ಒತ್ತುವರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
Team Udayavani, Jul 3, 2020, 10:08 AM IST
ಸಾಗರ: ತಾಲೂಕಿನಾದ್ಯಂತ ಸಾವಿರಾರು ಎಕರೆ ಸರ್ಕಾರಿ ಭೂಮಿ ಹಾಗೂ ಗೋಮಾಳ ಒತ್ತುವರಿ ಯಾಗುತ್ತಿರುವ ಬಗ್ಗೆದೂರುಗಳಿವೆ. ಒತ್ತುವರಿದಾರರಿಗೆ ಬೆಂಬಲ ನೀಡಿದವರ ವಿರುದ್ಧ ಕೆಲಸದಿಂದ ವಜಾಗೊಳಿಸುವಂತಹ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಹಾಯಕ ಆಯುಕ್ತ ಡಾ| ನಾಗರಾಜ್ ಎಲ್. ಎಚ್ಚರಿಕೆ ನೀಡಿದರು.
ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಒತ್ತುವರಿದಾರರಿಗೆ ನಾನು ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ. ಒತ್ತುವರಿಯನ್ನು ತೆರವು ಮಾಡಲು ಸಾಧ್ಯವಾಗದಿದ್ದರೆ ಒತ್ತುವರಿದಾರರನ್ನು ಪತ್ತೆಹಚ್ಚಿ ತಹಶೀಲ್ದಾರ್ ಅಥವಾ ನನ್ನ ಗಮನಕ್ಕೆ ತರಬೇಕು. ಒತ್ತುವರಿ ತೆರವು ಸಂದರ್ಭದಲ್ಲಿ ಪಕ್ಷಭೇದ ಬೇಡ. ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವು ಮಾಡೋಣ. ಸರ್ಕಾರಿ ಜಮೀನು ಉಳಿಸಿಕೊಳ್ಳುವಲ್ಲಿ ನಮ್ಮೆಲ್ಲರ ಪಾತ್ರ ಪ್ರಮುಖವಾಗಿದೆ ಎಂದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಿ.ಪರಮೇಶ್ವರಪ್ಪ ಮಾತನಾಡಿ, ಕಂದಾಯ ಇಲಾಖೆ ನೌಕರರಿಗೆ ಅಧಿಕಾರಿಗಳಿಂದ ಪ್ರೋತ್ಸಾಹ ಸಿಗುತ್ತಿಲ್ಲ ಎನ್ನುವ ಮಾತು ಕೇಳಿಬರುತ್ತಿದೆ ಎಂದರು. ತಹಶೀಲ್ದಾರ್ ಚಂದ್ರಶೇಖರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್