ಕೃಷಿ ಕಾಯ್ದೆ ವಾಪಸಾತಿಗೆ ರೈತಸಂಘ ಸಂಭ್ರಮ
Team Udayavani, Nov 20, 2021, 10:37 AM IST
ಸಾಗರ: ಕೇಂದ್ರ ಸರ್ಕಾರ ಮೂರು ಕೃಷಿಕಾಯ್ದೆಗಳನ್ನು ಹಿಂದಕ್ಕೆ ಪಡೆದಿರುವ ಹಿನ್ನೆಲೆಯಲ್ಲಿಶುಕ್ರವಾರ ರೈತ ಸಂಘದ ವತಿಯಿಂದಸಾಗರ ಹೋಟೆಲ್ ವೃತ್ತದಲ್ಲಿ ಪಟಾಕಿ ಸಿಡಿಸಿಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿಸಚಿವ ಕಾಗೋಡು ತಿಮ್ಮಪ್ಪ, ಕಳೆದ ಒಂದುವರ್ಷದಿಂದ ರೈತರು ದೆಹಲಿಯಲ್ಲಿ ನಡೆಸಿದ ನಿರಂತರ ಹೋರಾಟದ ಫಲವಾಗಿ ಕೇಂದ್ರಸರ್ಕಾರ ಮೂರು ಕರಾಳ ಕೃಷಿ ಕಾಯ್ದೆಯನ್ನುವಾಪಸ್ ಪಡೆದಿದೆ. ಕಾಯ್ದೆಯನ್ನು ಹಿಂದಕ್ಕೆಪಡೆದಿರುವುದನ್ನು ರೈತಸಂಘ ಸೇರಿದಂತೆ ನಾವೆಲ್ಲಾಸ್ವಾಗತಿಸುತ್ತಿದ್ದೇವೆ. ರೈತರು ಈತನಕ ಕೇಂದ್ರದಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಉತ್ತರಪ್ರದೇಶ ಸೇರಿದಂತೆ ಬೇರೆ ಬೇರೆ ಕಡೆ ಚುನಾವಣೆಇದೆ ಎನ್ನುವ ಹಿನ್ನೆಲೆಯಲ್ಲಿ ಹೆದರಿ ಕಾಯ್ದೆಹಿಂದಕ್ಕೆ ಪಡೆಯಲಾಗಿದೆ ಎನ್ನುವ ಅನುಮಾನದೇಶವಾಸಿಗಳಲ್ಲಿ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರಮೋದಿಯವರು ಶಾಶ್ವತವಾಗಿ ಇಂತಹ ಕಾಯ್ದೆಜಾರಿಗೆ ತರುವುದಿಲ್ಲ ಎಂದು ದೇಶದ ರೈತರಿಗೆ ವಾಗ್ಧಾನ ಮಾಡಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರುಮಾತನಾಡಿ, ರೈತರ ಹೋರಾಟಕ್ಕೆ ಮಣಿದುಕೇಂದ್ರ ಕಾಯ್ದೆಯನ್ನು ಹಿಂದಕ್ಕೆ ಪಡೆದಿದೆ. ಇದೇರೀತಿ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆತಂದಿರುವ ತಿದ್ದುಪಡಿಯನ್ನು ಸಹ ಹಿಂದಕ್ಕೆಪಡೆಯಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ಬಿ.ಆರ್. ಜಯಂತ್, ಸೂರಜ್,ಮಲ್ಲಿಕಾರ್ಜುನ ಹಕ್ರೆ, ರವಿ ಲಿಂಗನಮಕ್ಕಿ, ಡಾ|ರಾಜನಂದಿನಿ, ರಾಘವೇಂದ್ರ, ದಿನೇಶ್, ಕಿರಣ್ದೊಡ್ಮನೆ, ಮನೋಜ ಕುಗ್ವೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ