Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


Team Udayavani, Mar 28, 2024, 3:49 PM IST

11-

ತೀರ್ಥಹಳ್ಳಿ: ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದಿಂದ 28ಕ್ಕೆ 28 ಕ್ಷೇತ್ರ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಜಿಲ್ಲೆ, ತಾಲೂಕು ಮತ್ತು ಬೂತ್ ಮಟ್ಟದಲ್ಲಿ ಎಲ್ಲಾ ಕಾರ್ಯಕರ್ತರು ಅತ್ಯಂತ ವಿಶ್ವಾಸದಿಂದ ಚುನಾವಣೆ ಎದುರಿಸಲು ಸಜ್ಜಾಗಿದ್ದೇವೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಪಟ್ಟಣದ ನೂತನ ಬಿಜೆಪಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಜಗತ್ತಿನಲ್ಲಿ 5 ನೇ ಆರ್ಥಿಕ ಶಕ್ತಿಯಾಗಿ ಭಾರತ ದೇಶ ಕಂಡಿದೆ. ಜಗತ್ತಿನ 3 ನೇ ಬಲಿಷ್ಠ ಸೇನೆಯನ್ನು ನಾವು ಕಟ್ಟಿದ್ದೇವೆ. ಅಭಿವೃದ್ಧಿಯ ವಿಚಾರದಲ್ಲಿ ರೈಲ್ವೆ, ವಿಮಾನ, ಕೋವಿಡ್ ವೇಳೆ 150 ಕೋಟಿ ಜನರಿಗೆ ವ್ಯಾಕ್ಸಿನ್ ನೀಡಿರುವುದು, ಬಡವರ ಪರವಾದ ಯೋಜನೆ, ಹೀಗೆ ಅಭಿವೃದ್ಧಿಯಲ್ಲಿ ಒಳ್ಳೊಳ್ಳೆ ಕೆಲಸ ಮಾಡಿದ್ದೇವೆ. ಇದರಿಂದ ಈ ಬಾರಿ 28 ಕ್ಕೆ 28 ಕ್ಷೇತ್ರ ಗೆಲ್ಲಿಸುತ್ತೇವೆ ಎಂದರು.

ಕರ್ನಾಟಕ ರಾಜ್ಯದಲ್ಲಿ ಕಳೆದ ಬಾರಿ ಜನರಿಗೆ ಆಮಿಷ ಒಡ್ಡಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು. ಅದರಲ್ಲಿ ಸಾಧನೆ ಏನಿಲ್ಲ, ಬಿಜೆಪಿ ವಿರೋಧ ಪಕ್ಷದಲ್ಲಿ ಇದೆ. ಅಭಿವೃದ್ಧಿಯನ್ನು ಬಲಿ ಕೊಟ್ಟು ಅಧಿಕಾರದಲ್ಲಿ ಕಾಂಗ್ರೆಸ್ ಕೂತಿದೆ, ಕಳೆದ ಒಂಬತ್ತು ತಿಂಗಳಲ್ಲಿ ಒಂಬತ್ತು ಪೈಸೆಯೂ ಕೂಡ ಬಂದಿಲ್ಲ, ಕರ್ನಾಟಕದಲ್ಲಿ ಅಂಧ ದರ್ಬಾರ್ ನಡೆಯುತ್ತಿದೆ ಎಂದು ಹೇಳಿದರು.

ಜಾತಿ ಜಾತಿ ಒಡೆದು ಕುತಂತ್ರ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ. ಆರ್ಥಿಕ ಸ್ಥಿತಿ ದಿವಾಳಿ ಎದ್ದು ಹೋಗಿದೆ. ಕರ್ನಾಟದಲ್ಲಿ ಬರವಿದ್ದು, ನೀರು ಕೊಡಲು ಆಗದೇ ಕೇಂದ್ರ ಸರಕಾರದ ವಿರುದ್ದ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಬಾರಿ ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರವನ್ನು ಗೆಲ್ಲುತ್ತೇವೆ. ಕಳೆದ ಬಾರಿ 25 + 1 ಕ್ಷೇತ್ರವನ್ನು ಗೆದ್ದಿದ್ದೆವು. ಈ ಬಾರಿ 28 ಕ್ಷೇತ್ರವನ್ನು ಗೆಲ್ಲಿಸಿ ಮೋದಿ ಕೈ ಬಲಪಡಿಸೋಕೆ ತಯಾರಾಗಿದ್ದೇವೆ. ಜಿಲ್ಲೆಗೆ ಸಾವಿರಾರು ಕೋಟಿ ತಂದು ಬಿ ವೈ ರಾಘವೇಂದ್ರ ಅಭಿವೃದ್ಧಿ ಮಾಡಿದ್ದಾರೆ.  ಕೇಂದ್ರದಿಂದ ಅಷ್ಟೊಂದು ಹಣ ತರಬಹುದು ಎಂಬ ಕಲ್ಪನೆ ಕೂಡ ಇರಲಿಲ್ಲ, ರೈಲ್ವೆ, ವಿಮಾನ, ರಸ್ತೆ ಸೇರಿ ಎಲ್ಲಾ ಸಮುದಾಯದವರಿಗೂ ಸಮುದಾಯ ಭವನ ಕಟ್ಟಿಕೊಡುವ ಕೆಲಸ ಮಾಡಿ ಕೊಟ್ಟಿದ್ದಾರೆ. ಕಳೆದ ಬಾರಿಗಿಂತ ಎರಡು ಪಟ್ಟು ಹೆಚ್ಚಿನ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಕುಣಾಜೆ ಕಿರಣ್ ಪ್ರಭಾಕರ್ ಮಾತನಾಡಿ, ರಾಷ್ಟ್ರದ ಪ್ರಧಾನ ಮಂತ್ರಿ ಹಾಗೂ ಮಾಜಿ ಪ್ರಧಾನ ಮಂತ್ರಿ ಒಟ್ಟಿಗೆ ತೆಗೆದುಕೊಂಡಿರುವ ನಿರ್ಧಾರವಾಗಿದೆ. ದೇಶ ಮತ್ತು ಒಳ್ಳೆಯ ನಾಯಕತ್ವವನ್ನು ನೋಡಿ ಈ ನಿರ್ಧಾರ ಮಾಡಲಾಗಿದೆ. ದೇಶಕ್ಕೆ ಬಿಜೆಪಿ ಒಳ್ಳೆಯ ಕೊಡುಗೆ ನೀಡಿದೆ. ದೇಶದಲ್ಲಿ ಒಳ್ಳೆಯ ಕೆಲಸ ಆಗಬೇಕು ಎಂದರೆ ಒಳ್ಳೆಯ ನಾಯಕನಿಂದ ಮಾತ್ರ, ದೇಶದ ದೃಷ್ಟಿಯಿಂದ ನಾವೆಲ್ಲರೂ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ, ಹಾಗೂ ತೀರ್ಥಹಳ್ಳಿಯಲ್ಲಿ ನಮ್ಮದೇ ಮತ ಬ್ಯಾಂಕ್ ಇದೆ ಅದರಿಂದ ನಾವು ಈ ಬಾರಿ ಬಿ ವೈ ರಾಘವೇಂದ್ರ ಅವರನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.

ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿ ನಮ್ಮ ಪಕ್ಷದವರು ಅಲ್ಲದ ಕೆಲವರು ಗೋ ಬ್ಯಾಕ್ ಎಂದರು. ಶೋಭಾ ಕರಂದ್ಲಾಜೆ ಅವರನ್ನು ನಾವು ಬೇಡ ಎಂದಿದ್ದಲ್ಲ. ಇದು ಹೈಕಮಾಂಡ್ ನಿರ್ಧಾರ. ನನಗೆ ವಿಧಾಸಭಾ ಚುನಾವಣೆಯಲ್ಲಿ ಅನ್ಯಾಯವಾಗಿಲ್ಲ. ನನಗೆ ಸೀಟ್ ಸಿಕ್ಕಾಗ ಸಹ ಬೇರೆಯವರಿಗೆ ಹಾಗೆ ಅನಿಸಿರುತ್ತದೆ. ಆದರೆ ನನಗೆ ಯಾವುದೇ ರೀತಿ ಬಿಜೆಪಿ ಪಕ್ಷದಿಂದ ಅನ್ಯಾಯವಾಗಿಲ್ಲ. ನಿಷ್ಠಾವಂತ ಕಾರ್ಯಕರ್ತನಿಗೆ ಬ್ರಹ್ಮನಿಗಿಂತ ಪಕ್ಷವೇ ಮುಖ್ಯ ಎಂದರು.

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.