಟದಲ್ಲಿ ಪ್ರಮುಖರನ್ನು ನೇಮಕ ಮಾಡಿಕೊಳ್ಳೋಣ. ನಂತರ ವಾರ್ಡಿನ ಪ್ರತಿ ಮನೆಗೂ ಪ್ರಮುಖರೊಂದಿಗೆ ಹೋಗಿ ಕರಪತ್ರ ಹಂಚಿ, ಅಚ್ಚುಕಟ್ಟಾಗಿ ಪ್ರಚಾರ ನಡೆಸೋಣ. ನಾವೆಲ್ಲರೂ ಒಟ್ಟಾಗಿ ಸೇರಿ ಪ್ರಚಾರ ಕಾರ‍್ಯದಲ್ಲಿ ತೊಡಗಿಕೊಳ್ಳೋಣ. ಕ್ಷೇತ್ರದಲ್ಲಿ ನಮ್ಮ ಪರವಾದ ಅಲೆ ಹೆಚ್ಚಿದೆ. ಶೇ. 70ರಷ್ಟು ಜನ ಬೆಂಬಲ ಲಭ್ಯವಾಗಿದ್ದು, ಗೆಲುವು ನಮ್ಮದಾಗುತ್ತದೆ ಎಂದರು.

ಕೃಷ್ಣಮೂರ್ತಿ, ಅಣ್ಣಪ್ಪ ಪೂಜಾರಿ, ರೇಣುಕಾ ಮೂರ್ತಿ, ಸತೀಶ್ ಅದರಂತೆ, ಗೌರೀಶ್, ಮೊದಲಾದವರು ಹಾಜರಿದ್ದರು. ಇದೇ ವೇಳೆ ಹಲವು ಕಾರ್ಯಕರ್ತರು ಬಳಗಕ್ಕೆ ಸೇರ್ಪಡೆಯಾದರು.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.