ಪುರಸಭೆಯಿಂದ ಹಳ್ಳಿಗಳನ್ನು ಕೈಬಿಡಿ

ಪುರಸಭೆಯ ಹೆಸರಿನಲ್ಲಿ ಸಾಮಾನ್ಯ ಸಭೆಗಳು ಆಗಿವೆ. ಸದಸ್ಯರು ಗೌರವಧನ ಸಹ ಪಡೆದಿದ್ದಾರೆ

Team Udayavani, Oct 19, 2021, 6:15 PM IST

ಪುರಸಭೆಯಿಂದ ಹಳ್ಳಿಗಳನ್ನು ಕೈಬಿಡಿ

ಶಿರಾಳಕೊಪ್ಪ: ಪುರಸಭೆಗೆ ಸೇರ್ಪಡೆಯಾಗಿರುವ ಹಳ್ಳಿಗಳ ಜನರಿಗೆ ಬಗರಹುಕುಂ, ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಪುರಸಭೆಯಿಂದ ಸಾಧ್ಯವಾಗುತ್ತಿಲ್ಲ. ಹಾಗಾಗಿ, ಗ್ರಾಮಗಳನ್ನು ಕೈಬಿಟ್ಟು ಶಿರಾಳಕೊಪ್ಪ ಪುರಸಭೆ ಮಾಡಬೇಕು ಎಂದು ಪುರಸಭೆ ವಿಪಕ್ಷ ನಾಯಕ ತಡಗಣಿ ರಾಜಣ್ಣ ಒತ್ತಾಯಿಸಿದರು.

ಪಟ್ಟಣದ ಪುರಸಭೆಯಲ್ಲಿ ಸೋಮವಾರ ನಡೆದ ತುರ್ತುಸಭೆಯಲ್ಲಿ ಅವರು ಮಾತನಾಡಿದರು. ಯಾವ ಸದಸ್ಯರಿಗೂ ಚುನಾವಣೆ ಮಾಡುವ ಇಚ್ಛೆ ಇಲ್ಲ. 2021ರ ಜನಗಣತಿ ಆಧರಿಸಿ ಪಟ್ಟಣದಲ್ಲೇ 23 ವಾರ್ಡ್‌ಗಳನ್ನಾಗಿ ಮಾಡಿ ಇರುವ ಸದಸ್ಯರನ್ನು ಮುಂದುವರಿಸುವುದು ಸೂಕ್ತ ಎಂದು ತಮ್ಮ ಇಂಗಿತ ವ್ಯಕ್ತಪಡಿಸಿದರು.

ಶಿರಾಳಕೊಪ್ಪವನ್ನು ತಾಲೂಕು ಕೇಂದ್ರ ಮಾಡಬೇಕು. ಈ ಮೂಲಕ ತಾಳಗುಂದ, ಉಡುಗಣಿ ಭಾಗದ ಜನರಿಗೆ ಅನುಕೂಲ ಮಾಡಿಕೊಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದರು. ಪುರಸಭಾ ಸದಸ್ಯ ಪಿ. ಜಾಫರ್‌ ಮಾತನಾಡಿ,ಪುರಸಭೆ ಸದಸ್ಯರ ಗಮನಕ್ಕೆ ಬಾರದೇ ವಾಡ್‌ ìಗಳ ಪುನರ್‌ವಿಂಗಡಣೆ ಮಾಡಲಾಗುತ್ತಿದೆ. ನಮ್ಮ ಹಕ್ಕು ಮೊಟಕುಗೊಳಿಸುವ ಪ್ರಯತ್ನ ನಡೆಯುತ್ತಿದೆ. ಪಟ್ಟಣದಲ್ಲಿ ಸಾಕಷ್ಟು ಸಂಖ್ಯೆಯ ಜನರು ಇರುವಾಗ ಹಳ್ಳಿಗಳನ್ನು ಸೇರಿಸುವ ಅಗತ್ಯವಿರಲಿಲ್ಲ ಎಂದರು.

ಸದಸ್ಯ ಮುದಾಸಿರ್‌ ಮಾತನಾಡಿ, 2011ರ ಜನಗಣತಿ ಆಧಾರದಲ್ಲಿ ಪುರಸಭೆ ಮಾಡಲಾಗಿದೆ. ಅದನ್ನು 2021ರ ಜನಗಣತಿ ಆಧಾರದಲ್ಲಿ ಮಾಡಿದರೆ ಪಟ್ಟಣದಲ್ಲಿಯೆ 23 ವಾರ್ಡ್‌ ಮಾಡುವಷ್ಟು ಜನಸಂಖ್ಯೆ ಲಭ್ಯವಾಗುತ್ತದೆ ಎಂದರು. ಮುಖ್ಯಾಧಿಕಾರಿ ಹೇಮಂತ ಡೊಳ್ಳಿ ಮಾತನಾಡಿ, ಪಪಂ ಅನ್ನು ಸರ್ಕಾರ ಪುರಸಭೆಯಾಗಿ ಮಾರ್ಪಡಿಸಿ ಗೆಜೆಟ್‌ನಲ್ಲಿ ಅಧಿಕೃತವಾಗಿ ಪ್ರಕಟಿಸಿದೆ. ಪುರಸಭೆಯ ಹೆಸರಿನಲ್ಲಿ ಸಾಮಾನ್ಯ ಸಭೆಗಳು ಆಗಿವೆ. ಸದಸ್ಯರು ಗೌರವಧನ ಸಹ ಪಡೆದಿದ್ದಾರೆ ಎಂದೂ ಸಭೆಗೆ ತಿಳಿಸಿದರು.

ಶಿರಾಳಕೊಪ್ಪದ ಅಭಿವೃದ್ಧಿಗಾಗಿ ಸರ್ಕಾರ ಪಪಂ ಅನ್ನು ಕಾನೂನುಬದ್ಧವಾಗಿ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದೆ. ಸಾಮಾನ್ಯ ಸಭೆಗಳು ಪುರಸಭೆಯ ಹೆಸರಿನಲ್ಲಿ ಜರುಗಿವೆ. ಅದೇ ಸಾಮಾನ್ಯ ಸಭೆಗಳಲ್ಲಿ ಪಪಂ ನಾಮಫಲಕವನ್ನು ಪುರಸಭೆಯ ನಾಮಫಲಕವಾಗಿ ಬದಲಾಯಿಸಲು ಠರಾವು ಮಾಡಲಾಗಿದೆ. ಇಷ್ಟೆಲ್ಲ ಆದ ಮೇಲೆ ಪುರಸಭೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ಹಾಗಾಗಿ, ಈ ವಿಷಯಕ್ಕೆ ಸಂಬಂಧಪಟ್ಟಂತೆ ಸಭೆಯ ನಿರ್ಣಯಕ್ಕೆ ತಮ್ಮ ವಿರೋಧವಿದೆ ಎಂದು ಉಪಾಧ್ಯಕ್ಷೆ ರಾಜೇಶ್ವರಿ ವಸಂತಕುಮಾರ್‌ ಲಿಖೀತವಾಗಿ ಪತ್ರ ನೀಡಿದರು.

ನಂತರ ಉಪಾಧ್ಯಕ್ಷೆ ರಾಜೇಶ್ವರಿ ವಸಂತಕುಮಾರ್‌ ಹೊರತು ಪಡಿಸಿ ಉಳಿದ ಸದಸ್ಯರು ಬಹುಮತದಿಂದ ಪುರಸಭೆಗೆ ಸೇರಿರುವ ತಡಗಣಿ, ಕ್ಯಾದಿಕೊಪ್ಪ, ಬೆಲವಂತನಕೊಪ್ಪ ಗ್ರಾಮಗಳನ್ನು ಕೈಬಿಡಬೇಕು. ಶಿಕಾರಿಪುರವನ್ನು ತಾಲೂಕು ಕೇಂದ್ರ ಮಾಡಬೇಕು ಎಂದೂ ನಿರ್ಣಯಿಸಿದರು. ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಮಕೂಲ್‌ ಸಾಬ್‌, ಸದಸ್ಯರಾದ ಟಿ. ರಾಜು, ಅನಿಲ್‌ ಕುಮಾರ್‌ ಸುರಹೊನ್ನೆ, ಎಂ.ಆರ್‌. ರಾಘವೇಂದ್ರ, ಮಮತಾ, ಸಾಧಿಕ್‌, ಸಲ್ಮಾ ಬೇಗಂ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.