ಮಂಗನ ಕಾಯಿಲೆಗೆ ಮತ್ತೋರ್ವ ಬಲಿ
Team Udayavani, Jan 4, 2019, 1:05 AM IST
ಸಾಗರ: ಮಂಗನ ಕಾಯಿಲೆಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದು, ತಾಲೂಕಿನ ಅರಳಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಈ ಕಾಯಿಲೆ ಗಂಭೀರ ಸ್ವರೂಪ ತಾಳುತ್ತಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮರಬಿಡಿ ಗ್ರಾಮದ ಲೋಕರಾಜ್ ಜೈನ್ (28) ಬುಧವಾರ ರಾತ್ರಿ ಮೃತಪಟ್ಟಿದ್ದು, ಕಳೆದ ವಾರದಲ್ಲಿ ಒಟ್ಟೂ ನಾಲ್ಕು ಮಂದಿ ಈ ಕಾಯಲೆಗೆ ಮೃತರಾಗಿದ್ದಾರೆ.
ವಾರದ ಹಿಂದೆ ಜ್ವರ ಕಾಣಿಸಿಕೊಂಡಾಗ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ನಿಯಂತ್ರಣಕ್ಕೆ ಬಾರದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಲೋಕರಾಜ್ ಬುಧವಾರ ಅಸುನೀಗಿದರು.
ಅರಳಗೋಡು ಗ್ರಾಪಂ ವ್ಯಾಪ್ತಿ ಮಂಗನ ಕಾಯಿಲೆಗೆ ಮಂಡವಳ್ಳಿಯ ಪಾರ್ಶ್ವನಾಥ ಜೈನ್, ವಾಟೆಮಕ್ಕಿ ಕೃಷ್ಣಪ್ಪ, ಕಂಚಿಕೈ ಮಂಜುನಾಥ್ ಮತ್ತು ಮರಬಿಡಿ ಗ್ರಾಮದ ಲೋಕರಾಜ್ ಬಲಿಯಾಗಿದ್ದಾರೆ. ಇಲ್ಲಿಯ ಕಾಡುಗಳಲ್ಲಿ ಮೃತ ಮಂಗಗಳು ಪತ್ತೆಯಾಗುತ್ತಲೇ ಇದ್ದು ಇನ್ನೂ ಹಲವು ಮಂದಿಗೆ ಸೋಂಕು ತಗುಲಿರುವ ಶಂಕೆ ಇದೆ. ಕಾಲೇಜು ವಿದ್ಯಾರ್ಥಿನಿ ಜೀಗಳದ ಶ್ವೇತಾ ಜೈನ್ ಗೆ ಕೂಡ ವೈರಸ್ ತಗುಲಿರುವ ಶಂಕೆಯಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅಲ್ಲದೆ ಇದೇ ಸೋಂಕಿನಿಂದ ಮೃತಪಟ್ಟ ಮಂಜುನಾಥ್ ಅವರ ತಾಯಿ ವೀರಮ್ಮ ಅವರ ದೇಹ ಸ್ಥಿತಿ ಕೂಡ ಗಂಭೀರವಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗದಲ್ಲಿ ಒಟ್ಟು ಆರು ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ವರು ಗುಣಮುಖರಾಗುತ್ತಿದ್ದಾರೆ ಎಂದು ಕೆಎಫ್ಡಿ ಚಿಕಿತ್ಸಾ ವಿಭಾಗದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ