ಜಾತ್ರೆಯಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ : ಬೇಳೂರು
ಕಡ್ಲೆಹಂಕ್ಲು ಮಾರಿಕಾಂಬಾ ದೇವಾಲಯಕ್ಕೆ ಆಕರ್ಷಕ ದೀಪಾಲಂಕಾರ
Team Udayavani, Mar 14, 2020, 4:05 PM IST
ಆನಂದಪುರ: ಯಾವುದೇ ರಾಜಕೀಯ ಶಕ್ತಿಗಳು ಜಾತ್ರಾ ಮಹೋತ್ಸವದಲ್ಲಿ ಹಸ್ತಕ್ಷೇಪ ಮಾಡಬಾರದು. ಇದು ಸಾರ್ವಜನಿಕರ ಗ್ರಾಮೀಣ ಹಬ್ಬ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ನುಡಿದರು.
ಸ್ಥಳೀಯ ಶ್ರೀ ಕಡ್ಲೆಹಂಕ್ಲು ಮಾರಿಕಾಂಬಾ ದೇವಿ ಜಾತ್ರೆಯ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಈ ಮಾರಿಕಾಂಬಾ ದೇವಿ ಜಾತ್ರೆ ಸಾರ್ವಜನಿಕರ ಸಹಕಾರದಿಂದ ಪಕ್ಷಾತೀತವಾಗಿ ಆಚರಿಸಲಾಗುತ್ತದೆ. ಇಂತಹ ಹಬ್ಬಗಳಲ್ಲಿ ಯಾವುದೆ ಪಕ್ಷದವರು ಹಸ್ತಕ್ಷೇಪ ಮಾಡಬಾರದು. ಇದು ಊರ ಹಬ್ಬ. ಗ್ರಾಮೀಣ ಭಾಗದ ಜನರು ತಾಯಿ ಮಾರಿಕಾಂಬೆಯ ಜಾತ್ರೆಯನ್ನು 3 ವರ್ಷಕ್ಕೆ ಒಮ್ಮೆ ವೈಭವದಿಂದ ಆಚರಿಸುತ್ತಾರೆ.
ಜಾತ್ರೆಗೆ ತನ್ನದೇ ಆದ ಆಚಾರ, ವಿಚಾರ, ಸಂಪ್ರದಾಯ ಮತ್ತು ಸಂಸ್ಕೃತಿ ಇದೆ. ಅದೇ ರೀತಿಯಲ್ಲಿ ನಾವು ಆಚರಿಸಬೇಕು ಎಂದರು. ಜಿಪಂ ಸದಸ್ಯೆ ಅನಿತಾಕುಮಾರಿ ಮಾತನಾಡಿ, ನಾವು ದೇವಿಯ ಆರಾಧಕರು. ದೇವರಲ್ಲಿ ಭಕ್ತಿ ಮತ್ತು ಆತ್ಮಶುದ್ಧಿಯಲ್ಲಿ ನಮ್ಮ ಕಾರ್ಯಗಳು ಆಗುವಂತೆ ಕರುಣಿಸು ತಾಯಿ ಎನ್ನುತ್ತೇವೆ. ಹಾಗೆ ನಾವು ಸಾರ್ವಜನಿಕರ ಕೆಲಸ ದೇವರ ಕಾಯಕವೆಂದು ಅರಿತು ಮಾಡಬೇಕು.
ಮುಂದಿನ ದಿನಗಳಲ್ಲಿ ಶ್ರೀ ಕಡ್ಲೆಹಂಕ್ಲು ಮಾರಿಕಾಂಬಾ ದೇವಾಲಯದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಹಾಗೆಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ನಾಡ ಕಚೇರಿಯ ಉಪ ತಹಶೀಲ್ದಾರ್ ಕಲ್ಲಪ್ಪ ಮೆಣಸಿನ್ಹಾಳ್, ತಾಪಂ ಸದಸ್ಯೆ ಆನಂದಿ ಲಿಂಗರಾಜ್, ಬಸವರಾಜ್, ಚಂದ್ರಶೇಖರ್, ವೆಂಕಟೇಶ್, ಸುಂದರೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ