ಕಲಾವಿದರಿಗೆ 5 ಸಾವಿರ ರೂ. ಧನಸಹಾಯಕ್ಕೆ ಮನವಿ
Team Udayavani, Apr 28, 2020, 7:06 PM IST
ಸಾಗರ: ಸಂಕಷ್ಟದಲ್ಲಿರುವ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ನವೆಂಬರ್ ತಿಂಗಳವರೆಗೂ ಕುಟುಂಬ ಜೀವನ ನಿರ್ವಹಣೆಗಾಗಿ ರಾಜ್ಯ ಸರ್ಕಾರದಿಂದ ತಿಂಗಳಿಗೆ ಕನಿಷ್ಟ 5 ಸಾವಿರ ರೂ. ಧನಸಹಾಯ ಒದಗಿಸುವಂತೆ ಸೋಮವಾರ ಕಲಾವಿದರು ಮತ್ತು ತಂತ್ರಜ್ಞರು ಉಪ ವಿಭಾಗಾಧಿಕಾರಿಗಳ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಲಾವಿದರು ಮತ್ತು ತಂತ್ರಜ್ಞರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ಕಲಾವಿದರು ನಾಟಕ, ಕಿರುಚಿತ್ರ, ಧಾರಾವಾಹಿ ಇನ್ನಿತರಗಳಲ್ಲಿ ಅಭಿನಯಿಸಿ, ಆರ್ಥಿಕ ಸಂಕಷ್ಟ ನಿವಾರಿಸಿಕೊಳ್ಳುವ ಕೆಲಸ ಮಾಡುತ್ತಿದ್ದರು. ಇನ್ನು ಕೆಲವು ಕಲಾವಿದರು ರಂಗಶಿಬಿರ, ನಾಟಕ ನಿರ್ದೇಶನ ಮೂಲಕ ಕ್ರಿಯಾಶೀಲರಾಗಿರುತ್ತಿದ್ದರು. ತಂತ್ರಜ್ಞರು ನಾಟಕ, ಧಾರಾವಾಹಿ, ಕಿರುಚಿತ್ರ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತಮ್ಮದೇ ರೀತಿಯಲ್ಲಿ ಬೆಳಕಿನ ವಿನ್ಯಾಸ, ಟ್ಯಾಬ್ಲೋ, ವೇದಿಕೆ ಸಜ್ಜುಗೊಳಿಸುವ ಕೆಲಸ ಮಾಡುವ ಮೂಲಕ ಆರ್ಥಿಕವಾಗಿ ಸ್ವಲ್ಪ ಹಣವನ್ನುಗಳಿಸುತ್ತಿದ್ದರು. ಆದರೆ ಕೊರೊನಾ ಲಾಕ್ಡೌನ್ ನಿಂದ ಅವೆಲ್ಲ ನಿಂತು ಹೋಗಿದ್ದು ಕಲಾವಿದರು ಮತ್ತು ತಂತ್ರಜ್ಞರ ಬದುಕು ಬೀದಿಗೆ ಬಿದ್ದಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಗಮನ ಹರಿಸಿರುವ ಯಡಿಯೂರಪ್ಪ ನೇತƒತ್ವದ ಸಭೆಯಲ್ಲಿ ಕಲಾವಿದರಿಗೆ 2 ಸಾವಿರ ರೂ. ಸಹಾಯಧನ ನೀಡುವ ಪ್ರಸ್ತಾಪ ಮಾಡಿದ್ದಾಗಿ ತಿಳಿದು ಬಂದಿದೆ. ಆದರೆ ಒಂದು ಬಾರಿ 2 ಸಾವಿರ ರೂ. ಧನಸಹಾಯ ಮಾಡುವುದರಿಂದ ಕಲಾವಿದರು, ತಂತ್ರಜ್ಞರ ಬದುಕು ಹಸನಾಗುವುದಿಲ್ಲ. 2 ಸಾವಿರ ರೂ. ಆರ್ಥಿಕ ಸಹಕಾರ ಯಾವುದೇ ಉಪಯೋಗಕ್ಕೆ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ನವೆಂಬರ್ವರೆಗಾದರೂ ಈಗಾಗಲೆ ಅರ್ಜಿ ಸಲ್ಲಿಸಿರುವ ಕಲಾವಿದರಿಗೆ ಕುಟುಂಬದ ಜೀವನ ನಿರ್ವಹಣೆಗಾಗಿ ಪ್ರತಿತಿಂಗಳು 5 ಸಾವಿರ ರೂ. ಆರ್ಥಿಕ ಸಹಕಾರ ನೀಡುವಂತೆ ಒತ್ತಾಯಿಸಲಾಗಿದೆ.
ಉಮಾಮಹೇಶ್ವರ ಹೆಗಡೆ, ಪುರುಷೋತ್ತಮ ತಲವಾಟ, ಎಚ್.ಬಿ. ರಾಘವೇಂದ್ರ, ಸಂತೋಷ ಶೇಟ್, ಗುರುಮೂರ್ತಿ ತಲವಾಟ, ಸೌಭಾಗ್ಯಮ್ಮ, ಶೋಭಾ ದೀಕ್ಷಿತ್, ಸಿ.ಟಿ. ಬ್ರಹ್ಮಾಚಾರ್, ಯೇಸು ಪ್ರಕಾಶ್, ಪ್ರಭಾಕರ ಸಾಂಶಿ, ಡಾ| ಸಿ.ಕೆ.ಮೂಕಪ್ಪ ನಾಯ್ಕ, ಪರಮೇಶ್ವರ ದೂಗೂರು ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ