ಸಿಗಂದೂರು : ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ
Team Udayavani, Jun 27, 2021, 8:21 PM IST
ಶಿವಮೊಗ್ಗ : ಸಾಗರ ತಾಲೂಕು ಶರಾವತಿ ನದಿಯ ಸಿಗಂದೂರು ಲಾಂಚ್ ನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಕೂಡಲೇ ಲಾಂಚ್ ನಲ್ಲಿದ್ದ ಯುವಕರು ರಕ್ಷಿಸಿರುವ ಘಟನೆ ಇಂದು ( ಜೂನ್ ) ನಡೆದಿದೆ. ಹಾವೇರಿ ತಾಲ್ಲೂಕಿನ ಹಿರೇಕೆರೂರು ಗ್ರಾಮದ ರೇಣುಕಾ(46) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.
ಇಂದು ಸಂಜೆ ಲಾಂಚ್ ಸಂಚರಿಸುವಾಗ ಹಿನ್ನೀರಿಗೆ ಧುಮುಕಿದ್ದಳು. ಕೂಡಲೇ ಲಾಂಚ್ ನಲ್ಲಿದ್ದ ಯುವಕರು ಲೈಫ್ ಜಾಕೇಟ್ ಸಹಾಯದಿಂದ ಹಿನ್ನೀರಿಗೆ ಧುಮುಕಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಹಿನ್ನೀರು ಭಾಗದ ಸುಧಾಕರ್, ಪ್ರಕಾಶ್ ಬೆಳಮಕ್ಕಿ, ಪ್ರಶಾಂತ್ ಸಿಗಂದೂರ ಯುವಕರ ತಂಡ ಮಹಿಳೆಯನ್ನು ರಕ್ಷಿಸಿದೆ. ಮಹಿಳೆ ನೀರಿಗೆ ಬಿಳುತ್ತಿದ್ದಂತೆ ಆಕೆಯನ್ನು ಉಳಿಸುವ ಎಲ್ಲ ಪ್ರಯತ್ನ ನಡೆಸಲಾಯಿತು. ಮಹಿಳೆಗೆ ಟ್ಯೂಬ್ ಗಳನ್ನು ಎಸೆಯಲಾಯಿತು. ಆದರೆ ಮಹಿಳೆ ಟ್ಯೂಬ್ ಗಳನ್ನು ಹಿಡಿದುಕೊಳ್ಳಲು ಸಾಧ್ಯವಾಗದಿದ್ದರಿಂದ ಯುವಕರೇ ನೀರಿಗೆ ಜಿಗಿದು ಮಹಿಳೆಯನ್ನು ರಕ್ಷಿಸಿದ್ದಾರೆ.
ಇನ್ನು ಕೌಟುಂಬಿಕ ಕಾರಣಗಳಿಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗುತ್ತಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ