ಶಿವಮೊಗ್ಗ: ಬಂಧಿಸಲು ಹೋದ ಪೊಲೀಸ್ ಪೇದೆಗಳಿಗೆ ಚಾಕು ಇರಿದ ಆರೋಪಿ ಕಾಲಿಗೆ ಗುಂಡೇಟು
Team Udayavani, Jun 21, 2022, 1:18 PM IST
ಶಿವಮೊಗ್ಗ: ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸಲು ಹೋಗಿದ್ದ ಪೊಲೀಸ್ ಪೇದೆಗಳಿಬ್ಬರಿಗೆ ಚಾಕು ಇರಿದ ಘಟನೆ ಹಳೇ ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ.
ಲಷ್ಕರ್ ಮೊಹಲ್ಲಾ ನಿವಾಸಿ ಶಾಹಿದ್ ಖುರೇಶಿ(22) ಚಾಕು ಇರಿದ ಆರೋಪಿ. ದೊಡ್ಡಪೇಟೆ ಠಾಣೆ ಸಿಬ್ಬಂದಿಗಳಾದ ಗುರುನಾಯ್ಕ್ ಹಾಗೂ ರಮೇಶ್ ಹಲ್ಲೆಗೊಳಗಾದವರು.
ಶಾಹಿದ್ ಖುರೇಶಿ ರೌಡಿ ಶೀಟರ್ ಅಗಿದ್ದು, ಪ್ರಕರಣವೊಂದರಲ್ಲಿ ಈತನನ್ನು ಬಂಧಿಸಲು ತೆರಳಿದ್ದಾಗ ಪೊಲೀಸ್ ಪೇದೆ ಎದೆಗೆ ಚಾಕು ಇರಿದಿದ್ದಾನೆ. ಪೊಲೀಸ್ ಹಿಡಿಯಲು ಹೋದಾಗ ಮತ್ತೆ ಲಾಂಗು ಬೀಸಿ ಪರಾರಿ ಆಗಲು ಯತ್ನಿಸಿದ ಸಂದರ್ಭದಲ್ಲಿ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಸದ್ಯ ಗಾಯಾಳು ಆರೋಪಿ ಮೆಗ್ಗಾನ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಚಾಕು ಇರಿತಕ್ಕೊಳಗಾದ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಸಹ್ಯಾದ್ರಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.ಎಸ್ಪಿ ಬಿ.ಎಂ ಲಕ್ಷ್ಮೀಪ್ರಸಾದ್ ಅವರು ಭೇಟಿ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ