ಎಪಿಎಂಸಿ ದಿನಸಿ ವರ್ತಕರ ಪ್ರತಿಭಟನೆ


Team Udayavani, Feb 18, 2020, 1:03 PM IST

sm-tdy-1

ಶಿವಮೊಗ್ಗ: ನಗರದ ಎಪಿಎಂಸಿ ಪ್ರಾಂಗಣದಲ್ಲಿ ದಿನಸಿ ವ್ಯವಹಾರ ಮಾಡಲು ಇರುವ ತೊಂದರೆ ನಿವಾರಿಸುವಂತೆ ಒತ್ತಾಯಿಸಿ ಸೋಮವಾರ ದಿನಸಿ ವರ್ತಕರ ಸಂಘದ ವತಿಯಿಂದ ಕೃಷಿ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.

ನಾವುಗಳು ಸುಮಾರು 40ರಿಂದ 50 ವರ್ಷಗಳಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ವ್ಯವಹಾರ ಮಾಡುತ್ತಿದ್ದೇವೆ. ಹಿಂದೆ ಬಿಎಚ್‌ ರಸ್ತೆಯಲ್ಲಿ ನಮ್ಮ ವ್ಯವಹಾರ ನಡೆಸುತ್ತಿದ್ದೆವು. ಅಂದಿನ ಕಾರ್ಯದರ್ಶಿಗಳು ನಮ್ಮನ್ನು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಬೇಕು ಎಂದು ಕರೆ ತಂದಿದ್ದರು ಎಂದು ತಿಳಿಸಿದರು.

ಅಲ್ಲಿಂದ ಇಲ್ಲಿಯವರೆಗೂ ನಾವು ಹಿಂದೆ ಸೂಚಿಸಿದ ಕೃಷಿ ಉತ್ಪನ್ನಗಳ ಜತೆಗೆ ಅದಕ್ಕೆ ಪೂರಕ ವಸ್ತುಗಳನ್ನು ಸಹ ಮಾರಾಟ ಮಾಡುತ್ತಿದ್ದೇವೆ. ಇಲ್ಲಿಯ ತನಕ ದಿನಸಿ ವ್ಯವಹಾರ ಹೊರತುಪಡಿಸಿ ಬೇರೆ ಯಾವುದೇ ವ್ಯವಹಾರ ಮಾಡುತ್ತಿಲ್ಲ ಎಂದು ತಿಳಿಸಿದರು.

ಆದರೆ ಕೆಲವು ವ್ಯಕ್ತಿಗಳು ಅನಾವಶ್ಯಕವಾಗಿ ದೂರು ಸಲ್ಲಿಸಿ ನಮಗೆ ತೊಂದರೆ ಕೊಡುತ್ತಿದ್ದಾರೆ . ಎಪಿಎಂಸಿ ಮಾರುಕಟ್ಟೆಗೆ ಮಲೆನಾಡಿನಲ್ಲಿ ರೈತರು ಅಡಿಕೆ ಮಾರಾಟ ಮಾಡಿ ಅವರಿಗೆ ಅವಶ್ಯಕತೆ ಇರುವ ದಿನಸಿ ಸಾಮಾನುಗಳನ್ನು ಮತ್ತು ಪಶು ಆಹಾರ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು. ಎಪಿಎಂಸಿ ಪ್ರಾಂಗಣದಿಂದ ನಗರದ ವ್ಯಾಪಾರ ಸ್ಥಳ ಸುಮಾರು ನಾಲ್ಕರಿಂದ ಐದು ಕಿಮೀ ದೂರವಿದೆ. ಅಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಅಲ್ಲಿಗೆರೈತರು ಹೋಗಿ ದಿನಸಿ ಪದಾರ್ಥಗಳು ಮತ್ತು ಪಶು ಆಹಾರ ಖರೀದಿಸಲು ತೊಂದರೆಯಾಗುತ್ತದೆ. ಹೀಗಾಗಿ ಎಪಿಎಂಸಿ ಪ್ರಾಂಗಣದಲ್ಲಿ ಅವರಿಗೆ ಎಲ್ಲಾ ತರಹದ ಅನುಕೂಲವಾಗುವುದರಿಂದ ರೈತರು ಎಪಿಎಂಸಿ ಪ್ರಾಂಗಣಕ್ಕೆ ಬಂದು ವ್ಯವಹಾರ ಮಾಡುತ್ತಿ¨ªಾರೆ ಎಂದು ತಿಳಿಸಿದರು.

ನಾವು ಎಪಿಎಂಸಿ ಪ್ರಾಂಗಣದಲ್ಲಿ ಕೃಷಿ ಉತ್ಪನ್ನಗಳ ಜತೆಯಲ್ಲಿ ಅದಕ್ಕೆ ಪೂರಕ ವಸ್ತುಗಳಾದ ಖಾದ್ಯತೈಲ ಮತ್ತು ಗೋಧಿ ಪದಾರ್ಥಗಳಾದ ಗೋಧಿ ಹಿಟ್ಟು, ರವೆ, ಮೈದಾ ಮತ್ತು ಸಕ್ಕರೆ, ಉಪ್ಪು ಮತ್ತು ಪಶು ಆಹಾರಗಳಾದ ಹತ್ತಿ ಹಿಂದಡಿ, ಶೇಂಗಾ ಹಿಂಡಿ, ಗೋಧಿ ಬೂಸಾ ಮಾರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಇದರಿಂದಾಗಿ ರೈತರಿಗೆ ಮತ್ತು ಸಾಮಾನ್ಯ ಜನರಿಗೆ ಅನುಕೂಲವಾಗುತ್ತದೆ. ನಾವುಗಳು ಯಾವುದೇ ಕಾರಣಕ್ಕೂ ಎಪಿಎಂಸಿ ಪ್ರಾಂಗಣದಲ್ಲಿ ತಂಬಾಕು ಉತ್ಪನ್ನ, ರಾಸಾಯನಿಕ ವಸ್ತುಗಳನ್ನು ಮಾರಾಟ ಮಾಡುತ್ತಿಲ್ಲ ಎಂದು ಹೇಳಿದರು. ಎಪಿಎಂಸಿ ಸಮಿತಿಯವರು ಪೂರಕ ವಸ್ತುಗಳನ್ನು ಮಾರಾಟ ಮಾಡಲು ಅನುಮತಿ ನೀಡಿದರೂ ಸಹ ಎಪಿಎಂಸಿ ಅಧಿಕಾರಿಗಳು ನಮಗೆ ಪೂರಕ ವಸ್ತುಗಳನ್ನು ಮಾರಾಟ ಮಾಡಲು ಅವಕಾಶ ಕೊಡುತ್ತಿಲ್ಲ ಎಂದು ದೂರಿದರು.

ರಾಜ್ಯದ ಇತರೆ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆಯುತ್ತಿರುವಂತೆ ನಮಗೂ ಸಹ ವ್ಯಾಪಾರ ನಡೆಸಿಕೊಂಡು ಹೋಗಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರಲ್ಲದೆ, ನಮ್ಮ ವ್ಯವಹಾರದಿಂದ ಯಾವುದೇ ರೈತರಿಗೆ ಆಗಲಿ ಸಾರ್ವಜನಿಕರಿಗಾಗಿ ತೊಂದರೆಯಾಗುತ್ತಿಲ್ಲ ಎಂದು ಹೇಳಿದರು.

ರವಿ ಟ್ರೇಡರ್ಸ್‌, ಸುಬ್ರಹ್ಮಣ್ಯ ಸ್ಟೋರ್, ನವೀನ್‌ ಟ್ರೇಡರ್ಸ್‌, ನಿರಂಜನ ಟ್ರೇಡರ್ಸ್‌ ಕನ್ನಿಕಾ ಟ್ರೇಡರ್ಸ್‌, ಚಿದಾನಂದ ಟ್ರೇಡರ್ಸ್‌, ಮಂಜುನಾಥ ಟ್ರೇಡಿಂಗ್‌ ಕಂಪನಿ ವಿಕಾಸ್‌ ಟ್ರೇಡರ್ಸ್‌ನ ಮಾಲೀಕರು, ಕೆಲಸಗಾರರು ಹಾಗೂ ಎಪಿಎಂಸಿ ದಿನಸಿ ವರ್ತಕರ ಸಂಘದ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.