ರೈತರಿಗೆ ಮತ್ತೆ ಬಂದೂಕಿನಾಟ!


Team Udayavani, Oct 15, 2018, 4:00 PM IST

shiv.jpg

ಹೊಸನಗರ: ರಾಜ್ಯದಲ್ಲಿ ಮತ್ತೆ ಚುನಾವಣೆ ಬಂದಿದೆ. ಈ ಚುನಾವಣೆಯೇ ಸುಖಾಸುಮ್ಮನೆ ದುಂದುವೆಚ್ಚ ಎಂಬ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಗ್ರಾಮೀಣ ಭಾಗದ ಕೃಷಿಕರು, ಮಲೆನಾಡಿನ ಒಂಟಿಮನೆ ಹೊಂದಿರುವ ಕುಟುಂಬಗಳು ಪರದಾಡುವಂತಾಗಿದೆ. ರೈತರು ತಮ್ಮಲ್ಲಿರುವ ಪರವಾನಗಿ ಹೊಂದಿರುವ ಬಂದೂಕುಗಳನ್ನು ಸ್ಥಳೀಯ ಠಾಣೆಯಲ್ಲಿ ಠೇವಣಿ ಮಾಡುವ ಬಗ್ಗೆ ಜಿಲ್ಲಾಡಳಿತ ಸೂಚಿಸಿರುವುದರಿಂದ ರೈತರು ಪರದಾಡುವಂತಾಗಿದೆ. ಚುನಾವಣೆ ಹೊತ್ತಿನಲ್ಲಿ ಇದು ಮಾಮೂಲಿ ಎಂದೆನಿಸಿದರೂ ಪ್ರಸಕ್ತ ಸನ್ನಿವೇಶದಲ್ಲಿ ತಮ್ಮಲ್ಲಿರುವ ಬಂದೂಕು ಒಪ್ಪಿಸಲು ಮಲೆನಾಡಿಗರು ಮೀನಮೇಷ ಎಣಿಸುವಂತಾಗಿದೆ. ಒಮ್ಮೆ ಬರ ಮತ್ತೂಮ್ಮೆ ಅತಿವೃಷ್ಟಿಯಾದರೆ ಇದೀಗ ಕಾಡುಪ್ರಾಣಿಗಳ ಕಾಟದಿಂದ ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ. ಈ ನಡುವೆ ತಮ್ಮಲ್ಲಿದ್ದ ಬಂದೂಕಿನಿಂದ ಹೆದರಿಸಿ ಬೆದರಿಸಿ ಕಷ್ಟಪಟ್ಟು ತಮ್ಮ ಬೆಳೆ ರಕ್ಷಿಸುಕೊಳ್ಳುತ್ತಿದ್ದ ಮಲೆನಾಡ ರೈತರ ಪಾಲಿಗೆ ಬಂದೂಕನ್ನು ಠಾಣೆಗಳಿಗೆ ಒಪ್ಪಿಸುವುದು ಗಾಯದ ಮೇಲೆ ಉಪ್ಪು ಸವರಿದಂತಾಗಿದೆ.
 
ಒಂಟಿಮನೆ ಪಚೀತಿ!: ಕೃಷಿ ಕುಟುಂಬಗಳ ಪರದಾಟ ಒಂದಡೆಯಾದರೆ ಇನ್ನು ಕಾಡು ಪ್ರದೇಶದಲ್ಲಿ ಹೆಚ್ಚಿರುವ ಒಂಟಿಮನೆ ಕುಟುಂಬಗಳು ತಮ್ಮ ರಕ್ಷಣೆಗಾಗಿ ಪರವಾನಗಿ ಬಂದೂಕು ಪಡೆದುಕೊಂಡಿವೆ. ಒಂದು ಕಡೆ ತಾವು ಭಿತ್ತನೆ ಮಾಡಿದ ಭತ್ತ, ಜೋಳ, ಮೆಣಸು, ಏಲಕ್ಕಿ, ತೆಂಗು, ಅಡಕೆ ಬೆಳೆಯನ್ನು ಕಾಡುಕೋಣ, ಹಂದಿ, ಮಂಗಗಳಿಂದ ರಕ್ಷಿಸಕೊಳ್ಳಬೇಕು. ಮತ್ತೂಂದಡೆ ನಿರ್ಜನ ಪ್ರದೇಶದಲ್ಲಿರುವ ಒಂಟಿಮನೆ ರಕ್ಷಣೆಗಾಗಿ ಪಡೆದ ಬಂದೂಕನ್ನು ಸ್ಥಳೀಯ ಠಾಣೆ ಸುಪರ್ದಿಗೆ ನೀಡುವ ಅಸಹಾಯಕ ಸ್ಥಿತಿ. ಇದು ಇವರ ಪಾಲಿಗೆ ನುಂಗಲಾರದ ಬಿಸಿತುಪ್ಪವಾಗಿದೆ.

ಪದೇ ಪದೇ ಚುನಾವಣೆ: ಮೊನ್ನೆ ಮೊನ್ನೆಯಷ್ಟೆ ನಡೆದ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಲೆನಾಡ ರೈತರು ತಮ್ಮಲ್ಲಿದ್ದ ಬಂದೂಕನ್ನು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಠೇವಣಿ ಮಾಡಿ ಒಂದೂವರೆ ತಿಂಗಳಿಗೆ ವಾಪಸ್‌ ಪಡೆದಿದ್ದರು. ಇದೀಗ ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ಮತ್ತೆ ಬಂದೂಕು ಹಿಡಿದು ಠಾಣೆಗೆ ಬರುವಂತಾಗಿದೆ. 

ಈ ಚುನಾವಣೆ ಮುಗಿಯುವ ಹೊತ್ತಿಗೆ ಲೋಕಸಭಾ ಚುನಾವಣೆ ನಡೆಯಲಿದ್ದು ಮತ್ತೆ ಬಂದೂಕು ಒಪ್ಪಿಸಬೇಕಾದ ಅನಿವಾರ್ಯತೆ. ಹೀಗಾದರೆ ನಮ್ಮ ಬದುಕು ಹೇಗೆ ಸ್ವಾಮಿ. ಯಾರಲ್ಲಿ ನಮ್ಮ ಕಷ್ಟ ಹೇಳಿಕೊಳ್ಳೋದು ಎಂದು ಮಲೆನಾಡಿಗರು ಅಲವತ್ತುಕೊಳ್ಳುವಂತಾಗಿದೆ.

ಹೊಸನಗರದಲ್ಲಿ 700 ಬಂದೂಕುಗಳು! ಮಲೆನಾಡ ನಡುಮನೆಯಂತಿರುವ ಹೊಸನಗರ ತಾಲೂಕಿನ ಮೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸುಮಾರು 700 ಬಂದೂಕುಗಳಿವೆ. ಹೊಸನಗರ ಠಾಣೆಯಲ್ಲಿ 192, ರಿಪ್ಪನ್‌ಪೇಟೆಯಲ್ಲಿ 313 ಮತ್ತು ನಗರ ಠಾಣೆಯಲ್ಲಿ 197 ಬಂದೂಕುಗಳನ್ನು ರೈತರು ಹೊಂದಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ತಮ್ಮಲ್ಲಿರುವ ಬಂದೂಕುಗಳನ್ನು ಠಾಣೆಯಲ್ಲಿ ಠೇವಣಿ ಮಾಡುತ್ತಿದ್ದಾರೆ.

„ಕುಮುದಾ ಬಿದನೂರು

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.