ದಟ್ಟಡವಿಯಲ್ಲಿ ಶೆಡ್‌ ಹಾಕಿ ಅಡಗಿದ್ದ ಆರೋಪಿ ಸೆರೆ!


Team Udayavani, Jul 23, 2019, 11:47 AM IST

sm-tdy-2

ಹೊಸನಗರ: ಕಳೆದ ನಾಲ್ಕು ವರ್ಷದ ಹಿಂದೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ ಸೆಷನ್ಸ್‌ ನ್ಯಾಯಾಲಯದಲ್ಲಿ ಹಲ್ಲೆ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಜು.22ರೊಳಗೆ ಆರೋಪಿಯನ್ನು ಬಂಧಿಸಿ ಕೋರ್ಟ್‌ ಮುಂದೆ ಹಾಜರುಪಡಿಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ನಗರ ಠಾಣೆಯ ಪ್ರಭಾರ ಪಿಎಸ್‌ಐ ಸೂರಪ್ಪ ನೇತೃತ್ವದ ಪೊಲೀಸರ ತಂಡ ಬಂಡೋಡಿಯ ದಟ್ಟಡವಿಯಲ್ಲಿ ಅಡಗಿದ್ದ ಆರೋಪಿ ಬಂಡೋಡಿ ಮೋಹನ್‌ನನ್ನು ಬಂಧಿಸಿದೆ.

ಏನಿದು ಪ್ರಕರಣ? : ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಪಿ ಬಂಡೋಡಿ ಮೋಹನ್‌ ಮತ್ತು ಆತನ ಮಗ ಚಂದ್ರಶೇಖರ್‌, ಮೀಸೆ ನಾರಾಯಣಪ್ಪ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ 2015 ಜನವರಿ 1 ರಂದು ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ನಗರ ಠಾಣೆ ಪಿಎಸ್‌ಐ ಸತೀಶ್‌ ನೇತೃತ್ವದ ತಂಡ ಆರೋಪಿಗಳಿಬ್ಬರನ್ನು ಬಂಧಿಸಿ ಕಸ್ಟಡಿಗೆ ನೀಡಿತ್ತು. ಆದರೆ ತೀರ್ಥಹಳ್ಳಿ ತಾಲೂಕಿನ ಹಿಷಣ ಧರ್ಮೇಗೌಡ ಎಂಬುವವರನ್ನು ಪುಸಲಾಯಿಸಿ ‘ನಿಮ್ಮ ಮನೆಯಲ್ಲಿ ಸಾಯೋತನಕ ಕೆಲಸ ಮಾಡಿ ಬದುಕು ಸಾಗಿಸುತ್ತೇವೆ ಎಂದು ಮೋಹನ್‌ ನಂಬಿಸಿದ್ದ. ಇದನ್ನು ನಂಬಿದ ಧರ್ಮೇಗೌಡರು ಇವರಿಬ್ಬರನ್ನು ಜಾಮೀನಿನ ಮೇಲೆ ಬಿಡಿಸಿದ್ದರು.

ಮತ್ತೆ ಪರಾರಿ! ಜಾಮೀನಿನ ಮೇಲೆ ಬಿಡುಗಡೆಗೊಂಡ ಇವರನ್ನು ಧರ್ಮೇಗೌಡರು ಮನೆಗೆ ಕರೆದುಕೊಂಡು ಹೋಗಲು ಬಸ್‌ ಹತ್ತುವ ವೇಳೆ ಆರೋಪಿ ಮೋಹನ್‌ ಮತ್ತು ಚಂದ್ರಶೇಖರ್‌ ಪರಾರಿಯಾಗಿ ತಮ್ಮ ಸಹಾಯಕ್ಕೆ ಬಂದ ಧರ್ಮೇಗೌಡರಿಗೂ ಚಳ್ಳೆಹಣ್ಣು ತಿನ್ನಿಸಿದ್ದರು.

ಈ ಪ್ರಕಣದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಗೆ ಪದೇ ಪದೇ ನ್ಯಾಯಾಲಯದಿಂದ ನೋಟಿಸ್‌ ಬರುವಂತಾಗಿತ್ತು. ನಗರ ಠಾಣೆಯಲ್ಲಿ ಪಿಎಸ್‌ಐ ಆಗಿದ್ದ ಸತೀಶ ನೇತೃತ್ವದ ತಂಡ ಮತ್ತೆ ದಾಳಿ ನಡೆಸಿದ ವೇಳೆ ಆರೋಪಿ ಮೋಹನ್‌ ಕತ್ತಿ ಬೀಸಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ. ಆದರೆ ಆತನ ಮಗ ಚಂದ್ರಶೇಖರ್‌ ಸಿಕ್ಕಿಬಿದ್ದಿದ್ದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆತ ಕಳೆದ ಮೂರು ವರ್ಷದಿಂದ ಜೈಲಿನಲ್ಲಿದ್ದಾನೆ. ಆದರೆ ಆರೋಪಿ ಮೋಹನ್‌ ಮಾತ್ರ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಲೇ ಇದ್ದ.

ದಟ್ಟಡವಿಯಲ್ಲಿ ಶೆಡ್‌ ಹಾಕಿಕೊಂಡಿದ್ದ: ಜು.22ರೊಳಗೆ ಆರೋಪಿ ಮೋಹನ್‌ ಬಂಧನಕ್ಕೆ ಶಿವಮೊಗ್ಗ ಸೆಷನ್ಸ್‌ ನ್ಯಾಯಾಲಯ ಗಡುವು ವಿಧಿಸಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿದ ನಗರ ಠಾಣೆಯ ಪ್ರಭಾರ ಪಿಎಸ್‌ಐ ಸೂರಪ್ಪ, ಎಎಸ್‌ಐ ಶ್ರೀಪಾದ್‌, ಉದಯಕುಮಾರ್‌, ಗಂಗಪ್ಪ ಬಟೋಳಿ, ಗಂಗಪ್ಪ ತುಂಗಳ್‌, ರಮೇಶ ನೇತೃತ್ವದ ತಂಡ ಖಚಿತ ಮಾಹಿತಿ ಮೇಲೆ ರಾತ್ರಿ ವೇಳೆ ಬಂಡೋಡಿಯ ದಟ್ಟಡವಿಗೆ ನುಗ್ಗಿ ಶೋಧ ಕಾರ್ಯ ನಡೆಸಿದ್ದಾರೆ. ಕಾಡಿನ ಮಧ್ಯೆ ಶೆಡ್‌ವೊಂದು ಕಂಡು ಬಂದಿದ್ದು, ಅದರಲ್ಲಿದ್ದ ಆರೋಪಿ ಮೋಹನ್‌ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸೋಮವಾರ ಹಾಜರು ಪಡಿಸಿದ್ದಾರೆ.

ಸಾಹಸದ ಕಾರ್ಯಾಚರಣೆ!: ಕೊಡಚಾದ್ರಿ ತಪ್ಪಲಿನ ದಟ್ಟಡವಿ ಬಂಡೋಡಿಯಲ್ಲಿ ಕಾರ್ಯಾಚರಣೆ ನಡೆಸುವುದು ಅಷ್ಟು ಸುಲಭವಲ್ಲ. ವಿಪರೀತ ಮಳೆ ಬೀಳುವ ಈ ಪ್ರದೇಶದಲ್ಲಿ ಇಂಬಳದ ರಾಶಿ, ದುರ್ಗಮ ಹಾದಿ, ಒಂದು ಚೂರು ಎಚ್ಚರ ತಪ್ಪಿದರೂ ನೇರವಾಗಿ ಲಿಂಗನಮಕ್ಕಿ ಹಿನ್ನೀರಿಗೆ ಬೀಳುವ ಅಪಾಯವಿದ್ದರೂ ಸೂರಪ್ಪ ನೇತೃತ್ವದ ತಂಡ ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಹುಡುಕಾಡಿ ಬಂಧಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.