BJP ಭದ್ರ ಕೋಟೆಗಳೆಲ್ಲ ಈಗ ಬದಲಾಗುತ್ತವೆ: ಶಿವರಾಜ್ಕುಮಾರ್
ಪತ್ನಿ ಗೀತಾ ರೋಚಕ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ
Team Udayavani, Mar 11, 2024, 9:22 PM IST
ದಾವಣಗೆರೆ: ದಾವಣಗೆರೆ, ಶಿವಮೊಗ್ಗ ಬಿಜೆಪಿಯ ಭದ್ರಕೋಟೆ ಎನ್ನುತ್ತಾರೆ. ಈಗ ಅದೆಲ್ಲ ಯಾವುದೂ ಇಲ್ಲ. ಭದ್ರ ಕೋಟೆಗಳಿದ್ದರೂ ಬದಲಾಗುತ್ತವೆ ಎನ್ನುವ ಮೂಲಕ ಚಿತ್ರನಟ ಡಾ| ಶಿವರಾಜ್ಕುಮಾರ್ ಪರೋಕ್ಷವಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪತ್ನಿ ಗೀತಾ ಶಿವರಾಜ್ಕುಮಾರ್ ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗೀತಾ ಶಿವರಾಜಕುಮಾರ್ ಅವರ ಚುನಾವಣೆ ಸಿದ್ಧತೆ ನಡೆದಿದೆ. ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಕುಟುಂಬಗಳ ಮಧ್ಯೆ ಚುನಾವಣೆ ನಡೆಯುತ್ತಿದೆ. ತಮ್ಮ ಪತ್ನಿ ಗೀತಾ ಶಿವರಾಜಕುಮಾರ್ ರೋಚಕ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವೂ ಇಲ್ಲ ಎಂದರು.
ಶಿವಮೊಗ್ಗದಲ್ಲೇ ಜನಿಸಿರುವ ಗೀತಾಗೆ ತವರು ಜಿಲ್ಲೆ. ಹಾಗಾಗಿ ಶಿವಮೊಗ್ಗಕ್ಕೆ ಹೋಗಿ, ಬರುತ್ತಿರುತ್ತಾರೆ. ಅವರ ತಂದೆಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದವರು. ಹಾಗಾಗಿ ಬಗ್ಗೆ ಸಾಕಷ್ಟು ಮಾಹಿತಿ, ಸಮಸ್ಯೆಗಳ ಬಗ್ಗೆಯೂ ಗೀತಾರಿಗೆ ಚೆನ್ನಾಗಿಯೇ ಗೊತ್ತಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾರಿಗೆ ಕ್ಷೇತ್ರದ ಅಭಿಮಾನಿ ದೇವರುಗಳ ಆಶೀರ್ವಾದ ಇರಲಿ. ಗೀತಾ ಶಿವರಾಜ್ಕುಮಾರ ರಾಜಕಾರಣಿಗಳ ಕುಟುಂಬದಿಂದ ಬಂದವರು. ನಮ್ಮ ಕುಟುಂಬಕ್ಕೂ ಸಹ ರಾಜಕಾರಣ ಹೊರತಾ ಗಿಲ್ಲ. ನಮ್ಮ ತಂದೆಯವರಿದ್ದಾಗ ರಾಜಕಾರಣಿಗಳು ಮನೆಗೆ ಬರುತ್ತಿದ್ದರು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ