Anandapura; ಕಾರು-ಬೈಕ್ ಢಿಕ್ಕಿ: ಓರ್ವ ಸಾವು, ಇನ್ನೋರ್ವ ಗಂಭೀರ
ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಅವಘಡ
Team Udayavani, Feb 26, 2024, 9:24 PM IST
ಶಿವಮೊಗ್ಗ : ಸಾಗರದ ಆನಂದಪುರದ ಗೌತಮಪುರ ಬಳಿ ಸೋಮವಾರ ಸಂಜೆ ಕಾರು ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ಸವಾರ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಅವಘಡ ನಡೆದಿದೆ.
ಶಿಕಾರಿಪುರದ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು,ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದು, ಮತ್ತೊಬ್ಬ ಬೈಕ್ ಸವಾರ ಪ್ರತಾಪ್ (26) ನ ಎರಡು ಕಾಲುಗಳು ತುಂಡಾಗಿವೆ ಎಂದು ವರದಿಯಾಗಿದೆ.ತೀವ್ರ ಗಾಯಗೊಂಡ ಪ್ರತಾಪ್ ಸ್ಥಿತಿ ಗಂಭೀರವಾಗಿದೆ.
ಕಾರು ಆನಂದಪುರದಿಂದ ಶಿಕಾರಿಪುರ ಕಡೆಗೆ ಸಾಗುತ್ತಿದ್ದು, ಬೈಕ್ ನಲ್ಲಿ ಸ್ನೇಹಿತರು ಶಿಕಾರಿಪುರದಿಂದ ಆನಂದಪುರದೆಡೆಗೆ ಬರುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರರು ಆನಂದಪುರದ ಸಂತೆ ಮೈದಾನ ಬಳಿಯ ನಿವಾಸಿಗಳು ಎಂದು ತಿಳಿದು ಬಂದಿದೆ. ಆನಂದಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್