ಸಂಕೀರ್ಣ ಸ್ಥಿತಿಯಲ್ಲಿದೆ ಕಲೆ- ಸಾಹಿತ್ಯ


Team Udayavani, Feb 12, 2019, 11:40 AM IST

shiv-3.jpg

ಶಿವಮೊಗ್ಗ: ಕಲಿಯುಗ ಪರ್ವಕಾಲವಾಗಿದ್ದು, ಇಂತಹ ಕಾಲಘಟ್ಟದಲ್ಲೂ ರಾಮಾಯಣ, ಮಹಾಭಾರತ ಇಂದಿಗೂ ಪ್ರಸ್ತುತವಾಗಿದೆ. ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಸಂಕೀರ್ಣ ಕಾಲಘಟ್ಟದಲ್ಲಿದೆ. ಆದ್ದರಿಂದ ಗಮಕ ಸೇರಿದಂತೆ ನಾಡಿನ ಪಾರಂಪರಿಕ ಕಲೆಯನ್ನು ಉಳಿಸಿ ಬೆಳೆಸಲು ನಾವೆಲ್ಲಾ ಪ್ರಯತ್ನಿಸಬೇಕಾಗಿದೆ ಎಂದು ಭಟ್ನಾಗರ್‌ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ| ಎಂ.ಆರ್‌.ಎನ್‌. ಮೂರ್ತಿ ಹೇಳಿದರು.

ಗಮಕ ಕಲಾ ಪರಿಷತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಗಮಕ ಗ್ರಾಮವಾದ ತಾಲೂಕಿನ ಹೊಸಹಳ್ಳಿಯ ಗಮಕ ಭವನದಲ್ಲಿ ಭಾನುವಾರ ನಡೆದ 40ನೇ ವಾರ್ಷಿಕ ಗಮಕ ಸಪ್ತಾಹದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಾರಂಪರಿಕತೆಯ ಜೊತೆ-ಜೊತೆಗೆ ಅಧುನಿಕ ಸಂವಹನ ಮಾಧ್ಯಮಗಳನ್ನು ಬಳಿಸಿಕೊಂಡು ಗಮಕ ಕಲೆಯನ್ನು ಮುಂದಿನ ತಲೆಮಾರಿಗೆ ತಲುಪಿಸಿಬೇಕಾಗಿದೆ. ಇಂತಹ ಅತಿ ದೊಡ್ಡ ಜವಾಬ್ದಾರಿ ನಮ್ಮೆಲರ ಮೇಲಿದೆ. ಈ ಜವಾಬ್ದಾರಿಯನ್ನು ನಾವು ಸಮರ್ಪಕವಾಗಿ ನಿರ್ವಹಿಸುವ ಮೂಲಕ ನಾಡಿನ ಕಲಾ ಪರಂಪರೆಗೆ ಕೊಡುಗೆ ನೀಡಬೇಕಿದೆ ಎಂದರು.

ಮಾಹಿತಿ ತಂತ್ರಜ್ಞಾನದ ದಾಳಿಯಿಂದಾಗಿ ಇಂದಿನ ಯುವ ಪೀಳಿಗೆಯಲ್ಲಿ ಕಲಾಸಕ್ತಿ ಹೋಗುತ್ತಿದೆಯೇನೋ ಎಂಬ ಆತಂಕ ಕಾಡುತ್ತಿದೆ. ಐಟಿ ಕ್ಷೇತ್ರದಲ್ಲಿ ಕೈತುಂಬ ಸಂಪಾದನೆಯ ಕೆಲಸ ದೊರೆಯುತ್ತದೆ. ಆದರೆ ಕೇವಲ ಹಣ ಸಂಪಾದನೆ ಅಷ್ಟೇ, ಶ್ರೀಮಂತಿಕೆ ಅಲ್ಲ. ಕಲಾಸಕ್ತಿಯಲ್ಲೂ ಕೂಡ ಶ್ರೀಮಂತಿಕೆ ಮೆರೆದಾಗ ಮಾತ್ರ ಸಂಪೂರ್ಣ ವ್ಯಕ್ತಿತ್ವ ರೂಪಿಸಿಕೊಳಲು ಹಾಗೂ ರೂಢಿಸಿಕೊಳ್ಳಲು ಸಾಧ್ಯ. ನಾವು ಯಾವುದೇ ಕಾರಣಕ್ಕೂ ನಮ್ಮತನವನ್ನು ಕಳೆದುಕೊಳ್ಳಬಾರದು. ಅಲ್ಲದೆ ಕಲೆಯನ್ನು ಕೂಡ ಅಳಿಯಲು ಬಿಡಬಾರದು ಎಂದು ಹೇಳಿದರು.

ಸಮಾರೋಪ ಭಾಷಣ ಮಾಡಿದ ಮೈಸೂರಿನ ಖ್ಯಾತ ವಿದ್ವಾಂಸ ಡಾ| ಟಿ.ವಿ. ವೆಂಕಟಾಚಲ ಶಾಸ್ತ್ರಿ, ಕಾವ್ಯ ಬರೆಯುವಾಗ ಕವಿ ಛಂದಸ್ಸನ್ನು ಬಳಕೆ ಮಾಡಿರುತ್ತಾನೆ. ಛಂದಸ್ಸಿನ ಬಳಕೆಗೆ ಉದ್ದೇಶವಿರುತ್ತದೆ. ಗಮಕ ವಾಚನಕಾರರು ಛಂದಸ್ಸನ್ನು ಓದಿ ವ್ಯಾಖ್ಯಾನಿಸಬೇಕು. ಆಗ ಛಂದಸ್ಸಿನ ಬಗ್ಗೆ ತಿಳುವಳಿಕೆ ಬರುತ್ತದೆ. ಗಮಕ ಕಲೆಯಲ್ಲಿ ಇಂತಹ ಪ್ರಯೋಗ ಆಗಬೇಕೆಂದು ಆಶಿಸಿದರು.

ಇದೆ ಸಂದರ್ಭದಲ್ಲಿ ಖ್ಯಾತ ಗಮಕಿ ಬೆಂಗಳೂರಿನ ಶ್ರೀಮತಿ ಜಯರಾಮ್‌ ಅವರನ್ನು ಸನ್ಮಾನಿಸಲಾಯಿತು. ಕೀರ್ತಿಶೇಷ ಸೂರ್ಯನಾರಾಯಣ ಅವಧಾನಿ ಸ್ಮಾರಕ ಗಮಕವಾಚನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಮಹಿಮಾ ಕಶ‌್ಯಪ್‌, ದ್ವೀತಿಯ ಬಹುಮಾನ ಪಡೆದ ಪ್ರಸಾದ್‌ ಮತ್ತು ಸುಷ್ಮಿತ ಅವರಿಗೆ ಬಹುಮಾನ ವಿತರಿಸಲಾಯಿತು.

ಗಮಕ ಕಲಾ ಪರಿಷತ್‌ನ ಅಧ್ಯಕ್ಷ ಎಚ್.ಎಸ್‌. ಗೋಪಾಲ್‌, ರಾಜರಾಮ್‌ ಮೂರ್ತಿ ಇದ್ದರು. ಎಸ್‌. ನಾಗರಾಜ್‌ ನಿರೂಪಿಸಿದರು. ಡಾ| ವೆಂಕಟೇಶಮೂರ್ತಿ ವಂದಿಸಿದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.