Agumbe ಘಾಟಿಯಲ್ಲಿ ಅಪಘಾತ: ಯುವಕ ಮೃತ್ಯು, ಯುವತಿ ಗಂಭೀರ
Team Udayavani, Jun 18, 2023, 7:36 PM IST
ಹೆಬ್ರಿ/ತೀರ್ಥಹಳ್ಳಿ/ಬ್ರಹ್ಮಾವರ: ಬೈಕ್ ಮತ್ತು ಬಸ್ ಮಧ್ಯೆ ಮುಖಾಮುಖೀ ಢಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟು ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಸಂಭವಿಸಿದೆ.
ಉಡುಪಿ ಜಿಲ್ಲೆ ಬಾರಕೂರು ಮೂಲದ ಶಶಾಂಕ್ (28) ಮೃತಪಟ್ಟ ಯುವಕ. ನಿರ್ಮಿತಾ ಎಂಬಾಕೆಗೆ ಗಂಭೀರ ಗಾಯವಾಗಿದೆ. ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಿವಿಲ್ ಎಂಜಿನಿಯರ್
ಬಾರಕೂರು ಹೊಸಾಳದ ಶ್ರೀನಿವಾಸ ಮತ್ತು ಕುಸುಮಾ ದಂಪತಿಯ ಮೂವರು ಮಕ್ಕಳಲ್ಲಿ ಶಶಾಂಕ್ ಹಿರಿಯವರು. ಸಿವಿಲ್ ಎಂಜಿನಿಯರಿಂಗ್ ಮುಗಿಸಿ ಕಂಟ್ರಾಕ್ಟರ್ ಜತೆಗೆ ಕೆಲಸ ಮಾಡುತ್ತಿದ್ದರು. ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ಒಂದೇ ಕುಟುಂಬದ
6 ಮಂದಿ ತೆರಳಿದ್ದರು
ಶಶಾಂಕ್ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್ನಲ್ಲಿ ರವಿವಾರ ಬೆಳಗ್ಗೆ ಹೊರಟಿದ್ದರು. ಆಗುಂಬೆಯ ಸೂರ್ಯಾಸ್ತಮಾನ ವೀಕ್ಷಣ ಸ್ಥಳಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಘಟನೆ ನಡೆದಿದೆ. ಶಶಾಂಕ್ ಅವರ ಜತೆ ಹಿಂಬದಿ ಸವಾರರಾಗಿ ಅಕ್ಕನ ಮಗಳು ನಿರ್ಮಿತಾ ಕುಳಿತಿದ್ದರು. ಅವರು ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರು ಎಂದು ತಿಳಿದು ಬಂದಿದೆ.
1 ವಾರದಲ್ಲಿ 3 ಅಪಘಾತ 4 ಸಾವು
ಹಿಂದಿನ ರವಿವಾರ ಇದೇ ಮಾರ್ಗದ ಜಕ್ಕನ್ಮಕ್ಕಿ ಎಂಬಲ್ಲಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದರು. ಮತ್ತೆ ಶನಿವಾರ ಇದೇ ಜಾಗದಲ್ಲಿ ಅಪಘಾತ ನಡೆದು ಒಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೆ ಒಬ್ಬರು ಮೃತಪಟ್ಟಿದ್ದು, ಜನರಲ್ಲಿ ಆತಂಕ ಮೂಡಿದೆ. ಆಗುಂಬೆಯಿಂದ ಹೆಬ್ರಿ ತನಕವೂ ತಿರುವುಗಳು ಜಾಸ್ತಿ ಇದ್ದು ವೇಗವಾಗಿ ಬರುವ ವಾಹನದಿಂದ ಅಪಘಾತಗಳು ಸಂಭವಿಸುತ್ತದೆ. ಈ ಪ್ರದೇಶದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸುವುದರ ಜತೆಗೆ ಅಲ್ಲಲ್ಲಿ ಅಪಘಾತದ ಸೂಚನ ಫಲಕಗಳನ್ನು ಅಳವಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಸರಿಯಾದ ತುರ್ತು ಚಿಕಿತ್ಸೆ ಸಿಗುತ್ತಿಲ್ಲ
ಆಗುಂಬೆಯಿಂದ ಹೆಬ್ರಿಯ ತನಕ ನಡುವಿನಲ್ಲಿ ನಿರಂತರವಾಗಿ ಅಪಘಾತ ಸಂಭವಿಸುತ್ತಿ¤ದೆ. ಆದರೆ ಹೆಬ್ರಿ ಪರಿಸರದಲ್ಲಿ ತುರ್ತು ಚಿಕಿತ್ಸೆಗೆ ಸರಕಾರಿಯಾಗಲಿ ಖಾಸಗಿಯಾಗಲಿ ಆಸ್ಪತ್ರೆಗಳು ಇಲ್ಲದಿರುವುದು ಸಾವು ನೋವು ಸಂಭವಿಸಲು ಕಾರಣವಾಗಿದೆ. ಈ ಬಗ್ಗೆ ಭಾಗದ ಜನಪ್ರತಿನಿಧಿಗಳು ಹಾಗೂ ಸರಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಹೆಬ್ರಿಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗ ಬೇಕು ಎಂದು ಸ್ಥಳೀಯರಾದ ವೆಂಕಟೇಶ್ ಸೋಮೇಶ್ವರ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ