Thirthahalli ತುಂಗಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು
Team Udayavani, May 19, 2023, 9:27 PM IST
ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊರಬೈಲು ಬುಕ್ಲಾಪುರ ಸಮೀಪ ಗುರುವಾರ ಮಧ್ಯಾಹ್ನನಡೆದಿದ್ದು ಶುಕ್ರವಾರ ಶವ ಪತ್ತೆಯಾಗಿದೆ.
ಹೊರಬೈಲಿನ ಮರ ಕೆಲಸ ಮಾಡುತ್ತಿರುವ ವೆಂಕಟೇಶ ಆಚಾರ್ಯ ಅವರ ಪುತ್ರ ಮಾಧವ್ ( 26) ಈಜಲು ಹೋದಾಗ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. 4 ಮಂದಿ ಸ್ನೇಹಿತರು ಈಜಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡು ದಿನಗಳಿಂದ ನಿರಂತರವಾಗಿ ಅಗ್ನಿ ಶಾಮಕ ದಳದ ಸಿಬಂದಿಗಳು ನದಿಯಲ್ಲಿ ಶೋಧ ನಡೆಸಿದರೂ ಮೃತ ದೇಹ ಪತ್ತೆ ಯಾಗಲಿಲ್ಲ, ನಂತರ ಬುಕ್ಲಾಪುರದ ಬಳಿ ಶವ ಪತ್ತೆಯಾಗಿದ್ದು, ಶವವನ್ನು ಕುರುವಳ್ಳಿಯ ಸಾಮಾಜಿಕ ಸೇವಕ, ನೂರಾರು ಶವವನ್ನು ನದಿಯಿಂದ ಮೇಲಕ್ಕೆ ಎತ್ತಿರುವಂತಹ ಪ್ರಮೋದ್ ಪೂಜಾರಿ ಅವರು ಮೇಲೆತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು